ರಾಮಚಂದ್ರ “ನಮ್ಮ ಬೆಂಗಳೂರಿಗ’


Team Udayavani, Mar 13, 2017, 12:37 PM IST

rajeev-chandra.jpg

ಬೆಂಗಳೂರು: ಎತ್ತಿನಹೊಳೆ ಯೋಜನೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ 24 ಟಿಎಂಸಿ ನೀರು ಪೂರೈಸುವುದು ವೈಜ್ಞಾನಿಕವಾಗಿ ಸಾಧ್ಯವಿಲ್ಲ ಎಂಬುದನ್ನು ನಾನು ಹೇಳಿದಾಗ ನಾನು ಎಲ್ಲಿಯವನು ಎಂದು ಸರ್ಕಾರ ಪ್ರಶ್ನಿಸಿತ್ತು. ಈಗ ನಮ್ಮ ಬೆಂಗಳೂರು ಪ್ರತಿಷ್ಠಾನ “ನಮ್ಮ ಬೆಂಗಳೂರಿಗ’ ಪ್ರಶಸ್ತಿ ನೀಡಿದೆ. ಹೀಗಾಗಿ ನಾನು ಹೆಮ್ಮೆಯ ಬೆಂಗಳೂರಿಗ ಎಂದು ಹೇಳಿಕೊಳ್ಳುತ್ತೇನೆ ಎಂದು ವಿಜ್ಞಾನಿ ಡಾ.ಟಿ.ವಿ.ರಾಮಚಂದ್ರ ಹೇಳಿದ್ದಾರೆ.

ನಮ್ಮ ಬೆಂಗಳೂರು ಫೌಂಡೇಷನ್‌ ವತಿಯಿಂದ ಭಾನುವಾರ ಪುರಭವನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 8ನೇ ಆವೃತ್ತಿಯ “ನಮ್ಮ ಬೆಂಗಳೂರಿಗ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಬಯಲು ಸೀಮೆಯ ಕೆಲವು ಜಿಲ್ಲೆಗಳಿಗೆ ನೀರು ಹರಿಸಲು ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸುತ್ತಿರುವ ಸರ್ಕಾರ, 24 ಟಿಎಂಸಿ ನೀರು ಪೂರೈಸುವುದಾಗಿ ಹೇಳಿದೆ.

ಆದರೆ, ಯೋಜನೆಯಲ್ಲಿ ಲಭ್ಯವಿರುವ ನೀರಿನ ಪ್ರಮಾಣವೇ 9.5 ಟಿಎಂಸಿ ಇರುವಾಗ ಉಳಿದ ನೀರನ್ನು ಎಲ್ಲಿಂದ ತರಲು ಸಾಧ್ಯ? ಈ ಬಗ್ಗೆ ಈ ಬಗ್ಗೆ ವೈಜ್ಞಾನಿಕವಾಗಿ ನಾನು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದರೆ ನಾನ್ಯಾರು, ಎಲ್ಲಿಯವನು ಎಂದು ಪ್ರಶ್ನಿಸುವ ಮೂಲಕ ನನ್ನ ತೇಜೋವಧೆಗೆ ಪ್ರಯತ್ನಿಸಲಾಯಿತು. ಈಗ “ನಮ್ಮ ಬೆಂಗಳೂರಿಗ ಪ್ರಶಸ್ತಿ’ ಪಡೆಯುವುದರೊಂದಿಗೆ ನಾನು ಹೆಮ್ಮೆಯ ಬೆಂಗಳೂರಿಗ ಎಂದು ಹೇಳಿಕೊಳ್ಳುತ್ತೇನೆ ಎಂದರು. 

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರು 1500 ಕೆರೆಗಳನ್ನು ನಿರ್ಮಿಸಿದ್ದರು. ಆದರೆ, ಇಂದು ಬಹುತೇಕ ಕೆರೆಗಳು ನಾಶವಾಗಿ ನಗರದಲ್ಲಿ ಅಂತರ್ಜಲ ಬತ್ತಿ ನೀರಿನ ಸಮಸ್ಯೆ ಎದುರಾಗಿದೆ. ಶೇ. 40ರಷ್ಟು ಮಂದಿ ಕೊಳವೆಬಾವಿ ನೀರನ್ನೇ ಅವಲಂಬಿಸಿದ್ದಾರೆ ಎಂದು ಹೇಳಿದ ಅವರು,  ನೀರಿನ ಮತ್ತು ಕಸದ ಮಾಫಿಯಾ ಸೇರಿ ಇಡೀ ಬೆಂಗಳೂರನ್ನೇ ಹಾಳು ಮಾಡುತ್ತಿದೆ.

ಕಲುಷಿತ ನೀರು ಮತ್ತು ವಾತಾವರಣದಿಂದ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ಹೇಳಿದರು. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ.ಪಾಟೀಲ್‌ ಮಾತನಾಡಿ, ನಾಗರೀಕರು ಸರ್ಕಾರದ ಜತೆಗೂಡಿ ಕೆಲಸ ಮಾಡಬೇಕು. ಎಲ್ಲದಕ್ಕೂ ಸರ್ಕಾರವನ್ನೇ ಕೇಳುವಂತಾಗಬಾರದು. ತಮ್ಮ ಹಕ್ಕುಗಳು ಮತ್ತು ಪರಿಸರ ಸಂರಕ್ಷಣೆಗಾಗಿ ಹೋರಾಡಬೇಕು. ಇಲ್ಲದೇ ಇದ್ದರೆ ಪ್ರಜಾಪ್ರಭುತ್ವ ಕುರುಡಾಗುತ್ತದೆ.

ಈ ನಿಟ್ಟಿನಲ್ಲಿ ನಮ್ಮ ಬೆಂಗಳೂರು ಫೌಂಡೇಶನ್‌ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾ ಸಿದರು.ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರಶೇಖರ್‌, ವಿಧಾನಪರಿಷತ್‌ ಸದಸ್ಯೆ ತಾರಾ ಅನುರಾಧ, ಹಿರಿಯ ವಕೀಲ ಸಜ್ಜನ್‌ ಪೂವಯ್ಯ, ನಮ್ಮ ಬೆಂಗಳೂರು ಫೌಂಡೇಷನ್‌ನ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್‌ ಪಬ್ಬಿಶೆಟ್ಟಿ ಸೇರಿ ಇನ್ನಿತರಿದ್ದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.