Bengaluru: ಕೆಲಸದ ಹೆಸರಲ್ಲಿ ವೇಶ್ಯಾವಾಟಿಕೆಗ ಅಪ್ರಾಪ್ತೆಯರ ಕಳ್ಳ ಸಾಗಣೆ
Team Udayavani, Oct 23, 2024, 3:40 PM IST
ಬೆಂಗಳೂರು: ಉದ್ಯೋಗ ಕೊಡಿಸುವು ದಾಗಿ ಅಪ್ರಾಪ್ತೆಯರನ್ನು ಕಳ್ಳ ಸಾಗಣೆ ಮೂಲಕ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ಜಾಲ ಬೇಧಿಸಿರುವ ಸಿಸಿಬಿ ಪೊಲೀಸರು, 6 ಮಂದಿ ಗ್ರಾಹಕರು ಸೇರಿ 31 ಮಂದಿಯನ್ನು ಬಂಧಿಸಿ ದ್ದಾರೆ.
ಈ ವೇಳೆ ಐವರು ಬಾಂಗ್ಲಾದೇಶ ಪ್ರಜೆಗಳು ಸೇರಿ 12 ಮಂದಿ ಅಪ್ರಾಪ್ತೆಯರನ್ನು ರಕ್ಷಿಸಲಾಗಿದೆ. ಮಾನವ ಕಳ್ಳ ಸಾಗಣೆ ನಿಯಂತ್ರಣ ಬಗ್ಗೆ ನಿರಂತರ ಪ್ರಯತ್ನ ಮಾಡಲಾಗುತ್ತಿದ್ದು, ವೇಶ್ಯಾವಾಟಿಕೆಗಾಗಿಯೇ ಬಾಲಕಿಯರನ್ನು ಕಳ್ಳ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ಕಳೆದ ಕೆಲವು ತಿಂಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಸರ್ಕಾರೇತರ ಸಂಸ್ಥೆ (ಎನ್ಜಿಒ) ನೀಡಿದ ಮಾಹಿತಿ ಆಧರಿಸಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಹಾಗೂ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 14 ರಿಂದ 17 ವರ್ಷದ 12 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಾಳಿ ವೇಳೆ ರಕ್ಷಣೆ ಮಾಡಲಾದ ಬಾಲಕಿಯರಿಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪುನರ್ವಸತಿ ಕಲ್ಪಿಸಲಾಗುತ್ತಿದೆ. ಹಾಗೆಯೇ ದಾಳಿ ವೇಳೆ ಐವರು ಬಾಂಗ್ಲಾದೇಶ ಬಾಲಕಿಯರು ಪತ್ತೆ ಆಗಿದ್ದಾರೆ. ಅವರನ್ನು ಆ ದೇಶಕ್ಕೆ ವಾಪಸ್ ಕಳುಹಿಸಲು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್ ಮಾಡಿ: ವ್ಯಕ್ತಿಯಿಂದ ಅರ್ಜಿ!
Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ
Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ
Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ
Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್
MUST WATCH
ಹೊಸ ಸೇರ್ಪಡೆ
Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ
Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು
C.P.Yogeshwara; ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!
Karnataka ವಿದ್ಯುತ್ ಪ್ರಸರಣ ನಿಗಮದಿಂದ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Mulki: ಆರ್ಟಿಎ ಉಪಕಚೇರಿ ಬೇಕು; ತಾಲೂಕು ರಚನೆಯಾಗಿ 3ವರ್ಷ ದಾಟಿದರೂ ಜನರಿಗೆ ಸಿಗದ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.