500 ಕಡೆ ಶೀಘ್ರ ಆಕ್ಸಿಜನ್‌ ಜನರೇಟರ್‌


Team Udayavani, May 22, 2021, 2:06 PM IST

Oxygen Generator

ಬೆಂಗಳೂರು:18ರಿಂದ44 ವರ್ಷ ವಯೋಮಿತಿಯೊಳಗಿನ ಮುಂಚೂಣಿ ಕಾರ್ಯಕರ್ತರಿಗೆ ಇಂದಿನಿಂದ (ಮೇ 22) ಕೋವಿಡ್‌ ಲಸಿಕೆಕೊಡಲಾಗುವುದು. ಒಂದೆರಡು ತಿಂಗಳಲ್ಲಿ ರಾಜ್ಯದ 500 ಕಡೆ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ರಾಜ್ಯಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಶುಕ್ರವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಸಿಕೆ ನೀಡಲು ಅದರ ಮೇಲೆವ್ಯವಸ್ಥಿತ ನಿಗಾ ಇರಿಸಲು ಪ್ರತ್ಯೇಕ ಸಾಫ್ಟ್ವೇರ್‌ಅಭಿವೃದ್ಧಿ ಮಾಡಲಾಗಿದ್ದು, ಅದನ್ನು ಕೋವಿನ್‌ಪೋರ್ಟಲ್‌ ಜತೆ ಲಿಂಕ್‌ ಮಾಡಲಾಗುತ್ತಿದೆ. ಜೂನ್‌ 1ರಿಂದ ಈ ಪೋರ್ಟಲ್‌ ಕೆಲಸಮಾಡಲಿದೆ ಎಂದರು.

ರಾಜ್ಯದಲ್ಲಿ 1,90,000 ಜನರಿಗೆ ಈಗಕೊವ್ಯಾಕ್ಸಿನ್‌ ಸೆಕೆಂಡ್‌ ಡೋಸ್‌ ಕೊಡಬೇಕಿದೆ.ಇದರಲ್ಲಿ 1,70,000 ಕೊವ್ಯಾಕ್ಸಿನ್‌ ಲಸಿಕೆಸಿದ್ಧವಿದ್ದು, ಈಗಾಗಲೇಕೊಡಲು ಪ್ರಾರಂಭಿಸಲಾಗಿದೆ. ಕೋವಿಶೀಲ್ಡ್  ಕೂಡ ಸ್ಟಾಕ್‌ ಇದೆ. ಲಸಿಕೆಅಭಿಯಾನ ತೀವ್ರಗೊಳಿಸಲು ಮುಂಚೂಣಿಯಕಾರ್ಯಕರ್ತರ ಪಡೆ ಸಂಖ್ಯೆಯನ್ನುಹೆಚ್ಚಿಸಲಾಗುತ್ತಿದ್ದು, ಆದ್ಯತೆಯ ಮೇಲೆಅವರೆಲ್ಲರಿಗೂ ಲಸಿಕೆ ಕೊಡಲಾಗುತ್ತಿದೆ ಎಂದುಮಾಹಿತಿ ನೀಡಿದರು.

ಶನಿವಾರದಿಂದ ಮಾಧ್ಯಮ ಸಿಬ್ಬಂದಿ,ಚಿತಾಗಾರ ಸಿಬ್ಬಂದಿ, ವಿಕಲಚೇತನರು, ಆರೋಗ್ಯಕಾರ್ಯಕರ್ತರು ಮತ್ತವರ ಕುಟುಂಬಸದಸ್ಯರು,ಕೋವಿಡ್‌ ಕೆಲಸಕ್ಕೆ ನಿಯೋಜನೆಗೊಂಡಿರುವಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ವಿದ್ಯುತ್‌ಮತ್ತು ನೀರು ಪೂರೈಕೆ ಸಿಬ್ಬಂದಿಗೆ ವ್ಯಾಕ್ಸಿನ್‌ಕೊಡಲಾಗುವುದು ಎಂದು ಡಿಸಿಎಂ ತಿಳಿಸಿದರು.500 ಆಕ್ಸಿಜನ್‌ ಜನರೇಟರ್‌: ಒಂದೆರಡುತಿಂಗಳಲ್ಲಿಯೇ ರಾಜ್ಯದ ಎಲ್ಲೆಡೆ 400ರಿಂದ 500ಆಕ್ಸಿಜನ್‌ ಜನರೇಟರ್‌ಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಮುದಾಯ ಆರೋಗ್ಯ ಕೇಂದ್ರಹಾಗೂತಾಲೂಕುಆಸ್ಪತ್ರೆಗಳಲ್ಲಿಸ್ಥಾಪಿಸಲಾಗುವುದು.ಅಲ್ಲಿಯೂ ಐಸಿಯುಗಳನ್ನು ಹಾಕುತ್ತಿದ್ದೇವೆ ಎಂದು ಹೇಳಿದರು.

