ಆಯೋಗದ ವಿರುದ್ಧ ಜನರ ಆಕ್ರೋಶ


Team Udayavani, Apr 20, 2019, 3:00 AM IST

Udayavani Kannada Newspaper

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಉದ್ದೇಶಪೂರ್ವಕವಾಗಿ ಹೆಸರು ತೆಗೆಯಲಾಗಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಗುರುವಾರ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನದ ವೇಳೆ ಬಿಬಿಎಂಪಿ ವ್ಯಾಪ್ತಿಯ ಮೂರು ಕ್ಷೇತ್ರಗಳಲ್ಲಿ ಹೆಚ್ಚಿನ ಜನರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಕೆಲವೆಡೆ ಸಾರ್ವಜನಿಕರು ಮತಗಟ್ಟೆಗಳಲ್ಲೇ ಅಧಿಕಾರಗಳೊಂದಿಗೆ ವಾಗ್ವಾದ ನಡೆಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಮತದಾನ ಸಹ ಮಾಡಲಾಗಿದೆ. ಕೇವಲ ಒಂದು ವರ್ಷದಲ್ಲಿ ಪಟ್ಟಿಯಿಂದ ಹೆಸರನ್ನು ಯಾವ ಆಧಾರದ ಮೇಲೆ ತೆಗೆಯುತ್ತಾರೆ. ಇನ್ನು ಮನೆಯಲ್ಲಿ ಇಬ್ಬರ ಹೆಸರಿದ್ದರೆ, ಇನ್ನಿಬ್ಬರ ಹೆಸರು ಕಾಣೆಯಾಗಿವೆ ಎಂಬ ಸಾರ್ವಜನಿಕರ ಪ್ರಶ್ನೆಗಳಿಗೆ ಆಯೋಗದ ಬಳಿ ಉತ್ತರವಿಲ್ಲ.

ಆಯೋಗದಿಂದಲೇ ಸಂದೇಶ: ಇನ್ನು ಕೆಲ ಮತದಾರರು ಆಯೋಗದ ಸಹಾಯವಾಣಿ 1950ಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಈ ವೇಳೆ ಆಯೋಗದಿಂದಲೇ ಮತದಾರರಿಗೆ ಇಂತಹ ಮತಗಟ್ಟೆಯಲ್ಲಿ ನೀವು ಮತ ಚಲಾಯಿಸಬೇಕು ಎಂಬ ಸಂದೇಶ ಮತಗಟ್ಟೆಯ ವಿಳಾಸ ಸಮೇತ ಬಂದಿದೆ. ಹೀಗಿದ್ದರೂ ಮತಗಟ್ಟೆಯಲ್ಲಿನ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವ ಬಗ್ಗೆ ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೇ ರಾಜಕೀಯ ಉದ್ದೇಶಕ್ಕಾಗಿ ಹತ್ತಾರು ಸಾವಿರ ಮತದಾರರ ಹೆಸರುಗಳನ್ನು ತೆಗೆಸಿರುವ ಬಗ್ಗೆ ಸಾರ್ವಜನಿಕರು ಆರೋಪಿಸಿದ್ದರೆ. ಜತೆಗೆ, ಉದ್ದೇಶಪೂರ್ವಜಕವಾಗಿ ಪಟ್ಟಿಯಿಂದ ಹೆಸರು ಬಿಟ್ಟುಹೋಗಿರುವ ಮತದಾರರಿಗೆ ಮತ್ತೂಮ್ಮೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪಕ್ಷಗಳಿಗೆ ಮೊದಲೇ ಪಟ್ಟಿ ನೀಡಲಾಗಿತ್ತು: ಆಯೋಗದ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಂತೆ “ಉದಯವಾಣಿ’ ಜತೆ ಮಾತನಾಡಿದ ನಗರ ಜಿಲ್ಲಾ ಚುನಾವಣಾಧಿಕಾರಿ ಎನ್‌.ಮಂಜುನಾಥ ಪ್ರಸಾದ್‌, ಆಯೋಗದಿಂದ ಎರಡು ಮೂರು ಬಾರಿ ಮತದಾರರ ಪಟ್ಟಿ ಪ್ರಕಟಿಸಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯಿಂದ ತೆಗೆದವರ ವಿವರ ಹಾಗೂ ಅಂತಿಮ ಪಟ್ಟಿ ನೀಡಲಾಗಿತ್ತು. ಆಗ ಯಾವುದೇ ಚಕಾರವೆತ್ತದೆ ಚುನಾವಣೆ ದಿನ ಆರೋಪಿಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಸ್ಪಷ್ಟಪಡಿಸಿದರು.

ಚುನಾವಣಾ ಆಯೋಗದಿಂದ ಯಾವುದೇ ಮತದಾರರ ಹೆಸರನ್ನು ಏಕಾಏಕಿ ತೆಗೆದಿಲ್ಲ. ಬದಲಿಗೆ ಅಧಿಕಾರಿಗಳು ಪ್ರತಿಯೊಂದು ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅಕ್ಕ-ಪಕ್ಕದವರಿಂದ ಮಾಹಿತಿ ಪಡೆದ ನಂತರವೇ ಹೆಸರುಗಳನ್ನು ತೆಗೆದಿದ್ದಾರೆ. ಅದರ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಂದ ಸುಮಾರು 2 ಲಕ್ಷ ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಚುನಾವಣಾ ಆಯೋಗದಿಂದ 2018ರಲ್ಲಿಯೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಆ ನಂತರ ಹಲವು ಬಾರಿ ಪರಿಷ್ಕರಣೆ ಮಾಡಲಾಗಿತ್ತು. ಜ.16ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ಬಳಿಕ ಯಾವುದೇ ಹೆಸರುಗಳನ್ನು ಪಟ್ಟಿಯಿಂದ ತೆಗೆದಿಲ್ಲ. ಆ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿತ್ತು ಎಂದು ಹೇಳಿದರು.

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.