ನಕಲಿ ಕಾರ್ಮಿಕರ ಪತ್ತೆಗೆ ಪ್ಲಾನಿಂಗ್‌


Team Udayavani, Sep 23, 2018, 12:58 PM IST

nakali.jpg

ಬೆಂಗಳೂರು: ನಕಲಿ ಪೌರಕಾರ್ಮಿಕರ ಹಾವಳಿ ತಪ್ಪಿಸಲು ಹಾಗೂ ಪೌರಕಾರ್ಮಿಕರ ಮೇಲ್ವಿಚಾರಣೆಗಾಗಿ ಬಿಬಿಎಂಪಿ “ಮೈಕ್ರೋ ಪ್ಲಾನಿಂಗ್‌’ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ. 

ಜತೆಗೆ ಸಾರ್ವಜನಿಕರಿಗೆ ಅವರ ಏರಿಯಾ, ಮನೆ ಮುಂದೆ ಕಸ ಗುಡಿಸಲು ಬರುವ ಪೌರಕಾರ್ಮಿಕರು ಯಾರು ಎಂಬುದೂ ಸೇರಿದಂತೆ ಕಸ ಸಂಗ್ರಹಿಸಲು ಬರುವ ಆಟೋ ಟಿಪ್ಪರ್‌ಗಳು ಹಾಗೂ ಇನ್ನಿತರ ಮಾಹಿತಿ ಇನ್ನುಮುಂದೆ ಸುಲಭವಾಗಿ ದೊರೆಯಲಿದೆ. ಈ ನೂತನ ವ್ಯವಸ್ಥೆ ಜಾರಿಗೊಂಡರೆ ಆಯಾ ಪ್ರದೇಶ, ಬಡಾವಣೆಗಳಲ್ಲಿ ಕಸ ಗುಡಿಸುವ ಪೌರಕಾರ್ಮಿಕರ ಮೊಬೈಲ್‌ ಸಂಖ್ಯೆ ಸಹಿತ ಎಲ್ಲ ಮಾಹಿತಿ ದೊರೆಯಲಿದೆ.

ಮೈಕ್ರೋಪ್ಲಾನ್‌ ಮ್ಯಾಪಿಂಗ್‌ ವ್ಯವಸ್ಥೆಯಲ್ಲಿ ಎಲ್ಲ 198 ವಾರ್ಡ್‌ಗಳಲ್ಲಿನ ಯಾವ ರಸ್ತೆಯನ್ನು ಯಾವ ಪೌರಕಾರ್ಮಿಕ ಸ್ವತ್ಛಗೊಳಿಸಬೇಕು, ಯಾವ ಆಟೋ ಟಿಪ್ಪರ್‌ ಯಾವ ಬ್ಲಾಕ್‌ಗೆ ಹೋಗಬೇಕು ಎಂಬುದನ್ನು ಮ್ಯಾಪಿಂಗ್‌ ಮಾಡಲಾಗುತ್ತಿದೆ. ಈಗಾಗಲೇ ಮ್ಯಾಪಿಂಗ್‌ ವ್ಯವಸ್ಥೆ ಬಹುತೇಕ ಪೂರ್ಣಗೊಂಡಿದ್ದು, ಸಣ್ಣಪುಟ್ಟ ತಾಂತ್ರಿಕ ತೊಂದರೆಗಳು ಪರಿಹರಿಸಿದ ನಂತರದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಮ್ಯಾಪಿಂಗ್‌ ವ್ಯವಸ್ಥೆ ಯಾಕೆ?: ನಗರದಲ್ಲಿ 14 ಸಾವಿರ ಕಿ.ಮೀ. ಉದ್ದದ 93 ಸಾವಿರ ರಸ್ತೆಗಳಿದ್ದು, ಪ್ರತಿಯೊಂದು ರಸ್ತೆಯನ್ನು ಮ್ಯಾಪಿಂಗ್‌ ಮಾಡಲಾಗುತ್ತಿದೆ. ಆ ಪೈಕಿ 2 ಸಾವಿರ ಕಿ.ಮೀ. ಉದ್ದದ ಪ್ರಮುಖ ರಸ್ತೆಗಳಿವೆ. ಐಐಎಂಬಿ ಸೇರಿದಂತೆ ವಿವಿಧ ಸಂಸ್ಥೆಗಳು ನಡೆಸಿದ ಅಧ್ಯಯನದಿಂದ ದಿನದಲ್ಲಿ ಒಬ್ಬ ಪೌರಕಾರ್ಮಿಕರು ಅರ್ಧ ಕಿ.ಮೀ. ಉದ್ದದ ವಾರ್ಡ್‌ ರಸ್ತೆ ಅಥವಾ 0.35 ಕಿ.ಮೀ. ಉದ್ದದ ಪ್ರಮುಖ ರಸ್ತೆ ಗುಡಿಸಲು ಸಾಧ್ಯವಿದ್ದು, ಅದರಂತೆ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲಾಗುತ್ತದೆ.

