ಮಹಿಳಾ ಆಸನ ಅತಿಕ್ರಮಣ ತಡೆಗೆ ಪಿಂಕ್‌ ಸೀಟ್‌


Team Udayavani, Nov 29, 2017, 11:35 AM IST

Pink-Seat.jpg

ಬೆಂಗಳೂರು: ಪಿಂಕ್‌ ಟ್ಯಾಕ್ಸಿ ಹಳೆಯದಾಯ್ತು. ಪಿಂಕ್‌ ಹೊಯ್ಸಳ ಬಂದಾಯ್ತು. ಇನ್ಮುಂದೆ ಬಸ್‌ಗಳಲ್ಲಿ ಪಿಂಕ್‌ ಸೀಟ್‌ಗಳು ಬರಲಿವೆ! “ಮಹಿಳೆಯರಿಗೆ’ ಎಂದು ಬರೆದಿದ್ದರೂ ಕೆಲ ಗಂಡಸರು ಆ ಆಸನಗಳಲ್ಲಿ ಕೂರುವುದು ಮಾಮೂಲು. ಆದ್ದರಿಂದ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗಾಗಿ ಮೀಸಲಿರುವ ಆಸನಗಳನ್ನು ಪಿಂಕ್‌ ಬಣ್ಣಕ್ಕೆ ಪರಿವರ್ತಿಸುವುದಾಗಿ ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಚೆಗೆ ಮಂಗಳೂರಿನಲ್ಲಿ ಮಹಿಳೆಯರಿಗೆ ಮೀಸಲಿಟ್ಟ ಆಸನದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಯುವಕನನ್ನು ಎಬ್ಬಿಸಲು ಮಹಿಳೆಯೊಬ್ಬರು ಆತನೊಂದಿಗೆ ವಾಗ್ವಾದ ನಡೆಸಬೇಕಾಯಿತು. ಮಾಗಡಿಯಲ್ಲೂ ಇಂಥದ್ದೇ ಘಟನೆ ನಡೆದಿದೆ. ಇಂತಹ ದೂರುಗಳು ಹೆಚ್ಚಾಗಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಬರುವ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಮೀಸಲಿಟ್ಟ ಆಸನಗಳು ಗುಲಾಬಿ ಬಣ್ಣದಲ್ಲೇ ಬರಲಿವೆ ಎಂದು ತಿಳಿಸಿದರು. 

ಉಳಿದ ನಿಗಮಗಳಿಗೂ ವಿಸ್ತರಣೆ?: ಇನ್ನು ಈಗಾಗಲೇ ಇರುವ ಬಸ್‌ಗಳಲ್ಲಿನ ಮಹಿಳೆಯರ ಆಸನಗಳನ್ನು ಹಂತ-ಹಂತವಾಗಿ ಗುಲಾಬಿ ಬಣ್ಣಕ್ಕೆ ಪರಿವರ್ತಿಸಲಾಗುವುದು. ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಕೆಎಸ್‌ಆರ್‌ಟಿಸಿ ಸೇರಿದಂತೆ ಉಳಿದ ಮೂರೂ ಸಾರಿಗೆ ಸಂಸ್ಥೆಗಳಲ್ಲೂ “ಪಿಂಕ್‌ ಆಸನ’ಗಳು ಕಾಣಿಸಿಕೊಳ್ಳಲಿವೆ. ಇದು ಶಾಶ್ವತ ಪರಿಹಾರ ಎಂದಲ್ಲ, ಬದಲಿಗೆ ವಿಶೇಷ ಬಣ್ಣದ ಆಸನವಿದ್ದರೆ ಪುರುಷರು ಅದರಲ್ಲಿ ಕುಳಿತುಕೊಳ್ಳಲು ಹಿಂಜರಿಯಬಹುದು ಎಂಬ ವಿಶ್ವಾಸ ನಮ್ಮದು ಎಂದು ಹೇಳಿದರು.

