ಹಾಕಿ ಕೋಚಿಂಗ್‌ಗೆ ಬಂದು ವಾಲಿಬಾಲ್‌ ಆಟಗಾರ್ತಿ ಜತೆಗೆ “ಚೆಲ್ಲಾಟ’ ಆಡಿದ ಯುವಕ ಪೋಕ್ಸೋ ಕೇಸ್‌


Team Udayavani, Feb 7, 2024, 11:36 AM IST

ಹಾಕಿ ಕೋಚಿಂಗ್‌ಗೆ ಬಂದು ವಾಲಿಬಾಲ್‌ ಆಟಗಾರ್ತಿ ಜತೆಗೆ “ಚೆಲ್ಲಾಟ’ ಆಡಿದ ಯುವಕ ಪೋಕ್ಸೋ ಕೇಸ್‌

ಬೆಂಗಳೂರು: ಮದುವೆಯಾಗುವು ದಾಗಿ ನಂಬಿಸಿ ವಾಲಿಬಾಲ್‌ ಆಟಗಾರ್ತಿ ಜತೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿ, ಇದೀಗ ಮದುವೆಯಾಗದೆ ವಂಚಿಸಿದ ಆರೋಪದಡಿ ರಾಷ್ಟ್ರೀಯ ಹಾಕಿ ಆಟಗಾರನ ವಿರುದ್ಧ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ತೆಲಂಗಾಣ ಮೂಲದ 22 ವರ್ಷದ ವಾಲಿಬಾಲ್‌ ಅಟಗಾರ್ತಿ ನೀಡಿದ ದೂರಿನ ಮೇರೆಗೆ ಹಾಕಿ ಆಟಗಾರ ವರುಣ್‌ ಕುಮಾರ್‌(28) ವಿರುದ್ಧ ಜ್ಞಾನಭಾರತಿ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಸಲಾಗಿದೆ.

ದೂರಿನಲ್ಲಿ ಏನಿದೆ?: 2016-17ನೇ ಸಾಲಿನಲ್ಲಿ ಸಂತ್ರಸ್ತೆ ನ್ಯಾಷನಲ್‌ ಸೆಂಟರ್‌ ಆಫ್ ಎಕ್ಸ್‌ಲೆನ್ಸಿ ಅಡಿಯಲ್ಲಿ ವಾಲಿಬಾಲ್‌ ತರಬೇತಿ ಪಡೆಯಲು ಆಯ್ಕೆಯಾಗಿದ್ದು, ಜ್ಞಾನಭಾರತಿಯಲ್ಲಿರುವ ಸಾಯಿ ಸ್ಪೋರ್ಟ್ಸ್ ಆಥಾರಿಟಿ ಆಫ್ ಇಂಡಿಯಾ ಕೋಚಿಂಗ್‌ ಸೆಂಟರ್‌ನಲ್ಲಿ ತರಬೇತಿಗೆ ಬಂದಿದ್ದು, ಈ ಕೇಂದ್ರದಲ್ಲಿರುವ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಆಗ ಸಂತ್ರಸ್ತೆಯ ವಯಸ್ಸು 16. “2018ನೇ ಸಾಲಿನಲ್ಲಿ ಇದೇ ಕೇಂದ್ರ ದಲ್ಲಿ ನಡೆದ ರಾಷ್ಟ್ರೀಯ ಹಾಕಿ ಆಟಗಾರರ ತರಬೇತಿ ಶಿಬಿರದಲ್ಲಿ ಹಾಕಿ ಆಟಗಾರ ವರುಣ್‌ ಕುಮಾರ್‌ ಕೂಡ ತರಬೇತಿ ಪಡೆಯುತ್ತಿದ್ದ. ಆಗ ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ ವರುಣ್‌ ಕುಮಾರ್‌ ಪರಿಚಯವಾಗಿದ್ದು, ತನಗೆ ಸಂದೇಶ ಕಳುಹಿಸುತ್ತಿದ್ದ. ನಾನು ಅಪ್ರಾಪ್ತೆಯಾಗಿದ್ದರಿಂದ ಪ್ರತಿಕ್ರಿಯೆ ನೀಡಿಲ್ಲ. ಆದರೆ, ವರುಣ್‌ಗೆ, ಸಂತ್ರಸ್ತೆ ಇದೇ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ವಿಚಾರ ತಿಳಿದು, ತನ್ನ ಸ್ನೇಹಿತರನ್ನು ಸಂತ್ರಸ್ತೆ ಬಳಿ ಕಳುಹಿಸಿದ್ದ. ಅವರು ನಮ್ಮನ್ನು ನಿಮ್ಮ ಸಹೋದರರಂತೆ ಭಾವಿಸುವಂತೆ’ ಹೇಳಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಬಳಿಕ ವರುಣ್‌ನನ್ನು ಭೇಟಿಯಾಗಿದ್ದೆ. ಈ ವೇಳೆ ವರುಣ್‌, “ನಿನ್ನನ್ನು ಮದುವೆಯಾಗುತ್ತೇನೆ. ನಿಮ್ಮ ಮನೆಯವರನ್ನು ನಾನೇ ಒಪ್ಪಿಸುತ್ತೇನೆ. ಅಲ್ಲಿಯವರೆಗೆ ಇಬ್ಬರೂ ಪ್ರೇಮಿಗಳಾಗಿ ಇರೋಣ’ ಎಂದು ಹೇಳಿದ್ದ. ಅದಕ್ಕೆ ನಾನು ಒಪ್ಪಿ ಕೊಂಡೆ. ಈ ಮಧ್ಯೆ 2019ರ ಜುಲೈನಲ್ಲಿ ಒಂದು ದಿನ ವರುಣ್‌, ರಾತ್ರಿ ಊಟಕ್ಕೆ ಆಹ್ವಾನಿಸಿದ್ದ. ಆಗ ಜಯನಗರದ 4ನೇ ಬ್ಲಾಕ್‌ನಲ್ಲಿರುವ ಹೋಟೆಲ್‌ನಲ್ಲಿ ಇಬ್ಬರು ಊಟ ಮಾಡಿದ್ದೇವು’. “ಊಟದ ನಂತರ ನಾನು ಹಾಸ್ಟೆಲ್‌ಗೆ ಹೋಗಲು ಮುಂದಾಗಿದ್ದೆ. ಆಗ ವರುಣ್‌, ಹೋಟೆಲ್‌ನಲ್ಲಿ ರೂಮ್‌ ಬುಕ್‌ ಮಾಡಿದ್ದೇನೆ. ತರಬೇತಿ ಶಿಬಿರದಲ್ಲಿ ಸಮಯ ಸಿಗುವುದಿಲ್ಲ. ಹೀಗಾಗಿ ರೂಮ್‌ನಲ್ಲಿ ಕೆಲ ಸಮಯ ಮಾತನಾಡಿಕೊಂಡು ಹೋಗೋಣ’ ಎಂದಿದ್ದ. ಅದಕ್ಕೆ ನಾನು ಒಪ್ಪಿಕೊಂಡೆ. ಈ ವೇಳೆ ನನ್ನೊಂದಿಗೆ ದೈಹಿಕ ಸಂರ್ಪಕ ನಡೆಸಿ, ವಿವಾಹವಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ.

