ಸಗಟು ತ್ಯಾಜ್ಯ ಉತ್ಪಾದಕರ ಪಟ್ಟಿಗೆ ಸಿದ್ಧತೆ


Team Udayavani, Oct 24, 2019, 3:07 AM IST

sagatu

ಬೆಂಗಳೂರು: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್‌ಜಿಟಿ) ನಿರ್ದೇಶನದ ಬಳಿಕ ಎಚ್ಚತ್ತುಕೊಂಡಿರುವ ಬಿಬಿಎಂಪಿ, ತ್ಯಾಜ್ಯ ನಿರ್ವಹಣೆಯಲ್ಲಿ ಆಗುತ್ತಿರುವ ಲೋಪಗಳನ್ನು ಸರಿಪಡಿಸಿಕೊಳ್ಳಲು ಮುಂದಾಗಿದ್ದು, ಸಗಟು ತ್ಯಾಜ್ಯ (ಬಲ್ಕ್ ಜನರೇಟರ್‌) ನಿರ್ವಾಹಕರು ಹಾಗೂ ಸಗಟು ತ್ಯಾಜ್ಯ ಉತ್ಪಾದಕರನ್ನು ಗುರುತಿಸಲು ಪ್ರಾರಂಭಿಸಿದೆ. ಪಾಲಿಕೆಯು ನಾಲ್ಕು ವರ್ಷಗಳ ಹಿಂದೆ 12 ಮಂದಿ ಸಗಟು ತ್ಯಾಜ್ಯ ನಿರ್ವಹಣೆ ಮಾಡುವವರನ್ನು ಅಧಿಕೃತವಾಗಿ ಗುರುತಿಸಲಾಗಿತ್ತು.

ಆದರೆ, ಈಗ ಉಪ ಸಗಟು ನಿರ್ವಹಣೆ ಮಾಡುವವರೂ ಸೇರಿಕೊಂಡಿರುವುದು ಪತ್ತೆಯಾಗಿದೆ. ಸಗಟು ನಿರ್ವಹಣೆ ಮಾಡುವವರು ನಗರದಲ್ಲಿ 10ರಿಂದ 100 ಕೆ.ಜಿ ತ್ಯಾಜ್ಯ ಉತ್ಪಾದನೆಯಾಗುವ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿದ್ದಾರೆ. ಸಗಟು ತ್ಯಾಜ್ಯ ವಿಲೇವಾರಿ ಹಲವು ಗೊಂದಲಗಳಿಗೆ ಕಾರಣವಾಗಿತ್ತು. ಅಲ್ಲದೆ, ಸಗಟು ವಿಲೇವಾರಿಗೆ ಪರವಾನಗಿ ಪಡೆದಿರುವವರು ಅಕ್ರಮವಾಗಿ ಬಿಬಿಎಂಪಿಯ ವಾಹನಗಳಿಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ, ಎಲ್ಲೆಂದರಲ್ಲಿ ಎಸೆಯುತ್ತಿರುವ ಬಗ್ಗೆಯೂ ಆರೋಪಗಳೂ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಸಗಟು ಉತ್ಪಾದಕರ ಪಟ್ಟಿ ಸಿದ್ಧಪಡಿಸಲು ಹಾಗೂ ನೂರು ಕೆ.ಜಿಯವರೆಗೆ ಉತ್ಪಾದನೆಯಾಗುವ ತ್ಯಾಜ್ಯವನ್ನು ಬಿಬಿಎಂಪಿಯೇ ನಿರ್ವಹಣೆ ಮಾಡಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎನ್‌ಜಿಟಿ ನಿರ್ದೇಶನ ನೀಡಿದ್ದು, ಬಿಬಿಎಂಪಿಯ ಅಧಿಕಾರಿಗಳು ವಲಯವಾರು ಸಗಟು ಉತ್ಪಾದಕರ ವಿವರ ದಾಖಲಿಸಲು ಪ್ರಾರಂಭಿಸಿದ್ದಾರೆ. ಅದೇ ರೀತಿ ಸಗಟು ತ್ಯಾಜ್ಯ ವಿಲೇವಾರಿ ಮಾಡುವವರ ತ್ಯಾಜ್ಯ ಸಂಸ್ಕರಣಾ ಘಟಕಗಳು, ನಿರ್ವಹಣೆಯ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ.

