ಇಂದಿರಾ ಕ್ಯಾಂಟೀನ್‌ ಉದ್ಘಾಟಿಸೋದು ರಾಹುಲ್‌


Team Udayavani, Aug 11, 2017, 11:48 AM IST

rahul-gandhi.jpg

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್‌ ಯೋಜನೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಗಸ್ಟ್‌ 16ರಂದು ಚಾಲನೆ ದೊರೆಯಲಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಯೋಜನೆ ಚಾಲನೆ ನೀಡುವುದು ಖಚಿತವಾಗಿದೆ. 

ಪಾಲಿಕೆಯಿಂದ ಕ್ಯಾಂಟೀನ್‌ಗಳ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಆ.16ರಂದು ಮಧ್ಯಾಹ್ನ 3 ಗಂಟೆಗೆ ಜಯನಗರ ವಾರ್ಡ್‌ನ ಕನಕನಪಾಳ್ಯ ಮುಖ್ಯರಸ್ತೆಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‌ಗೆ ರಾಹುಲ್‌ ಗಾಂಧಿ ಅವರು ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. 

ಅಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಜಯನಗರ ವಾರ್ಡ್‌ನ ಕನಕನಪಾಳ್ಯ ಕ್ಯಾಂಟೀನ್‌ ಉದ್ಘಾಟಿಸಿ, ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಿಂದ ಹಮ್ಮಿಕೊಂಡಿರುವ ಇಂದಿರಾಕ್ಯಾಂಟೀನ್‌ ಕುರಿತ ಅಧಿಕೃತ ಸಭಾ ಕಾರ್ಯಕ್ರಮದಲ್ಲಿ 30 ನಿಮಿಷಗಳ ಕಾಲ ಭಾಗವಹಿಸಲಿದ್ದಾರೆ. ಆನಂತರದಲ್ಲಿ ಪಾದಯಾತ್ರೆ ಮೂಲಕ ನ್ಯಾಷನಲ್‌ ಕಾಲೇಜು ಮೈದಾನಕ್ಕೆ ತೆರಳಿ ಅಲ್ಲಿ ನಡೆಯಲಿರುವ ಕಾಂಗ್ರೆಸ್‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈಗಾಗಲೇ ಬಿಬಿಎಂಪಿ ವತಿಯಿಂದ ಆಮಂತ್ರಣ ಪ್ರತ್ರಿಕೆನ್ನು ಸಿದ್ಧಪಡಿಸಲಾಗಿದ್ದು, ಮುದ್ರಣಕ್ಕೆ ನೀಡಲಾಗಿದೆ. ರಾಹುಲ್‌ ಗಾಂಧಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್‌ ಹಾಗೂ ಸ್ಥಳೀಯ ಶಾಸಕ ಆರ್‌.ವಿ. ದೇವರಾಜ್‌ ಅವರ ತಂಡವು ಕನಕನಪಾಳ್ಯ ಇಂದಿರಾ ಕ್ಯಾಂಟೀನ್‌ ಸ್ಥಳ ಪರಿಶೀಲನೆ ನಡೆಸಿದ್ದು, ರಾಹುಲ್‌ಗಾಂಧಿ ಅವರ ಆಗಮದ ಹಿನ್ನೆಲೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಸ್ಥಳೀಯ ಮುಖಂಡರಿಗೆ ಪರಮೇಶ್ವರ್‌ ಸೂಚನೆ ನೀಡಿದ್ದಾರೆ. 

ಆಯುಕ್ತರಿಂದ ನಿರಂತರ ಪರಿಶೀಲನೆ
ಆಗಸ್ಟ್‌ 16ರ ವೇಳೆಗೆ 125 ಕ್ಯಾಂಟೀನ್‌ ನಿರ್ಮಾಣ ಪೂರ್ಣಗೊಳಿಸಲೇಬೇಕಾದ ಒತ್ತಡ ಬಿಬಿಎಂಪಿ ಒಳಗಾಗಿದೆ. ಆ ಹಿನ್ನೆಲೆಯಲ್ಲಿ ಎಲ್ಲ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಅಧಿಕಾರಿಗಳು ಹಗಲು ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ.  ಆಗಸ್ಟ್‌ 15ರ ವೇಳೆಗೆ 125 ಕ್ಯಾಂಟೀನ್‌ ಪೂರ್ಣಗೊಳಿಸಬೇಕು ಎಂದು ಆಯುಕ್ತ ಎನ್‌. ಮಂಜುನಾಥಪ್ರಸಾದ್‌ ಅವರು ರಾತ್ರಿ ಪೂರ್ತಿ ಕಾಮಗಾರಿ ಸ್ಥಳಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 

ಗುರುವಾರ ರಾತ್ರಿ 9.30ರಿಂದ ತಡರಾತ್ರಿ 1.30ವರೆಗೆ ವಿವಿಧ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಕಾಮಗಾರಿ ಪರಿಶೀಲನಾ ಕಾರ್ಯ ಹಮ್ಮಿಕೊಂಡಿದ್ದಾರೆ. ಈ ವೇಳೆ ಕೆಲವು ಕಡೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವುದನ್ನು ಗಮನಿಸಿದ ಅವರು ದಿನಕ್ಕೆ 7-8 ಕ್ಯಾಂಟೀನ್‌ ನಿರ್ಮಾಣ ಪೂರ್ಣಗೊಳ್ಳಬೇಕು. ನಿರ್ಮಾಣ ವಿಳಂಬವಾದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. 

ಜೂನ್‌ 12ರಿಂದ ಆರಂಭವಾದ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಕಾರ್ಯವನ್ನು ತೀವ್ರಗತಿಯಲ್ಲಿ ಕೈಗೆತ್ತಿಕೊಂಡಿರುವ ಪಾಲಿಕೆಯ ಅಧಿಕಾರಿಗಳು, ಕೇವಲ 65 ದಿನಗಳ ಸೀಮಿತ ಅವಧಿಯಲ್ಲಿ ಗುರುವಾರದ ವರೆಗೆ 85 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಪೂರ್ಣಗೊಳಿಸಿದ್ದಾರೆ.

108 ಕಡೆಗಳಲ್ಲಿ ಕ್ಯಾಂಟೀನ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಪ್ರತಿ ದಿನ 7-8 ಕ್ಯಾಂಟೀನ್‌ಗಳ ನಿರ್ಮಾಣ ಪೂರ್ಣಗೊಳ್ಳಲಿದೆ. ಉಳಿದ ಐದು ದಿನಗಳಲ್ಲಿ 125 ಕ್ಯಾಂಟೀನ್‌ ನಿರ್ಮಾಣ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.