ಫ‌ಲಪುಷ್ಪ ಪ್ರದರ್ಶನಕ್ಕೆ ಒಂದೇ ದಿನ ಲಕ್ಷಕ್ಕೂ ಹೆಚ್ಚು ಜನರ ಭೇಟಿ


Team Udayavani, Aug 14, 2017, 12:04 PM IST

lalbhag.jpg

ಬೆಂಗಳೂರು: ರಜಾ ದಿನವಾಗಿದ್ದ ಭಾನುವಾರ ಲಾಲ್‌ಬಾಗ್‌ ಪುಷ್ಪ ಪ್ರದರ್ಶನಕ್ಕೆ ಜನಸಾಗರವೇ ಹರಿದು ಬಂದಿದ್ದು, 1.08 ಲಕ್ಷಕ್ಕೂ ಅಧಿಕ ಜನ ಪ್ರದರ್ಶನ ವೀಕ್ಷಿಸಿದರು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಜಗದೀಶ್‌ ತಿಳಿಸಿದ್ದಾರೆ.

ಫ‌ಲಪುಷ್ಪ ಪ್ರದರ್ಶನದ ಸಾಕ್ಷ್ಯಾಚಿತ್ರ ತಯಾರಿಸುವ ಉದ್ದೇಶದಿಂದ ತೋಟಗಾರಿಕೆ ಇಲಾಖೆ ಡ್ರೋಣ್‌ ಕ್ಯಾಮೆರಾ ಬಳಸಿ ಫೋಟೋ ಶೂಟ್‌ ಮಾಡಿಸಿದ್ದು, ವಿಶೇಷ. ಜತೆಗೆ ಹಿರಿಯ ಹವ್ಯಾಸಿ ಅಂಚೆ ಚೀಟಿ ಸಂಗ್ರಹಕಾರ ಎಂ.ಆರ್‌.ಪ್ರಭಾಕರ್‌ ಅವರು, ವಿಶ್ವದ ವಿವಿಧ ದೇಶಗಳ ಹೂವು, ಹಕ್ಕಿ ಮತ್ತು ಮಹಾನ್‌ ಸಾಧಕರ ಸ್ಟಾಂಪ್‌ಗ್ಳನ್ನು ಬಳಸಿ ವಿಶ್ವಮಾನವ ಕುವೆಂಪು ಅವರ ಮುಖದ ಕಲಾಕೃತಿ ರಚಿಸಿ ಪ್ರದರ್ಶಿಸಿ ಗಮನ ಸೆಳೆದರು. 

ವಾಟಾಳ್‌ ಭೇಟಿ: ಭಾನುವಾರ ಬೆಳಿಗ್ಗೆ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಮುಖಂಡ ವಾಟಾಳ್‌ ನಾಗರಾಜ… ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ, ಕುವೆಂಪು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ರಾಷ್ಟ್ರಕವಿ ಕುವೆಂಪು ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೋದೊಂದಿಗೆ ಬಂದಿದ್ದ ಅವರು, “ಲಾಲ್‌ಬಾಗ್‌ನಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮಗ್ರ ದರ್ಶನ ಅದ್ಭುತವಾಗಿದೆ. ಇದನ್ನೆಲ್ಲಾ ನೋಡಿದರೆ ನನ್ನ ಜನ್ಮ ಸಾರ್ಥಕ ಎನ್ನಿಸುತ್ತಿದೆ,’ ಎಂದು ನುಡಿದರು. ಸಂಜೆ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗಡೆ ಭೇಟಿ ನೀಡಿ ಕುವೆಂಪು ಅವರ ಜೀವನ ದರ್ಶನ ಮಾಡಿದರು. ತೋಟಗಾರಿಕೆ ಇಲಾಖೆ ಮತ್ತು ಕುವೆಂಪು ಪ್ರತಿಷ್ಠಾನಗಳು ಸಾರ್ಥಕ ಕೆಲಸ ಮಾಡಿವೆ ಎಂದು ಶ್ಲಾ ಸಿದರು. 

ವಿಶ್ವಮಾನವ ಗೀತೆ
ಕಲಾವಿದ ಜಾನ್‌ ದೇವರಾಜ್‌ ಅವರು, ಸ್ಥಳೀಯ ಕಲಾವಿದರು ಮತ್ತು ಜಪಾನ್‌ ಕಲಾವಿದರಿಂದ ದಿನವಿಡೀ ವಿಶ್ವಮಾನ ಗೀತೆಯನ್ನು ಕನ್ನಡ, ಇಂಗ್ಲಿಷ್‌ ಮತ್ತು ಜಪಾನ್‌ ಭಾಷೆಗಳಲ್ಲಿ ಪ್ರಸ್ತುತಪಡಿಸಿದ್ದು, ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. 

ಪುಷ್ಪ ಪ್ರದರ್ಶನಕ್ಕೆ ಸಾಗರೋಪಾದಿಯಲ್ಲಿ ಜನ ಆಗಮಿಸಿದ್ದರು. ಸುಮಾರು 77,800 ವಯಸ್ಕರು, 17,050 ಶಾಲಾ ಮಕ್ಕಳು, 7,500 ಪಾಸ್‌ ಹೊಂದಿದ್ದವರು ಮತ್ತು 5,801 ಮಕ್ಕಳು ಭಾನುವಾರ ಪ್ರದರ್ಶನ ವೀಕ್ಷಿಸಿದ್ದಾರೆ. ಟಿಕೇಟ್‌ ಶುಲ್ಕದಿಂದ 47.84 ಲಕ್ಷ ರೂ. ಸಂಗ್ರಹವಾಗಿದೆ. ಒಟ್ಟಾರೆ 8 ದಿನಗಳಲ್ಲಿ 1.34 ಕೋಟಿ ರೂ. ಸಂಗ್ರಹವಾಗಿದ್ದು, 3.20 ಲಕ್ಷ ಜನ ಭೇಟಿ ನೀಡಿದ್ದಾರೆ.
-ಡಾ.ಜಗದೀಶ್‌, ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ

ಇಂದಿನ ಆಕರ್ಷಣೆ
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ದೊರೆತು 50 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಆ.14ರಂದು ಲಾಲ್‌ಬಾಗ್‌ನಲ್ಲಿ ರಾಷ್ಟ್ರಕವಿ ಕುವೆಂಪು ಸ್ಮರಣಾರ್ಥ ರಾಜ್ಯಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದೆ. ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಗೋಷ್ಠಿ ಉದ್ಘಾಟಿಸುವರು. ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅಧ್ಯಕ್ಷತೆ ವಹಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್‌.ಜಿ.ಸಿದ್ದರಾಮಯ್ಯ ಉಪಸ್ಥಿತರಿರುವರು.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.