ನಗರಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್


Team Udayavani, Nov 26, 2018, 12:27 PM IST

nagaradandyta.jpg

ಬೆಂಗಳೂರು: ಅಂಬರೀಶ್‌ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸೋಮವಾರ ಬೆಳಗ್ಗೆ ನಗರದಲ್ಲಿ ನಡೆಯಲಿದ್ದು, ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅಂತಿಮ ಯಾತ್ರೆ ಹಾಗೂ ಅಂತ್ಯಕ್ರಿಯೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ನಗದಾದ್ಯಂತ  ನಗರ ಪೊಲೀಸ್‌ ವಿಭಾಗ ಕಟ್ಟೆಚ್ಚರ ವಹಿಸಿದೆ.

ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ನೇತೃತ್ವದಲ್ಲಿ ಬಿಗಿಬಂದೋಬಸ್ತ್ ಕಲ್ಪಿಸಲಾಗಿದ್ದು, ನಾಲ್ವರು ಹೆಚ್ಚುವರಿ ಪೊಲೀಸ್‌ ಆಯುಕ್ತರು, 15 ಡಿಸಿಪಿಗಳಿಗೆ ಬಂದೋಬಸ್ತ್ನ ಜವಾಬ್ದಾರಿ ವಹಿಸಲಾಗಿದೆ. ಕಾನೂನು ಸುವ್ಯವಸ್ಥೆಯ 11 ಸಾವಿರ ಪೊಲೀಸ್‌ ಸಿಬ್ಬಂದಿ, 4 ಸಾವಿರ ಸಂಚಾರ ಪೊಲೀಸರು, 30 ಕೆಎಸ್‌ಆರ್‌ಪಿ ತುಕಡಿ, 34 ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್‌) ತುಕಡಿ, 3 ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್), 5 ರ್ಯಾಪಿಡ್‌ ಇಂಟರ್‌ವೆನÒನ್‌ ವೆಹಿಕಲ್ಸ್‌ ( ಆರ್‌ಐವಿ)ಗಳನ್ನು ಭದ್ರತೆ ನಿಯೋಜಿಸಲಾಗಿದೆ.

ಅಂಬರೀಶ್‌ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಹೊರಡುವ ಮಾರ್ಗಗಳನ್ನು ಪ್ರತ್ಯೇಕ ವಿಭಾಗಗಳನ್ನಾಗಿ ವಿಂಗಡಿಸಿ ಡಿಸಿಪಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವೊಂದು ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಪೊಲೀಸ್‌ ಇಲಾಖೆ ಮನವಿ ಮಾಡಿದೆ. 

ಸಂಚಾರ ಮಾರ್ಗ ಬದಲಾವಣೆ: ಅಂತಿಮ ಯಾತ್ರೆಯಲ್ಲಿ ಗಣ್ಯರು, ಅಭಿಮಾನಿಗಳು, ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ನಗರದ ಹಲವೆಡೆ ಭಾರೀ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ. ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ತುಮಕೂರು ರಸ್ತೆ, ಸುಮನಹಳ್ಳಿಯ ಹೊರವರ್ತುಲ ರಸ್ತೆ ಭಾಗದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ವಾಹನ ಸವಾರರು, ಚಾಲಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಕೋರಿದ್ದಾರೆ.

ಮಾರ್ಗ ಬದಲಾವಣೆ ಮತ್ತು ಪರ್ಯಾಯ ಮಾರ್ಗ: ಹೊರವರ್ತುಲ ರಸ್ತೆ, ಸುಮ್ಮನಹಳ್ಳಿ ಜಂಕ್ಷನ್‍ನಿಂದ ಗೊರಗುಂಟೆ ಪಾಳ್ಯ ಕಡೆಗೆ ಹಾದು ಹೋಗುವ ಬಸ್‌, ಲಾರಿ ಸೇರಿದಂತೆ ಭಾರೀ ವಾಹನಗಳಿಗೆ ಸಂಚಾರ ನಿರ್ಬಂಧ. ಹೊರವರ್ತುಲ ರಸ್ತೆಯ ಸುಮ್ಮನಹಳ್ಳಿ ಜಂಕ್ಷನ್‌ನಿಂದ ಗೊರಗುಂಟೆ ಪಾಳ್ಯ ಕಡೆಗೆ ಹಾದು ಹೋಗುವ ಭಾರೀ ವಾಹನಗಳು ಮಾಗಡಿ ರಸ್ತೆ, ಕಾಮಾಕ್ಷಿಪಾಳ್ಯ – ಹೌಸಿಂಗ್‌ ಬೋರ್ಡ್‌, ಮಾಗಡಿ ರಸ್ತೆಯ ಟೋಲ್‌ ಗೇಟ್‌ ಮೂಲಕ ಪಶ್ಚಿಮ ಕಾರ್ಡ್‌ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ. 

