![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
Team Udayavani, Dec 20, 2017, 12:11 PM IST
ಬೆಂಗಳೂರು: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ನಗರದ ಮಲ್ಲೇಶ್ವರದ ಡಾ.ಟಿ.ಪಾರ್ಥಸಾರಧಿ ವೃತ್ತದಲ್ಲಿ ಮಂಗಳವಾರ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಶಾಸಕ ಸಿ.ಎನ್.ಅಶ್ವತ್ಥ್ನಾರಾಯಣ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಶಾಸಕ ಅಶ್ವತ್ಥ್ನಾರಾಯಣ್ ಅವರು, ರಾಜ್ಯ ಸರ್ಕಾರ ಕಾನೂನು ಪಾಲನೆ ಮಾಡುವಲ್ಲಿ ವಿಫಲವಾಗಿದೆ. ಕಾನೂನು ಉಲ್ಲಂಘನೆ ಮಾಡುತ್ತಿರುವ ಕಿಡಿಗೇಡಿಗಳನ್ನು ಬಯಲಿಗೆಳೆಯಬೇಕು. ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಮಡಿಕೇರಿಯ ಕುಟ್ಟಪ್ಪ ಅವರ ಸಾವಿನ ವರದಿಗೂ ಮುನ್ನವೇ ಅದು ಕೊಲೆಯಲ್ಲ, ಮೇಲಿಂದ ಬಿದ್ದು ಮೃತರಾದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಆ ವರದಿ ಬರುವರೆಗೂ ಕಾಯದೇ, ಕಾನೂನು ಪಾಲನೆ ಮಾಡದವರೇ ತಪ್ಪು ಹೇಳಿಕೆ ನೀಡುವುದು ಸರಿಯೇ ಎಂದು ಅವರು ಪ್ರಶ್ನಿಸಿದರು. ರಾಜ್ಯದಲ್ಲಿ ಕೇವಲ ಹಿಂದೂ ಕಾರ್ಯಕರ್ತರಲ್ಲದೇ, ಸರ್ಕಾರಿ ಅಧಿಕಾರಿಗಳು, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಿಗೂ ರಕ್ಷಣೆಯಿಲ್ಲ ಎಂಬುದು ಐಎಎಸ್ ಅಧಿಕಾರಿ ಡಿ.ಕೆ.ರವಿ. ಡಿವೈಎಸ್ಪಿ ಗಣಪತಿ, ಪೊಲೀಸ್ ಇನ್ಸ್ಪೆಕ್ಟರ್ ಕಲ್ಲಪ್ಪ ಹಂಡಿಭಾಗ್ ಅವರ ಪ್ರಕರಣಗಳಿಂದ ಸಾಬೀತಾಗಿದೆ ಎಂದು ಆರೋಪಿಸಿದರು.
ಹಿಂದೂ ಕಾರ್ಯಕರ್ತ, ಹೊನ್ನಾವರದ ಮೀನುಗಾರರ ಕುಟುಂಬದ ಯುವಕ ಪರೇಶ್ ಮೆಸ್ತಾನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದಕ್ಕೆ ಸರ್ಕಾರ ಎಫ್ಎಲ್ಎಲ್ ವರದಿ ನೀಡಿ ಕಣ್ಣೊರೆಸುವ ತಂತ್ರ ಮಾಡಿದೆ. ಕೋಮುವಾದಿ ಪಿಎಫ್ಐ, ಎಸ್ಡಿಪಿಐ, ಕೆಡಿಪಿ ಸಂಘಟನೆಗಳನ್ನು ನಿಷೇಧ ಮಾಡುವುದು ಬಿಟ್ಟು ಅವುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ.
ಜತೆಗೆ ಯೋಗೀಶ್ಗೌಡ ಕೊಲೆ ಆರೋಪ ಹೊತ್ತ ಸಚಿವ ವಿನಯ್ ಕುಲಕರ್ಣಿ ಅವರನ್ನು ಮಗ್ಗುಲಲ್ಲಿಟ್ಟುಕೊಂಡು ಬಚಾವ್ ಮಾಡಲು ಮುಖ್ಯಮಂತ್ರಿಗಳು ಯತ್ನಿಸುತ್ತಿದ್ದಾರೆ. ಅಧಿಕಾರಕ್ಕಾಗಿ ಎಂತಹ ಕೃತ್ಯ ಮಾಡಲೂ ಕಾಂಗ್ರೆಸ್ನವರು ಹಿಂಜರಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರೇಶ್ ಮೇಸ್ತ ಸೇರಿದಂತೆ ರಾಜ್ಯದಲ್ಲಿ ಇದುವರೆಗೂ 19 ಹಿಂದೂಗಳನ್ನು ಹತ್ಯೆ ಮಾಡಲಾಗಿದೆ.
ಈ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದರೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ರಾಮಲಿಂಗಾರೆಡ್ಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಹಿಂದೂ ಸೇವಾ ಪ್ರತಿಷ್ಠಾನದ ಮುಖ್ಯಸ್ಥ ಗ.ರಾ.ಸುರೇಶ್, ಸ್ವದೇಶಿ ಜಾಗರಣ ಮಂಚ್ ಜಗದೀಶ್, ಅಜೀತ್, ಸೆಂದಿಲ್, ಸುರೇಶ್, ಶಿವರಾಜ್ಮೂರ್ತಿ ಮತ್ತಿತರರು ಭಾಗವಹಿಸಿದ್ದರು.
Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ
Shivamogga: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್
Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
You seem to have an Ad Blocker on.
To continue reading, please turn it off or whitelist Udayavani.