ಯತ್ನಾಳ್‌ ಸರಿಹೋಗದಿದ್ದರೆ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ


Team Udayavani, Apr 15, 2021, 12:52 PM IST

political interview with nalin kumar kateel

ಬೆಂಗಳೂರು: ರಾಜ್ಯದಲ್ಲಿ 3 ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಮೂರು ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಯ ಮಾಡಿರುವ ಕಾರ್ಯತಂತ್ರಗಳು, ಪಕ್ಷದೊಳಗಿನ ಇತರೆ ಗೊಂದಲಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಜತೆ ಸಂದರ್ಶನ.

 3 ಕ್ಷೇತ್ರದ ಉಪ ಚುನಾವಣೆ ಹೇಗಿದೆ ?

ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಶ್ರಮ ವಹಿಸುತ್ತಿದ್ದಾರೆ. ಉಸ್ತುವಾರಿಗಳನ್ನು ನೇಮಿಸಿದ್ದೇವೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ. ಜನರ ಒಲವು ನಮ್ಮ ಪಕ್ಷದ ಪರವಾಗಿದೆ.

 ಚುನಾವಣೆಯಲ್ಲಿ ಸಿಡಿ ಪ್ರಕರಣ ಪರಿಣಾಮ ಬೀರುತ್ತಾ ?

ಉಪ ಚುನಾವಣೆಯಲ್ಲಿ ಸುರೇಶ್‌ ಅಂಗಡಿ ಯವರು ಮಾಡಿರುವ ಕೆಲಸದ ಬಗ್ಗೆ ಅಲ್ಲಿನ ಜನರು ಗುರುತಿಸಿದ್ದಾರೆ. ಅವರ ಸಜ್ಜನ ರಾಜಕೀಯದ ಬಗ್ಗೆ ಅನುಕಂಪ ಇದೆ. ಈ ಕುರಿತು ಅಲ್ಲಿ ಚರ್ಚೆಯಾಗುತ್ತಿವೆ. ಅದನ್ನು ಬಿಟ್ಟು ಬೇರೆ ವಿಷಯ ಅಲ್ಲಿ ಚರ್ಚೆಯಾಗುತ್ತಿಲ್ಲ.

 ಮಸ್ಕಿಯಲ್ಲಿ ಬಿಜೆಪಿ ಹಣ ಹಂಚಿಕೆ ಮಾಡಿ ಚುನಾವಣೆ ಗೆಲ್ಲಲು ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ?

ಅಂದರೆ, ಕಾಂಗ್ರೆಸ್‌ ಇದುವರೆಗೂ ಹಣ ಹಂಚಿಯೇ ಗೆಲುವು ಸಾಧಿಸಿತ್ತಾ? 73 ವರ್ಷಗಳ ಕಾಲ ಕಾಂಗ್ರೆಸ್‌ ಈ ದೇಶದಲ್ಲಿ ಆಡಳಿತ ಮಾಡಿತ್ತು. ಅವರು ಚುನಾವಣೆಗೆ ಹಣ ಹಂಚಿಯೇ ಗೆಲುವು ಸಾಧಿಸಿದ್ದರಾ? ಸಿದ್ದರಾಮಯ್ಯ ಅವರು ಮೊನ್ನೆಯ ಚುನಾವಣೆಯನ್ನು ಹಣ ಹಂಚಿಯೇ ಗೆಲುವು ಸಾಧಿಸಿದ್ದರಾ? ಅದಕ್ಕೆ ಉತ್ತರ ಕೊಡಲಿ

 ಅಂದ್ರೆ ಅವರು ಹಣ ಹಂಚಿದ್ದರೆ ನೀವೂ ಹಣ ಹಂಚಿಯೇ ಗೆಲ್ಲುತ್ತೀರಾ ?

ಅಲ್ಲಾ ರೀ, ಅವರು ಹಾಗೆ ಗೆದ್ದಿದ್ದರೆ ನಾವೂ ಹಾಗೇ ಗೆಲ್ಲುತ್ತೇವೆ. ಮೊದಲು ಅವರು ಹಣ ಹಂಚಿ ಗೆದ್ದಿದ್ದೇವೆ ಎಂದು ಹೇಳಲಿ. ನಾವೂ ಮಾಡ್ತೀವಿ ಅಂತ ಹೇಳಿದ್ದಲ್ಲ. ಅವರು ಹಣ ಕೊಟ್ಟೇ ಗೆದ್ದಿದ್ದಾ ?

 ತೇಜಸ್ವಿನಿ ಅನಂತಕುಮಾರ್‌ , ಮಂಗಳಾ ಅಂಗಡಿ ಅವರಿಗೆ ಟಿಕೆಟ್‌ ನೀಡುವ ವಿಚಾರದಲ್ಲಿ ದ್ವಂದ್ವ ನಿಲುವು ಯಾಕೆ ?

ಚುನಾವಣೆಯಲ್ಲಿ ಯಾವ ರೀತಿಯ ತೀರ್ಮಾ ನ ತೆಗೆದುಕೊಳ್ಳಬೇಕು ಎನ್ನುವುದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನಿಸುತ್ತದೆ. ಇಲ್ಲಿ ಅನಿವಾ ರ್ಯವಾಗಿ ತೀರ್ಮಾನ ತೆಗೆದುಕೊಂಡಿದ್ದೇವೆ. ಗೆಲ್ಲುವ ದೃಷ್ಟಿಯಿಂದ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ.

