PayCM ಅಭಿಯಾನದ ಜತೆಗೆ SayCM ಆಂದೋಲವನ್ನೂ ಮಾಡಬೇಕಾಗಿದೆ: ಪ್ರಿಯಾಂಕ್ ಖರ್ಗೆ ಕಿಡಿ


Team Udayavani, Oct 18, 2022, 1:59 PM IST

PayCM ಅಭಿಯಾನದ ಜತೆಗೆ SayCM ಆಂದೋಲನ ಮಾಡಬೇಕಾಗಿದೆ : ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು : ಬಿಜೆಪಿಯವರು ತಮ್ಮ ಪ್ರಣಾಳಿಕೆಯಲ್ಲಿ 600ಕ್ಕೂ ಹೆಚ್ಚು ಭರವಸೆ ನೀಡಿದ್ದು, ಶೇ.10ರಷ್ಟು ಭರವಸೆ ಈಡೇರಿಸಿಲ್ಲ. ಕಾಂಗ್ರೆಸ್ ಪಕ್ಷ ಅಭಿಯಾನದ ಮೂಲಕ ಇಂದು 50ನೇ ಪ್ರಶ್ನೆ ಕೇಳುತ್ತಿದ್ದು, ಇಲ್ಲಿಯವರೆಗೂ ಸರ್ಕಾರದಿಂದ ಯಾವುದೇ ಉತ್ತರ ಸಿಕ್ಕಿಲ್ಲ. ಪೇಸಿಎಂ ಅಭಿಯಾನದ ಜತೆಗೆ ನಾವು SayCM ಆಂದೋಲನವನ್ನು ನಡೆಸಬೇಕಿದೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ಮೂಕ ಬಸವನ ರೀತಿ ಕೂತರೆ ಆಗುವುದಿಲ್ಲ. ನೀವು ಈ ಪ್ರಣಾಳಿಕೆ ಮೂಲಕ ಜನರಿಂದ ಮತ ಹಾಕಿಸಿಕೊಂಡಿದ್ದೀರಿ. ಹೀಗಾಗಿ ನೀವು ಜನರಿಗೆ ಉತ್ತರಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇನ್ನು ಕೆಲವು ದಿನಗಳ ಹಿಂದೆ ಹೊನ್ನಾವರ ನ್ಯಾಯಾಲಯದಲ್ಲಿ ಪರೇಶ್ ಮೇಸ್ತಾ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ತನ್ನ ವರದಿ ಸಲ್ಲಿಸಿದೆ. ಬಿಜೆಪಿ ಸುಳ್ಳಿನ ಕಾರ್ಖಾನೆ ಎಂಬುದು ಎಲ್ಲರಿಗೂ ಗೊತ್ತು. ಈ ಸುಳ್ಳಿನ ಕಾರ್ಖಾನೆಯಿಂದ ರಾಜ್ಯದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಜತೆಗೆ ನಮ್ಮ ಯುವಕರ ಭವಿಷ್ಯ ನಿರ್ಣಾಮವಾಗುತ್ತಿದೆ. ಬಿಜೆಪಿಯವರು ಯುವಕರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ. ತಮ್ಮ ರಾಜಕೀಯ ದುರುದ್ದೇಶಕ್ಕೆ ಯುವಕರನ್ನು ಬಿಜೆಪಿ ದಾಳಗಳಾಗಿ ಬಳಸಿಕೊಳ್ಳುತ್ತಿದೆ. ಆ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಯುವಕರಿಗೆ ಶಿಕ್ಷಣ, ಉದ್ಯೋಗ ನೀಡುವ ಬದಲು ಅವರ ಹೆಗಲಿಗೆ ಕೇಸರಿ ಶಾಲು ಹಾಕಿ ಅವರಿಗೆ ಧರ್ಮ ರಕ್ಷಕ ಹಾಗೂ ಗೋರಕ್ಷಕ ಎಂಬ ಬಿರುದು ನೀಡುತ್ತಿದ್ದಾರೆ. ಕಾಂಗ್ರೆಸ್ ಆರಂಭದಿಂದಲೂ ಬಿಜೆಪಿ ಯುವಕರ ದಾರಿ ತಪ್ಪಿಸುತ್ತಿದೆ, ಭವಿಷ್ಯದ ಜತೆ ಚೆಲ್ಲಾಟವಾಡಿ, ಅವರ ಭವಿಷ್ಯ ನಾಶ ಮಾಡುತ್ತಿದೆ ಎಂದು ಹೇಳುತ್ತಲೇ ಬಂದಿದ್ದೆ. ಆದರೆ ಇಂದು ಪರೇಶ್ ಮೇಸ್ತಾ ಅವರ ಸಾವಿನ ಬಗ್ಗೆ ಸಿಬಿಐ ವರದಿ ಬಂದಿದ್ದು, ಈ ಸಾವು ಹೇಗೆ ಸಂಭವಿಸಿದೆ, ಇದರಲ್ಲಿ ಯಾರು ಹೇಗೆ ರಾಜಕೀಯ ಮಾಡಿದ್ದಾರೆ ಎಂಬ ಅಂಶ ವರದಿಯಲ್ಲಿ ಸ್ಪಷ್ಟವಾಗಿದೆ. ಬಿಜೆಪಿ ಅಮಾಯಕರ ಜೀವನದ ಜತೆ ಚೆಲ್ಲಾಟವಾಡಿ, ಹೆಣದ ಮೇಲೆ ರಾಜಕೀಯ ಮಾಡಲು ಹಿಂಜರಿಯುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದರು.