ಎನ್‌ಜಿಟಿಯಿಂದ ಎಚ್ಚರಿಕೆ: ಸಗಟು ತ್ಯಾಜ್ಯ ವಿಲೇವಾರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಮತ್ತು ಬಿಬಿಎಂಪಿ ಸಿಬ್ಬಂದಿ ಸಗಟು ತ್ಯಾಜ್ಯ ಉತ್ಪಾದಕರ ತ್ಯಾಜ್ಯವನ್ನು ಸಂಗ್ರಹಿಸುವುದಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎನ್ನುವ ಆರೋಪ ಮತ್ತು ಗೊಂದಲಗಳಿಗೆ ತೆರೆ ಎಳೆಯುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿ ಅಧ್ಯಕ್ಷ ಸುಭಾಷ್‌ ಬಿ. ಆದಿ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ “ಉದಯವಾಣಿ’ ಜತೆ ಮಾತನಾಡಿದ ಸುಭಾಷ್‌ ಬಿ. ಆದಿ ಅವರು, ಸಗಟು ತ್ಯಾಜ್ಯ ಉತ್ಪಾದಕರು ಹಾಗೂ ನಿರ್ವಹಣೆ ಮಾಡುವವರ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ನೂರು ಕೆ.ಜಿಯವರೆಗೆ ಉತ್ಪಾದನೆಯಾಗುವ ತ್ಯಾಜ್ಯವನ್ನು ಬಿಬಿಎಂಪಿಯೇ ನಿರ್ವಹಿಸುವಂತೆ ಮತ್ತು ನೂರು ಕೆ.ಜಿ ಮೇಲೆ ಉತ್ಪಾದನೆಯಾಗುವ ತ್ಯಾಜ್ಯವನ್ನು ಕೃಷಿಕರಿಗೆ ಅಥವಾ ಸರ್ಮಪಕವಾಗಿ ನಿರ್ವಹಣೆ ಮಾಡುವವರಿಗೆ ನೀಡುವ ಬಗ್ಗೆಯೂ ವರದಿ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಪಾಲಿಕೆ ಅಧಿಕಾರಿಗಳು ರಾಷ್ಟ್ರೀಯ ಎನ್‌ಜಿಟಿಯ ಘನತ್ಯಾಜ್ಯ ನಿರ್ವಹಣೆ -2016ರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ನಿಯಮಾನುಸಾರವೇ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ನೂತನ ಪ್ರಸ್ತಾವನೆ ಸಲ್ಲಿಸಿದ ಬಿಬಿಎಂಪಿ: ನಗರದ ತ್ಯಾಜ್ಯ ವಿಲೇವಾರಿಗೆ ಬಳಸಲಾಗುತ್ತಿರುವ ಬೆಳ್ಳಳ್ಳಿ ಕ್ವಾರಿ ಮತ್ತು ಮಿಟಗಾನಹಳ್ಳಿ ಸೇರಿದಂತೆ ಘನತ್ಯಾಜ್ಯ ವಿಲೇವಾರಿ ಘಟಕಗಳ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಹಾಗೂ ನಗರದಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ (ಮೂರು ವರ್ಷಗಳಿಗೆ) ವಿಲೇವಾರಿ ಮಾಡುವುದಕ್ಕೆ 1,179 ಕೋಟಿ ರೂ. ನೀಡುವಂತೆ ಪಾಲಿಕೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆ ಮತ್ತು ಕಾಮಗಾರಿಗಳಿಗೆ (2018-19, 2019-20, 2020-21ನೇ ಸಾಲಿಗೆ) 583.34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿದೆ. ಇದರಲ್ಲಿ ನಗರದ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆಗೆ 55.50 ಕೋಟಿ ರೂ. ಹಾಗೂ 528.85 ಕೋಟಿ ರೂ. ಘನತ್ಯಾಜ್ಯ ವಿಲೇವಾರಿ ಘಟಕಗಳ ಸುತ್ತಮುತ್ತಲಿನ ಪ್ರದೇಶಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಮೀಸಲಿರಿಸಿದೆ.

ಹೀಗಾಗಿ, ನಗರದ ತ್ಯಾಜ್ಯ ವಿಲೇವಾರಿಗೆ ಸಮಸ್ಯೆ ಉಂಟಾಗಲಿದ್ದು, ಹೆಚ್ಚುವರಿಯಾಗಿ ಅನುದಾನ ಬಿಡುಗಡೆ ಮಾಡುವಂತೆ ಬಿಬಿಎಂಪಿಯು ಸರ್ಕಾರಕ್ಕೆ ನೂತನ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ಪ್ರಸ್ತಾವನೆಯಲ್ಲಿರುವ ಯೋಜನೆಗಳಲ್ಲಿ 2 ಕೋಟಿ ರೂ.ವರೆಗಿನ ಯೋಜನೆಗಳನ್ನು ಬಿಬಿಎಂಪಿ ಆಯುಕ್ತರ ಮಟ್ಟದಲ್ಲೇ ಅನುಮೋದನೆ ಪಡೆದುಕೊಳ್ಳಲು ಅನುಮತಿ ನೀಡಬೇಕು ಎಂದು ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಯೋಜನೆ 2019-20 2020-21 2021-22 (ಕೋಟಿ ರೂ.ಗಳಲ್ಲಿ)
ಘನತ್ಯಾಜ್ಯ ನಿರ್ವಹಣೆ 277.50 462 259.50
ತ್ಯಾಜ್ಯ ಘಟಕಗಳ ಸುತ್ತಲ ಹಳ್ಳಿಗಳ ಅಭಿವೃದ್ಧಿ 30 75 75
ಒಟ್ಟು 307.50 537 334.50 1179

ಸಗಟು ತ್ಯಾಜ್ಯ ನಿರ್ವಾಹಕರು ಎಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಇದರಲ್ಲಿ ಲೋಪ ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸಗಟು ತ್ಯಾಜ್ಯ ವಿಲೇವಾರಿ ಪರವಾನಗಿ ಪಡೆದವರೇ ವಿಲೇವಾರಿ ಮಾಡುತ್ತಿದ್ದಾರೆಯೇ, ಪ್ರತ್ಯೇಕ ತ್ಯಾಜ್ಯ ಸಂಗ್ರಹಣೆ ಆಗುತ್ತಿದೆಯೇ ಎನ್ನುವ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ.
-ರಂದೀಪ್‌, ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)

* ಹಿತೇಶ್‌ ವೈ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.