Arrest: 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ 65 ವರ್ಷದ ಪ್ರಾಂಶುಪಾಲ ಬಂಧನ
Team Udayavani, Aug 5, 2023, 10:03 AM IST
ಬೆಂಗಳೂರು: ವರ್ತೂರಿನಲ್ಲಿ 2ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಪ್ರಾಂಶುಪಾಲನೇ ಅತ್ಯಾ ಚಾರವೆಸಗಿ ವಿಕೃತಿ ಮೆರೆದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಗುಂಜೂರಿನ ಬೆಥೆಲ್ಸ್ ಬ್ಯಾಪ್ಟಿಸ್ಟ್ ಅಕಾಡೆಮಿ ಶಾಲೆಯ ಪ್ರಾಂಶುಪಾಲ ಹಾಗೂ ಮಾಲೀಕ ವರ್ತೂರಿನ ನಿವಾಸಿ ಲ್ಯಾಂಬರ್ಟ್ ಪುಷ್ಪರಾಜ್ (65) ಬಂಧಿತ.
ಗುಂಜೂರಿನ ಬೆತೆಲ್ ಬ್ಯಾಪಿಸ್ಟ್ ಅಕಾಡೆಮಿಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯು ನರ ದೌರ್ಬಲ್ಯ ಮೈಲ್ಡ್ ಡೈಸ್ಲೇಕ್ಸಿಯಾ ಕಾಯಿಲೆ ಯಿಂದ ಬಳಲುತ್ತಿದ್ದಳು. ಆ.3ರಂದು ಬೆಳಗ್ಗೆ 8.30ಕ್ಕೆ ಎಂದಿನಂತೆ ಶಾಲೆಗೆ ತೆರಳಿದ್ದಳು. ಶಾಲೆಯ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪ ರಾಜ್ ಬಾಲಕಿಯನ್ನು ಆತನ ಕೊಠಡಿಗೆ ಕರೆದುಕೊಂಡು ಹೋಗಿ ಬೆಡ್ ಮೇಲೆ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಬಳಿಕ ಬಾಗಿಲು ಹಾಗೂ ಕಿಟಕಿಯ ಪರದೆ ಮುಚ್ಚಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಮಗು ಅಳಲು ಪ್ರಾರಂಭಿಸಿದಾಗ ಹೊಡೆಯುವುದಾಗಿ ಬೆದರಿಸಿ ದ್ದರು. ಬಳಿಕ ಪ್ರತಿದಿನ ಇದೇ ರೀತಿ ಮಾಡುವುದಾಗಿ ಹೇಳಿ ಬಾಲಕಿಗೆ ಕೇಕ್ ನೀಡಿದಾಗ ಬಾಲಕಿ ಅಳುವುದನ್ನು ನಿಲ್ಲಿಸಿ ಮನೆಗೆ ಬಂದಿದ್ದಳು.
ಬೆಳಕಿಗೆ ಬಂದಿದ್ದು ಹೇಗೆ?: ಮನೆಗೆ ವಾಪಸ್ಸಾಗಿ ಪಾಲಕರ ಬಳಿ ಹೊಟ್ಟೆ ನೋವು ಎಂದು ಹೇಳಿಕೊಂಡಿದ್ದಳು. ಸಾಮಾನ್ಯ ಹೊಟ್ಟೆ ನೋವು ಇದ್ದಿರಬಹುದು ಎಂದು ಪಾಲಕರು ಸುಮ್ಮನಾಗಿದ್ದರು. ಬಾಲಕಿಗೆ ಸ್ನಾನ ಮಾಡಿಸಿ ಸ್ನಾನದ ಕೋಣೆಯಿಂದ ಬಂದಾಗ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿತ್ತು. ಪಾಲಕರು ಈ ಬಗ್ಗೆ ವಿಚಾರಿಸಿದಾಗ ನಡೆದ ಸಂಗತಿಯನ್ನು ಬಾಲಕಿ ವಿವರಿಸಿದ್ದಾಳೆ.
ಬಾಲಕಿ ತಾಯಿ ವರ್ತೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ. ಪೊಲಿಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.