ಮಹೇಂದ್ರ ಕುಮಾರ್ ಎಂಬುವವರು ರಾಜ್ಯ ಬಜರಂಗದಳದ ಅಧ್ಯಕ್ಷರಾಗಿದ್ದರು. ಅವರಿಗೆ ಬಿಜೆಪಿ ಹಾಗೂ ಆರ್ ಎಸ್ಎಸ್ ನವರು ಹೇಗೆ ಕೆಲಸ ಮಾಡುತ್ತಾರೆ ಎಂದು ಅರಿತು ಆ ವ್ಯವಸ್ಥೆಯಿಂದ ಹೊರ ಬಂದು ಬಹಿರಂಗ ವೇದಿಕೆಯಲ್ಲಿ ಭಾಷಣ ಮಾಡಿ, ‘ ಬಿಜೆಪಿ ಹಾಗೂ ಆರ್ ಎಸ್ಎಸ್ ಬಡ ಯುವಕರ ತಲೆ ಕೆಡಿಸಿ ಧರ್ಮ ರಕ್ಷಣೆಗೆ ಕಳುಹಿಸಿ ಅವರ ಸಾವಾದರೆ ರಾಜಕೀಯ ಫಸಲು ತೆಗೆಯುತ್ತಾರೆ. ಅವರು ರಕ್ತ ಹೀರುವ ಕ್ರಿಮಿಗಳು’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಮೇಸ್ತಾ ಸಾವಿನ ಪ್ರಕರಣದ ಸಿಬಿಐ ವರದಿಯಲ್ಲೂ ಇದೇ ಅಂಶವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ಸಂಸ್ಥೆಗಳಿಗೆ ಪಾವತಿಸಬೇಕಾದ ಬಾಕಿ ಮೊತ್ತ ನಾಗರಿಕರು ಕೂಡಲೇ ಪಾವತಿಸಿ: ಮೌವಿನ್ ಗೊಡಿನ್ಹೋ

ಸಿಬಿಐ ತನ್ನ ವರದಿ ಸಲ್ಲಿಸಿ ಪರೇಶ್ ಮೇಸ್ತಾ ಪ್ರಕರಣವನ್ನು ಮುಕ್ತಾಯ ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿದೆ. ಈ ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಆಕಸ್ಮಿಕ. ಯಾವುದೇ ಕೋಮುಗಲಭೆಯಲ್ಲಿ ಆಗಿರುವ ಸಾವು ಅಲ್ಲ. ಡಿ.6, 2017ರಂದು ಹೊನ್ನಾವರದ ಗುಡ್ ಲಕ್ ಹೊಟೇಲ್ ಬಳಿ ಕೋಮು ಗಲಭೆ ಆರಂಭವಾಗುತ್ತದೆ. ನಂತರ ಪರೇಶ್ ಮೇಸ್ತಾ ಕಾಣೆಯಾಗಿ ಡಿ.8ರಂದು ಶೆಟ್ಟಿಕೆರೆ ಬಳಿ ಮೃತದೇಹ ಸಿಗುತ್ತದೆ.

