ಉತ್ತರ ಭಾಗದಲ್ಲಿ ರಾಹುಲ್‌ ಯಾತ್ರೆ​​​​​​​


Team Udayavani, Feb 10, 2018, 6:00 AM IST

Rahul-Gandhi-800-A.jpg

ಬೆಂಗಳೂರು: ಪ್ರಧಾನಿ ನರೇಂದ್ರಮೋದಿ ಪರಿವರ್ತನಾಯಾತ್ರೆ ಸಮಾರೋಪದಲ್ಲಿ ಪಾಲ್ಗೊಂಡು ತೆರಳಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ “ಜನಾಶೀರ್ವಾದ’ ಯಾತ್ರೆಯಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಆಗಮಿಸುತ್ತಿದ್ದು,  ಈ ಮೂಲಕ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧನಾಸಂಭ್ರಮ ಯಾತ್ರೆ ಮುಗಿಸಿದ್ದು ಎರಡನೇ ಹಂತದಲ್ಲಿ ಜನಾಶೀರ್ವಾದ ಯಾತ್ರೆಗೆ ಖುದ್ದು ರಾಹುಲ್‌ಗಾಂಧಿ ಬರುತ್ತಿದ್ದು, ರಾಜ್ಯ ಕಾಂಗ್ರೆಸ್ಸಿಗರಲ್ಲಿ ಚುನಾವಣೆ ಉತ್ಸಾಹ ತುಂಬಲಿದ್ದಾರೆ. ನಾಲ್ಕು ದಿನಗಳ ಪ್ರವಾಸದಲ್ಲಿ ಹೈದರಾಬಾದ್‌ -ಕರ್ನಾಟಕ ಭಾಗದ ಹೊಸಪೇಟೆಯಿಂದ ಬಸವಕಲ್ಯಾಣದವರೆಗೆ  ರಾಹುಲ್‌ ರೋಡ್‌ ಶೋ ಹಾಗೂ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೊಸಪೇಟೆಯಲ್ಲಿ ವಿಶೇಷ ಸ್ಥಾನಮಾನದಿಂದ ಸವಲತ್ತು ಪಡೆದಿರುವ ಫ‌ಲಾನುಭವಿಗಳಿಂದ ಯಾತ್ರೆಗೆ ಚಾಲನೆ ದೊರೆಯಲಿರುವುದು ವಿಶೇಷ. ಸಮಾವೇಶಗಳಲ್ಲಿ ಪಾಲ್ಗೊಳ್ಳುವ ಜತೆಗೆ ಮಠ ಹಾಗೂ ದೇವಾಲಯಗಳಿಗೆ ಭೇಟಿ ನೀಡುವ ಕಾರ್ಯಕ್ರಮವೂ ಇದೆ.

ಎಐಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ರಾಹುಲ್‌ಗಾಂಧಿಯವರಿಗೆ ಅದ್ಧೂರಿ ಸ್ವಾಗತ ಕೋರಲು ರಾಜ್ಯ ಕಾಂಗ್ರೆಸ್‌ ಸಜ್ಜಾಗಿದೆ.

ರಾಹುಲ್‌ ಪ್ರವಾಸ ಯಶಸ್ವಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಆಧ್ಯಕ್ಷ ಡಾ.ಜಿ.ಪರಮೇಶ್ವರ್‌, ಕಾರ್ಯಾಧ್ಯಕ್ಷರಾದ ಎಸ್‌.ಆರ್‌.ಪಾಟೀಲ್‌, ದಿನೇಶ್‌ಗುಂಡೂರಾವ್‌ ಸಮಾಲೋಚನೆ ನಡೆಸಿ ಆಯಾ ಜಿಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದಾರೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಅವರಂತೂ ರಾಹುಲ್‌ ಪ್ರವಾಸದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದಾರೆ.

ಶುಕ್ರವಾರ ವಿಧಾನಮಂಡಲ ಅಧಿವೇಶನ ಮುಗಿದ ತಕ್ಷಣ ಹೈದರಾಬಾದ್‌-ಕರ್ನಾಟಕ ಭಾಗದ ಸಚಿವರು, ಶಾಸಕರು, 
ವಿಧಾನಪರಿಷತ್‌ ಸದಸ್ಯರು ರಾಹುಲ್‌ಗಾಂಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ತೆರಳಿದರು.