ಅದೇ ರೀತಿ  ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಜಂಕ್ಷನ್‍ನಿಂದ  ಸುಮನಹಳ್ಳಿ ಜಂಕ್ಷನ್‌ ಕಡೆಗೆ ಹೋಗುವ ವಾಹನಗಳಿಗೂ ನಿರ್ಬಂಧ ವಿಧಿಸಲಾಗಿದೆ. ಈ ಮಾರ್ಗದಲ್ಲಿ ಬರುವ ವಾಹನಗಳು ತುಮಕೂರು ರಸ್ತೆ ಗೊರಗುಂಟೆ ಪಾಳ್ಯ – ಎಂಇಐ ಜಂಕ್ಷನ್‌ – ಆರ್‌ಎಂಸಿ ಯರ್ಡ್‌  ಮಾರಪ್ಪನ ಪಾಳ್ಯ-  ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ವೃತ್ತ ಮೂಲಕ ಪಶ್ಚಿಮ ಕಾರ್ಡ್‌ ರಸ್ತೆ ಕಡೆ  ಹಾದು ಹೋಗಬಹುದಾಗಿದೆ.

ಸ್ಯಾಂಕಿ ರಸ್ತೆ – ಮಾರಮ್ಮ ವೃತ್ತ- ಯಶವಂತಪುರ ಮೂಲಕ ತುಮಕೂರು ರಸ್ತೆ ಕಡೆಗೆ ಹಾದು ಹೋಗುವ ವಾಹನಗಳ ಸಂಚಾರ ಮಾರ್ಗ ಬದಲಾವಣೆ. ಪರ್ಯಾಯ ಮಾರ್ಗ: ಮೇಖ್ರೀ ವೃತ್ತದಲ್ಲಿ ಎಡ ತಿರುವು ತೆಗೆದುಕೊಂಡು ಸಿ.ವಿ ರಾಮನ್‌ ರಸ್ತೆ , ಸದಾಶಿವ ನಗರ ಠಾಣೆ ಜಂಕ್ಷನ್‌ ಬಲತಿರುವು ಪಡೆದು ಬಿಇಎಲ್‌ ರಸ್ತೆ ತಲುಪಬೇಕು. ನಂತರ  ಕುವೆಂಪು ವೃತ್ತದಲ್ಲಿ ಎಡತಿರುವು ಪಡೆದು ಬಿಇಎಲ್‌ ವೃತ್ತ ಬಲತಿರುವು ಪಡೆಯಬೇಕು. ಬಳಿಕ ಗಂಗಮ್ಮ ವೃತ್ತ ಎಡತಿರುವು ಪಡೆದು ತುಮಕೂರು ರಸ್ತೆ ತಲುಪಬಹುದು.

ಮದ್ಯ ಮಾರಾಟ ನಿಷೇಧ: ಅಂಬರೀಶ್‌ ಅವರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೆ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ನಗರದಲ್ಲಿ ಮದ್ಯಮಾರಾಟ ನಿರ್ಬಂಧಿಸಿ ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪೊಲೀಸರ ಬಂದೋಬಸ್ತ್ (ಅವಶ್ಯ ಎನಿಸಿದರೆ ಬಳಸಬಹುದು) 
-ನಾಲ್ವರು ಹೆಚ್ಚುವರಿ ಪೊಲೀಸ್‌ ಆಯುಕ್ತರು 
-15 ಮಂದಿ ಡಿಸಿಪಿಗಳು
-11 ಸಾವಿರ ಕಾನೂನು ಸುವ್ಯವಸ್ಥೆ ಪೊಲೀಸರು
-4 ಸಾವಿರ ಸಂಚಾರ ಅಧಿಕಾರಿ, ಸಿಬ್ಬಂದಿ
-30 ಕೆಎಸ್‌ಆರ್‌ಪಿ ತುಕಡಿ
-34 ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್‌) ತುಕಡಿ
-3 ರ್ಯಾಪಿಡ್‌ ಆ್ಯಕ್ಷನ್‌ ಪೋರ್ಸ್‌(ಆರ್‌ಎಎಫ್)
-5 ರ್ಯಾಪಿಡ್‌ ಇಂಟರ್‌ವೆನನ್‌ ವೆಹಿಕಲ್ಸ್‌ ( ಆರ್‌ಐವಿ)

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.