ತನಿಖಾ ವರದಿಯಲ್ಲಿ ತಿಳಿಸಿರುವಂತೆ ಡಿ.6, 2017ರಂದು ಹಿಂದೂ ಸಂಘಟನೆ ಮುಖಂಡರು ಮತಾಂತರ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿದ್ದಾಗ ಅಪಘಾತದ ಬಗ್ಗೆ ಸುದ್ದಿ ಬರುತ್ತದೆ. ಅಪಘಾತಕ್ಕೆ ಒಳಗಾದ ಆಟೋ ಚಾಲಕ ಹಿಂದೂವಾಗಿದ್ದು, ಬೈಕ್ ಚಾಲಕ ಮುಸಲ್ಮಾನನಾಗಿದ್ದ. ಆಗ ಹಿಂದೂ ಸಂಘಟನೆ ಸದಸ್ಯರು ಅಪಘಾತ ಸ್ಥಳವಾದ ಶರಾವತಿ ವೃತ್ತದ ಬಳಿ ಹೋಗುತ್ತಾರೆ. ಅಲ್ಲಿ ಯಾರೂ ಇರದ ಕಾರಣ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಾರೆ. ಅಪಘಾತಕ್ಕೆ ಒಳಗಾದವರು ಸ್ಥಳೀಯರಲ್ಲದ ಕಾರಣ ರಾಜಿ ಮಾಡಿಕೊಂಡು ಆಸ್ಪತ್ರೆಯಿಂದಲೂ ತೆರಳಿದ್ದರು ಎಂದು ತಿಳಿಯುತ್ತದೆ. ಆದರೂ ಸಂಘಟನೆಯವರು ಗುಡ್ ಲಕ್ ಹೊಟೇಲ್ ಬಳಿ ಹೋಗಿ ಮುಸಲ್ಮಾನ ಯುವಕರೊಂದಿಗೆ ವಾಗ್ವಾದ ನಡೆಸಿದಾಗ ರಾತ್ರಿ 8.15ರ ಸುಮಾರಿಗೆ ಕೋಮುಗಲಭೆಯ ಕಿಚ್ಚು ಹೊತ್ತಿಕೊಳ್ಳುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದರು.

ಈ ವರದಿಯಲ್ಲಿ ಮುಂದುವರಿದು, ಪರೇಶ್ ಮೇಸ್ತಾ ಡಿ.6ರಂದು ಸಂಜೆ 6.54ರ ಸುಮಾರಿಗೆ ಕುಮಟಾಯಿಂದ ಹಿಂದಿರುಗುತ್ತಾರೆ. ನಂತರ ಮನೆಯವರಿಗೆ ತಾನು ಶನೇಶ್ವರ ದೇವಾಲಯಕ್ಕೆ ಹೋಗುವುದಾಗಿ ಹೊರಗೆ ಹೋಗುತ್ತಾರೆ. ನಂತರ ಮಾಲೆ ಹಾಕುವ ವಿಚಾರವಾಗಿ ಪರೇಶ್ ತನ್ನ ಸ್ನೇಹಿತ ಅತುಲ್ ಮೇಸ್ತಾ ಜತೆ ತುಳಸಿ ನಗರದ ಅಯ್ಯಪ್ಪ ದೇವಾಲಯಕ್ಕೆ ಹೋಗುತ್ತಾರೆ. ನಂತರ ಮತ್ತೊಬ್ಬ ಸ್ನೇಹಿತ ದೀಪಕ್ ಮೇಸ್ತಾ ಮನೆಗೆ ಹೋಗಿ ಆತನ ಸ್ಕೂಟರೆ ತೆಗೆದುಕೊಂಡು 8.15ರ ಸುಮಾರಿಗೆ ವೈನ್ ಶಾಪ್ ಗೆ ಹೋಗಿ ಅಲ್ಲಿ ಬಿಯರ್ ಖರೀದಿ ಮಾಡುತ್ತಾನೆ. ಕೆಲ ದಿನಗಳ ಹಿಂದೆ ಅಪಘಾತಕ್ಕೆ ಒಳಗಾಗಿ ಕಾಲು ಪೆಟ್ಟಾಗಿರುವ ಕಾರಣ ಅದೇ ವೈನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತ ಶರತ್ ಮೇಸ್ತಾ ಮೂಲಕ ಬೈಕ್ ಕಿಕ್ ಮಾಡಿಸಿಕೊಂಡು ಹೋಗಲು ಮುಂದಾಗುತ್ತಾನೆ. ಆಗ ಗುಡ್ ವಿಲ್ ಹೋಟೇಲ್ ಬಳಿ ಗಲಾಟೆ ವಿಚಾರ ತಿಳಿದ ನಂತರ ಅಲ್ಲಿಗೆ ಹೋಗಿ, ನಂತರ ಸೆಂಟ್ ಥಾಮಸ್ ಶಾಲಾ ಮೈದಾನದಲ್ಲಿ ತನ್ನ ಸ್ನೇಹಿತ ಅಶೋಕ್ ಮೇಸ್ತಾನನ್ನು ಭೇಟಿಯಾಗಿ ದೀಪಕ್ ಮೇಸ್ತಾನ ಸ್ಕೂಟರ್ ಕೀ ಕೊಟ್ಟು ಕೋಮು ಗಲಭೆ ಆರಂಭದ ವಿಚಾರ ತಿಳಿಸುತ್ತಾನೆ. ನಂತರ ರಾತ್ರಿ 10 ರಿಂದ 10.30 ಸುಮಾರಿಗೆ ಪರೇಶ್ ನನ್ನು ಅವರ ಸ್ನೇಹಿತರಾದ ಗಜಾನನ ಮೇಸ್ತಾ, ವಿನಾಯಕ್ ಗಣೇಶ್ ಮೇಸ್ತಾ, ಆಕಾಶ್ ಬಾಲಕೃಷ್ಣ ಮೇಸ್ತಾ ಅವರು ಕಡೇಯ ಬಾರಿಗೆ ಶಾಲಾ ಮೈದಾನದ ಬಳಿ ನೋಡಿರುತ್ತಾರೆ. ಡಿ.6ರ ರಾತ್ರಿ ಪರೇಶ್ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಡಿ.7ರಂದು ಪರೇಶ್ ಮೇಸ್ತಾ ಅವರ ತಂದೆ ಕಮಲಾಕರ ಮೇಸ್ತಾ ಅವರು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ದೂರು ನೀಡುತ್ತಾರೆ.

