ಪ್ರಜಾಪ್ರಭುತದ ಆಶಯ ಗಾಳಿಗೆ: ಟೀಕೆ
Team Udayavani, May 28, 2021, 4:23 PM IST
ಬೆಂಗಳೂರು:ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದ್ದಾರೆ ಎಂದು ರಾಜ್ಯಸಭೆ ಪ್ರತಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದಮಾಜಿ ಪ್ರಧಾನಿ ದಿವಂಗತ ಜವಹರ್ಲಾಲ್ನೆಹರು 57 ನೇ ಪುಣ್ಯಸ್ಮರಣೆಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ಸಂಸತ್ಗೆಬರಲ್ಲ, ಯಾವುದೇ ಚರ್ಚೆಯಲ್ಲೂ ಪಾಲ್ಗೊಳ್ಳುವುದಿಲ್ಲ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಡುತ್ತಿಲ್ಲ ಎಂದು ದೂರಿದರು.
ದೇಶದಲ್ಲಿ ಯಾರಾದರೂ ವೈಜ್ಞಾನಿಕ ಹಾಗೂವಾಸ್ತವ ಅಂಶ ಹೇಳಿದರೆ ದೇಶದ್ರೋಹಿ ಪಟ್ಟಕಟ್ಟಲಾಗುತ್ತಿದೆ. ಇದೊಂದು ಅಪಾಯಕಾರಿಪರಿಸ್ಥಿತಿ ಎಂದು ಆತಂಕ ವ್ಯಕ್ತಪಡಿಸಿದರು.
ಜವಹರ್ ಲಾಲ್ ನೆಹರು ಅವರು ಆಧುನಿಕಭಾರತದ ನಿರ್ಮಾತೃ. ಅವರ ದೂರದೃಷ್ಟಿಯಿಂದ ದೇಶ ಸಾಕಷ್ಟು ಅಭಿವೃದ್ಧಿಯಾಯಿತು.ಪ್ರಧಾನಿಯಾಗಿ ಕ್ರಾಂತಿಕಾರಕ ನಿರ್ಧಾರಕೈಗೊಂಡಿದ್ದರು ಎಂದು ಸ್ಮರಿಸಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷಸಲೀಂ ಅಹಮದ್, ಪರಿಷತ್ ಮಾಜಿ ಸಭಾಪತಿಬಿ.ಎಲ್.ಶಂಕರ್ ಹಾಗೂ ಕಾಂಗ್ರೆಸ್ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಮಾಜಿ ಸ್ಪೀಕರ್ ಕೃಷ್ಣ, ಮಾಜಿಸಚಿವ ಕೆ.ಬಿ.ಶಾಣಪ್ಪ ಸೇರಿದಂತೆ ಅಗಲಿದಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.