 ಬಿಜೆಪಿಯಲ್ಲಿ ನಿಮ್ಮನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ ಅಂತ ಸಿದ್ದರಾಮಯ್ಯ ಆರೋಪಿಸುತ್ತಾರಲ್ಲಾ ?

ಅವರನ್ನು ಕಾಂಗ್ರೆಸ್‌ನಲ್ಲಿ ಲೆಕ್ಕಕ್ಕೇ ಇಟ್ಟಿಲ್ಲ. ಅವರಿಗೆ ನನ್ನ ವಿಷಯವೇಕೆ ? ಮುಖ್ಯಮಂತ್ರಿಯಾದವರನ್ನು ಜನರೂ ಕಡೆಗಣಿಸಿದ್ದಾರೆ. ಕಾಂಗ್ರೆಸ್‌ ಲೆಕ್ಕಕ್ಕೆ ಇಟ್ಟಿಲ್ಲ. ಒಂದು ಕ್ಷೇತ್ರದಲ್ಲಿ ಜನರೇ ಅವರನ್ನು ಸೋಲಿಸಿ ಕಳುಹಿಸಿದ್ದಾರೆ. ಅದಕ್ಕೆ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪ್ರಚಾರದಲ್ಲಿರಲಿ ಅಂತ ಮಾತನಾಡುತ್ತಾರೆ.

ಚುನಾವಣೆ ನಂತರ ನಾಯಕತ್ವ ಬದಲಾವಣೆ ಆಗುತ್ತದಾ ?

ಈ ಚುನಾವಣೆಯಲ್ಲಿ ಗೆಲ್ಲುವುದೊಂದೇ ನಮ್ಮ ಗುರಿ. ನಮ್ಮ ಪಕ್ಷದ ಎಲ್ಲ ನಾಯಕರೂ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಅದನ್ನೇ ಅಂತಿಮವಾಗಿ ಕೆಲಸ ಮಾಡುತ್ತಿದೇವೆ. ನಮ್ಮಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಪ್ರಶ್ನೆ ಇಲ್ಲ. ಇದೆಲ್ಲವೂ ಊಹಾಪೋಹಗಳು.

 ಮುಖ್ಯಮಂತ್ರಿ ವಿರುದ್ಧ ಹಿರಿಯ ಸಚಿವ ಈಶ್ವರಪ್ಪ ಅವರು ನೇರವಾಗಿ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರಲ್ಲಾ ?

ಈಶ್ವರಪ್ಪ ಅವರು ತಮ್ಮ ಇಲಾಖೆಯಲ್ಲಿನ ಅನುದಾನ ಹಂಚಿಕೆ ಬಗ್ಗೆ ರಾಜ್ಯಪಾಲರ ಜೊತೆ ಚರ್ಚೆ ಮಾಡಿದ್ದಾರೆ. ಅವರು ಯಾವುದೇ ರೀತಿಯ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರು ನನಗೂ ಪತ್ರ ಬರೆದಿದ್ದರು. ಆ ವಿಷಯ ಚರ್ಚಿಸಿ ಬಗೆಹರಿದಿದೆ.

 ಉಪ ಚುನಾವಣೆ ಮುಗಿದ ಮೇಲೆ ಯತ್ನಾಳ್‌ ಅವರನ್ನು ತೆಗೆದು ಹಾಕುತ್ತೀರಾ ?

ಈಗಾಗಲೇ ಯತ್ನಾಳ್‌ಗೆ ನೋಟಿಸ್‌ ನೀಡಲಾಗಿದೆ. ನಮ್ಮಲ್ಲಿ ಕೇಂದ್ರದಲ್ಲಿ ಶಿಸ್ತು ಸಮಿತಿ ಇದೆ. ಆ ಸಮಿತಿ ಈಗಾಗಲೇ ಕಾರ್ಯ ಪ್ರವೃತ್ತವಾಗಿದೆ. ಮೂರು ಬಾರಿ ನೋಟಿಸ್‌ ಕೊಡಬೇಕು ಅಂತ ನಿಯಮ ಇದೆ. ಆ ನಂತರವೂ ಯತ್ನಾಳ್‌ ಸರಿ ಹೋಗದಿದ್ದರೆ. ಅವರ ಮೇಲೆ ಏನು  ಕ್ರಮ ಕೈಗೊಳ್ಳಬೇಕೋ ಅದನ್ನು ಮೇಲಿನವರು ತೆಗೆದುಕೊಳ್ಳುತ್ತಾರೆ

 ಚುನಾವಣೆ ಸಂದರ್ಭದಲ್ಲಿ ಕ್ರಮ ಕೈಗೊಂಡರೆ ಪಂಚಮ ಸಾಲಿ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎನ್ನುವ ಕಾರಣಕ್ಕೆ ವಿಳಂಬ ಮಾಡುತ್ತಿದ್ದೀರಾ?

ಯತ್ನಾಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡರೂ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸಮುದಾಯಕ್ಕೂ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಗಳಿಗೂ ಸಂಬಂಧವಿಲ್ಲ.

-ಶಂಕರ ಪಾಗೋಜಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.