ನಂತರ ಡಿ.8ರಂದು ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಅವರ ಶವ ಸಿಗುತ್ತದೆ. ನಂತರ ಪರೇಶ್ ತಂದೆ ಐದು ಜನ ಅಲ್ಪಸಂಖ್ಯಾತ ಸಮುದಾಯದವರ ವಿರುದ್ಧ ದೂರು ನೀಡುತ್ತಾರೆ. ಮೃತ ದೇಹವನ್ನು ಪರೀಕ್ಷೆಗೆ ನಡೆಸಲು ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ಮಣಿಪಾಲ ವಿವಿಯ ಕಸ್ತೂರಿ ಬಾ ಕಾಲೇಜಿನ ಪ್ರಾದ್ಯಾಪಕರಾದ ಡಾ.ಬಕ್ಕನವರ್ ಎಂಬುವವರು ಮರಣೋತ್ತರ ಪರೀಕ್ಷೆ ನಡೆಸಿದರು. ಅವರ ವರದಿಯಲ್ಲಿ ಪರೇಶ್ ಮೇಸ್ತಾ ಅವರ ದೇಹದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಯಾವುದೇ ಗುರುತುಗಳಿಲ್ಲ. ಮದ್ಯ ಸೇವನೆ, ವಿಷ ಹಾಗೂ ಡ್ರಗ್ಸ್ ಸೇವನೆಯ ಯಾವುದೇ ಅಂಶಗಳು ಮೃತದೇಹದಲ್ಲಿ ಕಂಡುಬಂದಿಲ್ಲ. ಮೃತನ ದೇಹದಲ್ಲಿ ಆ ಕೆರೆಯ ನೀರು ಸೇವನೆಯಾಗಿರುವ ಅಂಶ ಖಚಿತವಾಗಿದ್ದು, ಮೃತನನ್ನು ಹತ್ಯೆ ಮಾಡಿ ನಂತರ ಕೆರೆಗೆ ಎಸೆದಿರುವ ಸಾಧ್ಯತೆ ಇಲ್ಲವಾಗಿದೆ ಎಂದು ತಿಳಿಸಲಾಗಿದೆ. ಇನ್ನು ಶ್ವಾಸಕೋಶದ ಪರೀಕ್ಷೆ ಮಾಡಿದಾಗ ಈ ಸಾವು ಕೆರೆಯಲ್ಲಿ ಮುಳುಗಿ ಆಗಿರುವ ಸಾವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಇನ್ನು ಈ ವರದಿಯಲ್ಲಿ ಮೃತನ ಕುತ್ತಿಗೆ ಭಾಗ ಹಾಗೂ ಮೂಳೆಗೆ ಯಾವುದೇ ಹಾನಿಯಾಗಿರುವ ಲಕ್ಷಣಗಳು ಇಲ್ಲವಾಗಿದ್ದು  ಬೇರೆಯವರು ಬಲವಂತವಾಗಿ ಮುಳುಗಿಸಿ, ಅಥವಾ ಉರುಳು ಹಾಕಿರುವ ಸಾಧ್ಯತೆ ಇಲ್ಲವಾಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಈ ಸಾವು ಆಕಸ್ಮಿಕವೇ ಹೊರತು ಹತ್ಯೆಯಲ್ಲ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿಸಲಾಗುತ್ತದೆ. ಇನ್ನು ಸಿಬಿಐ ತನಿಖಾಧಿಕಾರಿಗಳು ಎರಡನೇ ಅಭಿಪ್ರಾಯ ಪಡೆಯಲು ಪಾಂಡಿಚೆರಿಗೆ ಪರೀಕ್ಷೆಗೆ ಕಳುಹಿಸುತ್ತಾರೆ.  ನಂತರ ಅವರೂ ಕೂಡ ಇದು ನೀರಿನಲ್ಲಿ ಮುಳುಗಿರುವ ಆಕಸ್ಮಿಕ ಸಾವಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Nikhil

Chennapattana By Poll: ಕಣಕ್ಕೆ ನಿಖಿಲ್‌, ಜಯಮುತ್ತು? ಇನ್ನೂ ಗೊಂದಲದಲ್ಲಿ ಜೆಡಿಎಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.