 5 ವರ್ಷದಿಂದ ಹಲವು ಬಾರಿ ದೈಹಿಕ ಸಂಪರ್ಕ : “ಮದುವೆಯಾಗುತ್ತೇನೆ’ ಎಂದು ನಂಬಿಸಿ ನನ್ನೊಂದಿಗೆ ವರುಣ್‌ ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಹೀಗೆ ಐದು ವರ್ಷಗಳ ಕಾಲ ಮದುವೆಯ ಭರವಸೆ ನೀಡಿ ವರುಣ್‌, ನಗರದ ವಿವಿಧ ಹೋಟೆಲ್‌ಗ‌ಳಿಗೆ ಕರೆದೊಯ್ದು ಹಲವಾರು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದೀಗ ನಾನು ಫೋನ್‌ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲು ಮುಂದಾದಾಗ, ಕೆಲ ದಿನಗಳ ಕಾಲ ಚೆನ್ನಾಗಿ ಮಾತನಾಡಿಕೊಂಡು ಇದ್ದ. ಈ ವೇಳೆ ಮದುವೆಯಾಗುವಂತೆ ಕೇಳಿದಾಗ, ನಾವಿಬ್ಬರು ಮದುವೆಯಾಗುವುದು ಬೇಡ. ಹೀಗೆ ಇದ್ದು ಬಿಡೋಣ’ ಎಂದು ಸಮಾಜಾಯಿಸಿ ನೀಡುತ್ತಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಫೋಟೋ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ : ಮತ್ತೂಂದೆಡೆ ಇದೇ ರೀತಿ ಮದುವೆಯಾಗುವಂತೆ ತೊಂದರೆ ಕೊಟ್ಟರೆ, ನನ್ನ ಬಳಿ ಇರುವ ನಿನ್ನ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ’ ವರುಣ್‌ ಬೆದರಿಕೆ ಹಾಕಿದ್ದಾನೆ. ಅಪ್ರಾಪ್ತ ವಯಸ್ಸಿನಲ್ಲಿ ನನ್ನನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿ, ಈಗ ಮದುವೆಯಾಗದೆ ಮೋಸ ಮಾಡಿರುವ ವರುಣ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ದೂರಿನಲ್ಲಿ ಕೋರಿದ್ದಾರೆ. ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.