ಇಂದಿರಾ ಪಾಸು: ಇಂದಿರಾ ಸಾರಿಗೆ ಜತೆಗೆ ನಗರದಲ್ಲಿರುವ ಮಹಿಳಾ ಕಟ್ಟಡ ಕಾರ್ಮಿಕರಿಗೆ “ಇಂದಿರಾ ಪಾಸು’ ಪರಿಚಯಿಸಲಾಗುತ್ತಿದೆ ಎಂದು ಇದೇ ವೇಳೆ ಸಚಿವ ಎಚ್‌.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಸುಮಾರು 2 ಲಕ್ಷ ಮಹಿಳಾ ಕಟ್ಟಡ ಕಾರ್ಮಿಕರು ಇರಬಹುದು ಎಂದು ಅಂದಾಜಿಸಲಾಗಿದೆ.

ಅವರೆಲ್ಲರಿಗೂ ರಿಯಾಯ್ತಿ ದರದಲ್ಲಿ ಇಂದಿರಾ ಪಾಸು ನೀಡಲಾಗುವುದು. ಆದರೆ, ಇಂದಿರಾ ಸಾರಿಗೆ ಮತ್ತು ಪಾಸಿನ ದರ ಎಷ್ಟಿರಬೇಕು? ಯೋಜನೆಗಾಗಿ ಆರ್ಥಿಕ ಕ್ರೋಡೀಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಇನ್ನೂ ಚರ್ಚೆ ಆಗಬೇಕಿದೆ ಎಂದರು. 

ಡಿ.2ರಂದು ಇಂದಿರಾ ಕ್ಲಿನಿಕ್‌ ಸೇವೆ ಆರಂಭ: ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ ಮತ್ತು ಯಶವಂತಪುರ ಟಿಟಿಎಂಸಿಯಲ್ಲಿ ಡಿ. 2ರಿಂದ “ಇಂದಿರಾ ಕ್ಲಿನಿಕ್‌’ ಸೇವೆ ಆರಂಭಗೊಳ್ಳಲಿದೆ ಎಂದು ಬಿಎಂಟಿಸಿ ಅಧ್ಯಕ್ಷ ಎಂ. ನಾಗರಾಜ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಈ ನಿಲ್ದಾಣಗಳಲ್ಲಿರುವ ಕ್ಲಿನಿಕ್‌ಗಳು ಬಿಎಂಟಿಸಿ ಸಿಬ್ಬಂದಿಗೆ ಸೀಮಿತವಾಗಿವೆ.

ಪ್ರಸ್ತುತ ಅವುಗಳಲ್ಲಿ ಪ್ರಯಾಣಿಕರಿಗೂ ಸೇವೆ ನೀಡಲಾಗುವುದು. ಇಲ್ಲಿ ಒಬ್ಬ ಮೆಡಿಕಲ್‌ ಪ್ರಾಕ್ಟೀಷನರ್‌ ಮತ್ತೂಬ್ಬ ಟೆಕ್ನೀಷಿಯನ್‌ ಇರುತ್ತಾರೆ. ರೋಗಿಗಳಿಗೆ ಇಲ್ಲಿ ಉಚಿತವಾಗಿ ಔಷಧ ನೀಡಲಾಗುತ್ತದೆ. ಜನರಿಕ್‌ ಔಷಧಗಳ ವಿತರಣೆಗೂ ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದರು. 

ಒಂದು ಪಾಳಿ ಸೇವೆ: ಇಂದಿರಾಗಾಂಧಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಡಿ.2ರಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಲಿನಿಕ್‌ ಲೋಕಾರ್ಪಣೆ ಮಾಡಲಿದ್ದು, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್‌, ರಮೇಶ್‌ಕುಮಾರ್‌ ಭಾಗವಹಿಸುವರು. ಆರಂಭದಲ್ಲಿ ಕ್ಲಿನಿಕ್‌ಗಳು ಒಂದು ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಜನರ ಸ್ಪಂದನೆ ನೋಡಿಕೊಂಡು ಸೇವಾವಧಿ ವಿಸ್ತರಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

tirupatiTirupati; Even in controversy, 14 lakh laddus were sold in 4 days

Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Power-Plant

Power Generation: ರಾಜ್ಯದ ಮೊದಲ ನೈಸರ್ಗಿಕ ಅನಿಲ ವಿದ್ಯುತ್‌ ಸ್ಥಾವರ ಲೋಕಾರ್ಪಣೆ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

4

Arrested: ವಿಲ್ಲಾಗಳಿಗೆ ರಾತ್ರಿ ಕನ್ನ ಹಾಕುತ್ತಿದ್ದ ತ್ರಿಪುರ ಯುವಕ

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.