ಇನ್ನೂ ಎರಡು-ಮೂರು ದಿನ ರಾಜ್ಯದಲ್ಲೂ ಮಳೆ
Team Udayavani, Dec 1, 2017, 7:00 AM IST
ಬೆಂಗಳೂರು: ಕೇರಳದ ದಕ್ಷಿಣ ಕರಾವಳಿಯಲ್ಲಿ “ಒಕಿ’ ಚಂಡಮಾರುತದ ಪ್ರಭಾವ ತಕ್ಕಮಟ್ಟಿಗೆ ನೆರೆಯ ಕರ್ನಾಟಕದ ಮೇಲೂ ಆಗಿದೆ. ಇದರಿಂದಾಗಿ ಅಲ್ಲಲ್ಲಿ ಹಗುರವಾದ ಮಳೆಯಾಗುತ್ತಿದ್ದು, ಇನ್ನೂ ಎರಡು-ಮೂರು ದಿನ ಇದೇ ವಾತಾವರಣ ಮುಂದುವರಿಯಲಿದೆ.
“ಒಕಿ’ ಮುಂದಿನ 24 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರಿಂದ ಕೇರಳದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯದ ಮೇಲೆ ಈ ಚಂಡಮಾರುತದ ಪ್ರಭಾವ ಅಷ್ಟಾಗಿ ಇರುವುದಿಲ್ಲ. ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಹಗುರವಾದ ಮಳೆ ಹಾಗೂ ಉಳಿದೆಡೆ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಎಸ್.ಎಂ. ಮೇತ್ರಿ ತಿಳಿಸಿದ್ದಾರೆ.
ಕೇರಳದ ದಕ್ಷಿಣದಲ್ಲಿರುವ “ಒಕಿ’ ವಾಯವ್ಯ ದಿಕ್ಕಿನಲ್ಲಿ ಅಂದರೆ ಲಕ್ಷದ್ವೀಪದತ್ತ ಮುಂದುವರಿಯುವ ಲಕ್ಷಣಗಳಿವೆ. ಹಾಗಾಗಿ, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಇನ್ನೂ ಎರಡು-ಮೂರು ದಿನಗಳು ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ, ಉತ್ತರ ಒಳನಾಡಿನಲ್ಲಿ ಚಂಡಮಾರುತದ ಯಾವುದೇ ಪ್ರಭಾವ ಇರುವುದಿಲ್ಲ. ಹಾಗಾಗಿ, ಎಂದಿನಂತೆ ಒಣಹವೆ ಮುಂದುವರಿಯಲಿದೆ ಎಂದು ಅವರು ಹೇಳಿದರು. ಈ ಮಧ್ಯೆ ಬೆಂಗಳೂರು ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗಿದೆ. ಬಹುತೇಕ ಕಡೆಗಳಲ್ಲಿ ಮೋಡಕವಿದ
ವಾತಾವರಣ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.