ಕಡಿಮೆ ಆಟೋ ಟಿಪ್ಪರ್‌ಗಳನ್ನು ಬಳಸಿ ಹೆಚ್ಚಿನ ಆಟೋಟಿಪ್ಪರ್‌ಗಳಿಗೆ ಬಿಲ್‌ ಪಡೆಯಲಾಗುತ್ತಿದೆ ಎಂಬ ಆರೋಪಗಳಿವೆ. ಆ ಹಿನ್ನೆಲೆಯಲ್ಲಿ ಪ್ರತಿಯೊಂದು ಬ್ಲಾಕ್‌ಗೆ ಒಂದರಂತೆ ನಿಯೋಜನೆ ಮಾಡಲಾಗುತ್ತಿದ್ದು, ಜಿಪಿಎಸ್‌ ವ್ಯವಸ್ಥೆ ಅಳವಡಿಸುವುದರಿಂದ ಆಟೋಗಳು ತ್ಯಾಜ್ಯ ಸಂಗ್ರಹಣೆಯಲ್ಲಿ ತೊಡಗಿವೆಯೇ ಇಲ್ಲವೆ ಎಂಬುದು ತಿಳಿಯಲಿದೆ. 

18 ಸಾವಿರ ಪೌರಕಾರ್ಮಿಕರು ಬೇಕು: ಮೈಕ್ರೋ ಪ್ಲಾನಿಂಗ್‌ ಪ್ರಕಾರ ನಗರದ 198 ವಾರ್ಡ್‌ಗಳಲ್ಲಿ ಕಾರ್ಯನಿರ್ವಹಿಸಲು 18 ಸಾವಿರ ಪೌರಕಾರ್ಮಿಕರ ಅಗತ್ಯವಿದೆ. ಆದರೆ, ರಾಜ್ಯ ಸರ್ಕಾರ 2017ರ ಆಗಸ್ಟ್‌ ತಿಂಗಳಲ್ಲಿ ಹೊರಡಿಸಿದ್ದ ಆದೇಶದ ಪ್ರಕಾರ ನಗರತದಲ್ಲಿ ಪ್ರತಿ 700 ಜನರಿಗೆ ಒಬ್ಬ ಪೌರಕಾರ್ಮಿಕರನ್ನು ನೇಮಿಸಬೇಕು.

ಅದರಂತೆ ಪ್ರಸ್ತುತ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ಮಾಡಲು 15,810 ಪೌರಕಾರ್ಮಿಕರ ಅಗತ್ಯವಿದೆ. ಇದೀಗ ಮ್ಯಾಪಿಂಗ್‌ನಿಂದ 18 ಸಾವಿರ ಪೌರಕಾರ್ಮಿಕರು ಬೇಕಾಗುತ್ತದೆ ಎಂಬುದು ತಿಳಿದು ಬಂದಿರುವುದರಿಂದ ಅದನ್ನು ಸರ್ಕಾರಕ್ಕೆ ಕಳುಹಿಸಿ ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಅನುಮತಿ ಪಡೆಯಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. 

ಮೈಕ್ರೋ ಪ್ಲಾನಿಂಗ್‌ ವ್ಯವಸ್ಥೆಗೆ ಸಂಬಂಧಿಸಿದಂತೆ ಕೆಲವೊಂದು ತಾಂತ್ರಿಕ ದೋಷಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಅದು ಮುಗಿದ ನಂತರ ಒಂದು ತಿಂಗಳು ಪರೀಕ್ಷೆ ನಡೆಸಿ, ನಂತರ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪಾಲಿಕೆ ವೆಬ್‌ಸೈಟ್‌ನಲ್ಲಿ ಮಾಹಿತಿ ಹಾಕಲಾಗುವುದು.
-ಸಫ್ರಾರ್ಜ್‌ ಖಾನ್‌, ಜಂಟಿ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)

* ವೆಂ.ಸುನೀಲ್‌ಕುಮಾರ್‌ 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.