ಶ್ರೀಗಳ ಬದುಕೇ ದಾರಿದೀಪ


Team Udayavani, Jan 12, 2020, 3:07 AM IST

srigala

ಬೆಂಗಳೂರು: ಜನ ಸೇವೆಯೇ ಜನಾರ್ಧನ ಸೇವೆ ಎಂದು ಕೊಂಡಿದ್ದ ಪೇಜಾವರ ಶ್ರೀಗಳು ದಲಿತರ ಮತ್ತು ಶೋಷಿತರ ಒಳಿತಿಗಾಗಿ ಶ್ರಮಿಸಿದ್ದರು. ಅವರ ಜೀವನ ನಮಗೆ ದಾರಿ ದೀಪ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿದ್ದಾರೆ. ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಪೇಜಾವರ ಶ್ರೀ ವಿಶ್ವೇಶ ತೀರ್ಥರಿಗೆ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಧ್ಯಾತ್ಮ ಮತ್ತು ಸಮಾಜ ಸೇವೆಯ ಸಂಗಮವಾಗಿದ್ದ ಶ್ರೀಗಳು ಜೀವನ ಪೂರ್ತಿ ದಲಿತರು ಮತ್ತು ಶೋಷಿತರ ಒಳಿತಿಗಾಗಿ ಶ್ರಮಿಸಿದರು. ನಾಡು, ನುಡಿ ಹಾಗೂ ಧರ್ಮದ ವಿಚಾರದಲ್ಲಿ ಅವರು ಮಾರ್ಗ ದರ್ಶಕರಂತಿದ್ದರು ಎಂದು ಹೇಳಿದರು. ಸಂಕಷ್ಟಗಳಿಗೆ ಮಿಡಿಯುತ್ತಿದ್ದ ಅವರು ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಾಜ್ಯವಷ್ಟೇ ಅಲ್ಲ, ಆಂಧ್ರಪದೇಶ, ಮಹಾರಾಷ್ಟ್ರ ಮತ್ತು ತಮಿಳುನಾಡು ಸೇರಿ ಹಲವು ಪ್ರದೇಶಗಳಿಗೆ ತೆರಳಿ ಸಂತ್ರಸ್ತರ ಕಣ್ಣೀರು ಒರೆಸಿದರು ಎಂದು ತಿಳಿಸಿದರು.

ರಾಮ ಜನ್ಮಭೂಮಿ ಹೋರಾಟದಲ್ಲಿ ಶ್ರೀಗಳ ಕೊಡುಗೆ ಅಪಾರ. ಶ್ರೀರಾಮ ಸೇತು ಆಂದೋಲನ, ಗೋಹತ್ಯೆ ನಿಷೇಧ, ಅಸ್ಪೃಶ್ಯತೆ ನಿವಾರಣೆ, ಪಶ್ಚಿಮ ಘಟ್ಟ- ನೇತ್ರಾವತಿ ನದಿ ಸಂರಕ್ಷಣೆ ಸೇರಿದಂತೆ ಅನೇಕ ಜನಪರ ಯೋಜನೆಗಳ ಆಂದೋಲನಗಳಲ್ಲಿ ಸಕ್ರಿಯ ವಾಗಿ ಭಾಗವಹಿಸಿದ್ದರು ಎಂದು ಹೇಳಿದರು.

ಶ್ರೀಗಳು ಸ್ಥಾಪಿಸಿದ ಪೂರ್ಣಪ್ರಜ್ಞ ವಿದ್ಯಾಪೀಠ ಇಂದು ರಾಷ್ಟ್ರೀಯ ಸಂಸ್ಥೆಯಾಗಿ ಬೆಳೆದಿದೆ. ಶ್ರೀಕೃಷ್ಣನಲ್ಲಿ ಐಕ್ಯರಾಗಿರುವ ಶ್ರೀಗಳ ವಿಚಾರಧಾರೆ ನಮಗೆ ಚೈತನ್ಯವಾಗಲಿ. ಅವರ ಉತ್ತರಾಧಿಕಾರಿಯಾಗಿರುವ ಈಗಿನ ಶ್ರೀಗಳು ಜನ ಸೇವೆಯೇ ಜನಾರ್ಧನ ಸೇವೆ ಎಂದು ತಿಳಿದು ಸಾಗಲಿ ಎಂದು ಹೇಳಿದರು.

ಯೋಗ ಗುರು ಬಾಬಾ ರಾಮ್‌ದೇವ್‌ ಮಾತನಾಡಿ, ಪೇಜಾವರ ಶ್ರೀಗಳದ್ದು ಬ್ರಹ್ಮ ಸದೃಶ್ಯ ವ್ಯಕ್ತಿತ್ವ. ಧರ್ಮವನ್ನು ತಮ್ಮ ಜೀವನದಲ್ಲಿ ಆಚರಣೆಗೆ ಮಾಡಿದ ಅವರು ಪ್ರೇಮ, ವಾತ್ಸಲ್ಯ, ಕರುಣೆಯನ್ನು ಜನರಿಗೆ ನೀಡಿದ್ದಾರೆ ಎಂದು ಹೇಳಿದರು. ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಸಚಿವರಾದ ವಿ.ಸೋಮಣ್ಣ, ಆರ್‌.ಅಶೋಕ್‌, ಸಂಸದೆ ಶೋಭಾ ಕರಂದ್ಲಾಜೆ ಇತರರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.