ಮೋದಿ ವಿರುದ್ಧ ಪಕೋಡ ಪ್ರತಿಭಟನೆ
Team Udayavani, Jan 31, 2018, 11:19 AM IST
ಬೆಂಗಳೂರು: ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲವಾಗಿದ್ದಾರೆ ಎಂದು ಆರೋಪಿಸಿ ಎನ್ಎಸ್ಯುಐ ಕಾರ್ಯಕರ್ತರು ನಗರದ ಆರ್.ಸಿ. ಕಾಲೇಜು ಎದುರು ಮಂಗಳವಾರ ಪಕೋಡ ತಯಾರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ವಕೀಲರು, ವೈದ್ಯರು ಸೇರಿದಂತೆ ವಿವಿಧ ಪದವೀಧರರ ವೇಷಭೂಷಣಗಳಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು, ಫುಟ್ಪಾತ್ನಲ್ಲಿ ಪಕೋಡ ಕರಿದರು. ನಂತರ “ಪದವೀಧರರು ಉದ್ಯೋಗಕ್ಕಾಗಿ ಸಂಪರ್ಕಿಸಿ ನರೇಂದ್ರ ಮೊದಿ ಪಕೋಡ ವ್ಯಾಪಾರ’ ಎಂದು ಫಲಕ ಹಿಡಿದು ಅಣಕು ಪ್ರದರ್ಶನ ಮಾಡಿದರು.
ಮೋದಿ ಪಕೋಡ 20 ರೂ., ಅಮಿತ್ ಶಾ ಪಕೋಡ 20 ರೂ., ಯೋಗಿ ಆದಿತ್ಯನಾಥ ಪಕೋಡ 20 ರೂ., ಯಡಿಯೂರಪ್ಪ ಪಕೋಡ 20 ರೂ. ಎಂದು ತಿಂಡಿಗಳ ಫಲಕ ಪ್ರದರ್ಶಿಸಿದ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಧಿಕ್ಕಾರ ಕೂಗಿದರು. ಸ್ನಾತಕೋತ್ತರ ಪೂರೈಸಿರುವ ಶ್ರೀಧರ್, ಬುಡಬುಡಿಕೆ ವೇಶದಲ್ಲಿ ಭಾಗವಹಿಸಿ, ಪಕೋಡ ತಯಾರಿಸಿ ಹಂಚಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷ ಜಯೇಂದರ್, ಉದ್ಯೋಗಾವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದ ಪ್ರಧಾನಿ ಮೋದಿಯವರು ತಮ್ಮ ಮಾತು ಉಳಿಸಿಕೊಂಡಿಲ್ಲ ಎಂದು ದೂರಿದರು. ಏಕಕಾಲದಲ್ಲಿ ಆರ್ಸಿ ಕಾಲೇಜು, ಎಸ್ಜೆಪಿ ಕಾಲೇಜು, ಮೌಂಟ್ ಕಾರ್ಮೆಲ… ಕಾಲೇಜು ಮತ್ತು ಶೇಶಾದ್ರಿಪುರ ಕಾಲೇಜುಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ
Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ
ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.