![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 30, 2022, 8:12 PM IST
ಬೆಂಗಳೂರು : ” ಮಾನ್ಯ ಅಧ್ಯಕ್ಷರೆ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನನಗೆ ವಾಕ್ ಸ್ಥಾನದಲ್ಲಿ ಕುಜ ದೋಷ ಕಾಣಿಸಿಕೊಂಡಿತಂತೆ. ಹೀಗಾಗಿ ನಾನು ಮಾಧ್ಯಮಗಳ ಕೆಂಗಣ್ಣಿಗೆ ಗುರಿಯಾದೆ. ಈಗ ಸಿದ್ದರಾಮಯ್ಯ ಅವರಿಗೆ ಕುಜದೋಷ ಕಾಡುತ್ತಿರಬೇಕು” ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮಾಧ್ಯಮ ಹಾಗೂ ರಾಜಕಾರಣಿಗಳ ಸಂಬಂಧ ವನ್ನು ಬಿಡಿಸಿಟ್ಟಿದ್ದಾರೆ.
ಬೆಳಗಾವಿಯಲ್ಲಿ ನಾನು ನೀಡಿದ ಹೇಳಿಕೆ ಬಳಿಕ ಆದ ಬೆಳವಣಿಗೆ ಎಲ್ಲರಿಗೂ ಗೊತ್ತು. ಇದಾದ ಬಳಿಕ ನಾನು ನಿಮ್ಮ ಊರಿನ ಸಮೀಪದ ಗೋಕರ್ಣಕ್ಕೆ ಹೋಗಿ ಜ್ಯೋತಿಷಿಯೊಬ್ಬರನ್ನು ಭೇಟಿಯಾಗಿ ಚರ್ಚೆ ನಡೆಸಿದಾಗ ಅವರು ” ನಿಮಗೆ ವಾಕ್ ಸ್ಥಾನದಲ್ಲಿ ಕುಜದೋಷ ಕಾಣಿಸಿಕೊಂಡಿದೆ ಎಂದರು” ಎಂದು ಮಾಧ್ಯಮಗಳ ಕಾರ್ಯ ವೈಖರಿಯನ್ನು ಪರೋಕ್ಷವಾಗಿ ಟೀಕಿಸಿದರು.
ಚುನಾವಣಾ ವ್ಯವಸ್ಥೆ ಸುಧಾರಣೆಯಾಗಬೇಕಿದ್ದರೆ ಪ್ರಜಾಪ್ರಭುತ್ವದ ನಾಲ್ಕು ಅಂಗಗಳೂ ಸರಿಯಾಗಿರಬೇಕು. ಆದರೆ ಕೆಲವೊಮ್ಮೆ ಮಾಧ್ಯಮಗಳು ಬೆತ್ತಲೆ ಓಡಾಡುವವರನ್ನು ಬಿಟ್ಟು ಕೌಪೀನದಲ್ಲಿ ಮಾನಮುಚ್ಚಿಕೊಂಡವರ ಬಟ್ಟೆಯನ್ನೇ ಕಿತ್ತು ಬಿಡುತ್ತವೆ. ಅಲ್ಪಸ್ವಲ್ಪ ಮರ್ಯಾದೆ ಉಳಿಸಿಕೊಂಡವರ ಬಗ್ಗೆ ಕರುಣೆ ಇಟ್ಟುಕೊಳ್ಳಿ ಎಂದು ಮನವಿ ಮಾಡಿದರು.
ಇದನ್ನೂ ಓದಿ : ಜನರಿಗೆ ಇವಿಎಂ ಗಳ ಮೇಲೆ ಭರವಸೆ ಕಡಿಮೆಯಾಗುತ್ತಿದೆ : ಸಿದ್ದರಾಮಯ್ಯ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.