ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿ ಡಿಬಾರ್
Team Udayavani, Mar 12, 2017, 3:45 AM IST
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ 3ನೇ ದಿನವಾದ ಶನಿವಾರ ವಿದ್ಯಾರ್ಥಿಯೊಬ್ಬ ಡಿಬಾರ್ ಆಗಿದ್ದು, ಹೊರತುಪಡಿಸಿದರೆ ಯಾವುದೇ ಅಡೆತಡೆ ಇಲ್ಲದೆ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ದಾವಣಗೆರೆಯ ಹರಪ್ಪನಹಳ್ಳಿಯ ಎಸ್ಯುಜೆಎಂಪಿ ಪಿಯು ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದೆ. ವಿದ್ಯಾರ್ಥಿ ಶನಿವಾರ ನಡೆದ “ಶಿಕ್ಷಣ’ ವಿಷಯದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನುಳಿದಂತೆ ತರ್ಕಶಾಸ್ತ್ರ ಮತ್ತು ಸಾಮಾನ್ಯ ಗಣಿತ ವಿಷಯಗಳ ಪರೀಕ್ಷೆ ನಡೆದಿದ್ದು, ಯಾವುದೇ ಅಕ್ರಮ ಪ್ರಕರಣಗಳು ನಡೆದಿಲ್ಲ. ಎಂದಿನಂತೆ ಪರೀಕ್ಷಾ ಕೇಂದ್ರದ ಸುತ್ತಲು ಭದ್ರತೆ ಕೈಗೊಳ್ಳಲಾಗಿತ್ತು. ನಿಗದಿತ ಸಮಯದೊಳಗೆ ಪ್ರಶ್ನೆ ಪತ್ರಿಕೆಗಳು ಪರೀಕ್ಷಾ ಕೇಂದ್ರ ತಲುಪಿವೆ. ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ ಎಂದು ಪಿಯು ಇಲಾಖೆ ಮಾಹಿತಿ ನೀಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಲ್ಲಿ ಅನೇಕರು ಪ್ರಶ್ನೆ ಪತ್ರಿಕೆ ಸರಳವಾಗಿದ್ದು, ಅತಿಹೆಚ್ಚು ಅಂಕಗಳಿಸಲು ಅನುಕೂಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಠ್ಯಪುಸ್ತಕ ಮತ್ತು ಕಾಲೇಜಿನ ಪಠ್ಯ ಕ್ರಮದ ಆಧಾರದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದೆನು. ಇದು ಶೀಘ್ರವಾಗಿ ಅವಧಿಗೂ ಮುನ್ನವೇ ಪರೀಕ್ಷೆ ಬರೆದು ಮುಗಿಸಲು ಸಾಧ್ಯವಾಯಿತು ಎಂದು ಮಲ್ಲೇಶ್ವರದ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು ವಿದ್ಯಾರ್ಥಿ ಮಂಜುನಾಥ್ ಸಂತಸ ವ್ಯಕ್ತಪಡಿಸಿದರು.
ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಚೆನ್ನಾಗಿ ಅಭ್ಯಾಸ ಮಾಡಿದ್ದೆ. ಜತೆಗೆ ಪಠ್ಯಕ್ರಮದ ಆಧಾರದಲ್ಲಿ ಪರೀಕ್ಷೆಗೆ ಸಿದ್ಧವಾಗಿದ್ದು, ಪರೀಕ್ಷೆ ಎದುರಿಸಲು ಅನುಕೂಲವಾಯಿತು ಎಂದು ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರೇರಣಾ ಹೇಳಿದರು.
ವಿದ್ಯಾರ್ಥಿ ಸ್ನೇಹಿ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲಾಗಿತ್ತು. ಮಾದರಿ ಪ್ರಶ್ನೆ ಪತ್ರಿಕೆಗಳ ಆಧಾರದಲ್ಲಿ ಪಶ್ನೆ ಪತ್ರಿಕೆಯನ್ನು ತಯಾರಿಸಲಾಗಿದ್ದು, ಗಮನವಿಟ್ಟು ಓದಿದವರು ಶೇ.100ರಷ್ಟು ಅಂಕಗಳಿಸಬಹುದು. ಶೇ.60 ವಾಣಿಜ್ಯ ಆಧಾರಿತ ಮತ್ತು ಶೇ.40 ವಿಜ್ಞಾನ ಆಧಾರಿತ ಪಠ್ಯ ಕ್ರಮದಲ್ಲಿ ಪ್ರಶ್ನೆ ಪತ್ರಿಕೆ ಮಾಡಲಾಗಿದೆ.
– ಸಿ.ಗೋವಿಂದರಾಜು, ಅಧ್ಯಕ್ಷ, ಬೇಸಿಕ್ ಮ್ಯಾಥ್ಸ್ ನೂಟನ್ ಪಠ್ಯ ಪುಸ್ತಕ ಸಮಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.