ಹೈದರಾಬಾದ್‌-ಕರ್ನಾಟಕ ಭಾಗದ ವಿಶೇಷ ಅಭಿವೃದ್ಧಿಗಾಗಿ 371 ಜೆ ಕಲಂ ಜಾರಿ ಯುಪಿಎ ಸರ್ಕಾರದ ಅವಧಿಯಲ್ಲೇ ಆಗಿದ್ದರಿಂದ ಆ ಭಾಗದಿಂದಲೇ ರಾಹುಲ್‌ ಪ್ರವಾಸ ಪ್ರಾರಂಭಿಸುತ್ತಿದ್ದಾರೆ.

ರಾಹುಲ್‌ ಕಾರ್ಯಕ್ರಮ
ಶನಿವಾರ ಮಧ್ಯಾಹ್ನ 1 ಗಂಟೆಗೆ ಹೊಸಪೇಟೆಗೆ ಆಗಮಿಸಲಿರುವ ರಾಹುಲ್‌ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಹುಲಿಗೆಮ್ಮ ದೇವಾಲಯ, ಗವಿಸಿದ್ಧೇಶ್ವರ ಮಠ ಭೇಟಿ, ಕೊಪ್ಪಳದ ಪಾಲಿಕೆ ಮೈದಾನದಲ್ಲಿ ಸಭೆ. ಸಂಜೆ 6.45 ಕ್ಕೆ ಯಲಬುರ್ಗಾ ಕುಕನೂರಿನ ವಿದ್ಯಾನಂದ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ. ರಾತ್ರಿ ಅಲ್ಲೇ ವಾಸ್ತವ್ಯ.

ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಾಯಕರ ಭೇಟಿ, ಕಾರಟಗಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶ. ಸಿಂಧನೂರಿನಲ್ಲಿ ಸಂಜೆ 6 ಕ್ಕೆ ರೈತ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಂವಾದ. ರಾಯಚೂರಿನಲ್ಲಿ ವಾಸ್ತವ್ಯ ಸೋಮವಾರ ಬೆಳಗ್ಗೆ 11.30 ರವರೆಗೆ ನಾಯಕರು, ಗಣ್ಯರ ಭೇಟಿ. ದೇವದುರ್ಗದಲ್ಲಿ 12.15 ಕ್ಕೆ ಬುಡಕಟ್ಟು ರ್ಯಾಲಿ. ಜೇವರ್ಗಿಯ ಕ್ರೀಡಾ ಮೈದಾನದಲ್ಲಿ ಮಧ್ಯಾಹ್ನ 3.20 ಕ್ಕೆ ಸಾರ್ವಜನಿಕ ಸಭೆ. ಸಂಜೆ .5.20 ಕ್ಕೆ ಕಲಬುರಗಿಯ ನ್ಯೂಟನ್‌ ಶಾಲೆಯ ಮೈದಾನದಲ್ಲಿ ಸಾರ್ವಜನಿಕ ಸಭೆ. ಸಂಜೆ 6.30 ಕ್ಕೆ ಖ್ವಾಜಾ ಬಂದೇ ನವಾಜ್‌ ದರ್ಗಾಗೆ ಭೇಟಿ. ರಾತ್ರಿ ವಾಸ್ತವ್ಯ.

ಮಂಗಳವಾರ ಮಾಜಿ ಸಚಿವ ದಿವಂಗತ ಕಮರುಲ್‌ ಇಸ್ಲಾಂ ಕುಟುಂಬದವರ ಭೇಟಿ. ಎಚ್‌ಕೆಇಎಸ್‌ ಸಭಾಂಗಣದಲ್ಲಿ ವೃತ್ತಿಪರರು ಹಾಗೂ ಉದ್ದಿಮೆದಾರರೊಂದಿಗೆ ಸಂವಾದ. ಬಳಿಕ ಮಧ್ಯಾಹ್ನ 12 ಗಂಟೆಗೆ ಬೀದರ್‌ನ ಬಸವಕಲ್ಯಾಣದ ಆನುಭವ ಮಂಟಪಕ್ಕೆ ಭೇಟಿ. ಬಳಿಕ ದೆಹಲಿಗೆ ನಿರ್ಗಮನ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.