ಈಶ್ವರಪ್ಪ ಪ್ರಧಾನಿಯ ಪುರಾನಾ ಸಾಥಿ


Team Udayavani, Feb 5, 2018, 12:27 PM IST

eshwarappa.jpg

ಬೆಂಗಳೂರು: ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಅವರನ್ನು ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು “ಮೇರಾ ಪುರಾನಾ ಸಾಥಿ’ ಎಂದು ಹೇಳಿದ್ದು ಅಚ್ಚರಿಗೆ ಕಾರಣವಾಯಿತು.

ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ಅವರು ವೇದಿಕೆ ಏರಿ ಗಣ್ಯರನ್ನು ಮಾತನಾಡಿಸುತ್ತಿದ್ದಾಗ ಈಶ್ವರಪ್ಪ ಅವರನ್ನು ಗಮನಿಸಿ ಅವರ ಬಳಿ ಬಂದು ಬೆನ್ನು ತಟ್ಟಿ ಮಾತನಾಡಿಸಿದರು. ನಂತರ ಭಾಷಣದಲ್ಲಿ ಈಶ್ವರಪ್ಪ ಅವರನ್ನು ಕುರಿತು “ಮೇರಾ ಪುರಾನಾ ಸಾಥಿ’ ಎಂದು ಸಂಭೋದಿಸಿದರು.

ಪುರಾನಾ ಸಾಥಿ ಏಕೆ?: ಈ ಕುರಿತಂತೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಹಲವು ವರ್ಷಗಳ ಹಿಂದೆ ಕಾಶ್ಮೀರದ ಲಾಲ್‌ಚೌಕ್‌ನಲ್ಲಿ ಪಾಕಿಸ್ತಾನದ ಧ್ವಜ ಹಾರುತ್ತಿತ್ತು. ಅದರ ಪಕ್ಕದಲ್ಲೇ ಗೋಡೆಯೊಂದರ ಮೇಲೆ ಉಗ್ರರು, ಭಾರತದಲ್ಲಿ ಯಾರಾದರೂ ತಾಯಿಯ ಮೊಲೆಹಾಲು ಕದ್ದಿದ್ದರೆ ಪಾಕ್‌ ಧ್ವಜ ತೆರವುಗೊಳಿಸಿ ಭಾರತದ ಧ್ವಜ ಹಾರಿಸಿ. ಅಂತಹವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಬರೆದಿದ್ದರು.

ಆಗ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಮುರಳೀಮನೋಹರ್‌ ಜೋಷಿ ಅವರು ಇಡೀ ದೇಶದ ಯುವಕರನ್ನು ಲಾಲ್‌ಚೌಕಕ್ಕೆ ಕರೆದೊಯ್ಯಲು ರಾಷ್ಟ್ರವ್ಯಾಪಿ ರ್ಯಾಲಿ ಆಯೋಜಿಸಿದ್ದರು.  ನರೇಂದ್ರ ಮೋದಿ ಉಸ್ತುವಾರಿ ವಹಿಸಿದ್ದರು. ಆಗ ತಾನು ಬಿಜೆಪಿ ಯುವ ಮೋರ್ಚಾ ಕರ್ನಾಟಕದ ಅಧ್ಯಕ್ಷನಾಗಿದ್ದೆ. ಶಾಸಕನಾಗಿಯೂ ಇದ್ದೆ. ರಾಜ್ಯದ ಯುವಕರ ರ್ಯಾಲಿ ಕೇಸರಿ ವಾಹಿನಿಯ ಉಸ್ತುವಾರಿ ತನ್ನದಾಗಿತ್ತು.

ಮೋದಿ ಅವರೊಂದಿಗೆ ಅನೇಕ ಸಭೆಗಳನ್ನು ಮಾಡಿದ್ದೆವು. ಅದನ್ನು ಈಗ ಪ್ರಧಾನಿಯವರು ನೆನಪಿಸಿಕೊಂಡು ತನ್ನನ್ನು ಪುರಾನಾ ಸಾಥಿ ಎಂದು ಹೇಳಿದ್ದಾರೆ. ಅವರು ಹಾಗೆ ಹೇಳುತ್ತಾರೆಂಬ ಕಲ್ಪನೆಯೂ ತನಗಿರಲಿಲ್ಲ. ದೇಶದ ಉನ್ನತ ನಾಯಕನಾದರೂ ಸಾಮಾನ್ಯ ಕಾರ್ಯಕರ್ತರನ್ನು ಹೇಗೆ ನೆನಪಿಟ್ಟುಕೊಳ್ಳುತ್ತಾರೆ ಎಂಬುದಕ್ಕೆ ಇದು ಉದಾಹರಣೆ ಎಂದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.