![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 23, 2024, 3:40 PM IST
ಬೆಂಗಳೂರು: ಉದ್ಯೋಗ ಕೊಡಿಸುವು ದಾಗಿ ಅಪ್ರಾಪ್ತೆಯರನ್ನು ಕಳ್ಳ ಸಾಗಣೆ ಮೂಲಕ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ಜಾಲ ಬೇಧಿಸಿರುವ ಸಿಸಿಬಿ ಪೊಲೀಸರು, 6 ಮಂದಿ ಗ್ರಾಹಕರು ಸೇರಿ 31 ಮಂದಿಯನ್ನು ಬಂಧಿಸಿ ದ್ದಾರೆ.
ಈ ವೇಳೆ ಐವರು ಬಾಂಗ್ಲಾದೇಶ ಪ್ರಜೆಗಳು ಸೇರಿ 12 ಮಂದಿ ಅಪ್ರಾಪ್ತೆಯರನ್ನು ರಕ್ಷಿಸಲಾಗಿದೆ. ಮಾನವ ಕಳ್ಳ ಸಾಗಣೆ ನಿಯಂತ್ರಣ ಬಗ್ಗೆ ನಿರಂತರ ಪ್ರಯತ್ನ ಮಾಡಲಾಗುತ್ತಿದ್ದು, ವೇಶ್ಯಾವಾಟಿಕೆಗಾಗಿಯೇ ಬಾಲಕಿಯರನ್ನು ಕಳ್ಳ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ಕಳೆದ ಕೆಲವು ತಿಂಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಸರ್ಕಾರೇತರ ಸಂಸ್ಥೆ (ಎನ್ಜಿಒ) ನೀಡಿದ ಮಾಹಿತಿ ಆಧರಿಸಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಹಾಗೂ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 14 ರಿಂದ 17 ವರ್ಷದ 12 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಾಳಿ ವೇಳೆ ರಕ್ಷಣೆ ಮಾಡಲಾದ ಬಾಲಕಿಯರಿಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪುನರ್ವಸತಿ ಕಲ್ಪಿಸಲಾಗುತ್ತಿದೆ. ಹಾಗೆಯೇ ದಾಳಿ ವೇಳೆ ಐವರು ಬಾಂಗ್ಲಾದೇಶ ಬಾಲಕಿಯರು ಪತ್ತೆ ಆಗಿದ್ದಾರೆ. ಅವರನ್ನು ಆ ದೇಶಕ್ಕೆ ವಾಪಸ್ ಕಳುಹಿಸಲು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದರು.
You seem to have an Ad Blocker on.
To continue reading, please turn it off or whitelist Udayavani.