ಬ್ಲ್ಯಾಕ್ ‌ಫಂಗಸ್‌ಗೆ ಔಷಧಿ: ಬ್ಲ್ಯಾಕ್ ‌ಫಂಗಸ್‌ಬೇರೆ ರಾಜ್ಯಗಳಲ್ಲಿ ಮೊದಲು ಕಂಡು ಬಂದಿತ್ತು.ನಮ್ಮಲ್ಲಿ ಈಗ ಕಂಡುಬಂದಿದೆ. ಈಗ ಒಂದುನಿರ್ದಿಷ್ಟ ಔಷಧಿಗೆ ಬೇಡಿಕೆ ಬಂದಿದೆ. ಆದರೆ,ಇದಕ್ಕೆ ಹಲವಾರು ಔಷಧಿಗಳಿದ್ದರೂ ಜನರುಮಾತ್ರ ಭಿಲೈಸೋಸೋಮಲ್‌ ಅಮಪೋಟೆರಿಸನ್‌ಭಿ ಔಷಧಿಯನ್ನೇ ಕೇಳುತ್ತಿದ್ದಾರೆ.

ಭಿಲೈಸೋಸೋಮಲ್‌ ಅಮಪೋಟೆರಿಸನ್‌-ಭಿಸೇರಿ ಪರ್ಯಾಯ ಔಷಧ ಇದ್ದರೂ ಜನರುಅದಕ್ಕೇ ಮುಗಿಬೀಳುತ್ತಿದ್ದಾರೆ. ಮೆಡಿಕಲ್‌ಸ್ಟೋರ್‌ಗಳಲ್ಲಿಯೂ ಪರ್ಯಾಯ ಔಷಧಿಗಳುಸಿಗುತ್ತಿವೆ. ಈ ತಿಂಗಳ 14ರಂದು ಭಿಲೈಸೋಸೋಮಲ್‌ ಅಮಪೋಟೆರಿಸನ್‌ಭಿ ಔಷಧಿಗೆಬೇಡಿಕೆ ಸಲ್ಲಿಸಿದ್ದೇವೆ ಎಂದರು.

ಔಷಧ ಹಂಚಿಕೆಯಲ್ಲಿ ತಾರತಮ್ಮ ಇಲ್ಲ: ರಾಜ್ಯಕ್ಕೆಔಷಧಿ ಹಂಚಿಕೆಯಲ್ಲಿ ಕೇಂದ್ರ ಸರಕಾರತಾರತಮ್ಯ ಎಸಗಿದೆ ಎಂಬ ಆರೋಪವನ್ನುತಳ್ಳಿಹಾಕಿದ ಡಾ.ಅಶ್ವತ್ಥನಾರಾಯಣ, ಮಹಾರಾಷ್ಟ್ರ, ಗುಜರಾತ್‌ ಮುಂತಾದ ರಾಜ್ಯಗಳಲ್ಲಿ ಜನವರಿಯಿಂದಲೇ 2ನೇ ಅಲೆ ಆರಂಭವಾಯಿತು. ರಾಜ್ಯದಲ್ಲಿ ಏಪ್ರಿಲ್‌ನಿಂದ ಶುರುವಾಯಿತು. ಅಲ್ಲೆಲ್ಲ ಸೋಂಕಿತರು ಹೆಚ್ಚಾದ ಕಾರಣ ಮೊದಲು ಆದ್ಯತೆಯ ಮೇರೆಗೆ ಔಷಧಿ,ಆಕ್ಸಿಜನ್‌, ರೆಮ್‌ಡೆಸಿವಿಯರ್‌ಗಳನ್ನು ಕೇಂದ್ರ ಆರಾಜ್ಯಗಳಿಗೆ ಪೂರೈಕೆ ಮಾಡಿತು ಎಂದರು.

ಸುದ್ದಿಗೋಷ್ಠಿಯಲ್ಲಿ  ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಯಲಹಂಕ  ಶಾಸಕ ಮತ್ತು ಬಿಡಿಎ ಅಧ್ಯಕ್ಷಎಸ್‌.ಆರ್‌.ವಿಶ್ವನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.