![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Nov 11, 2019, 11:26 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ವರದಿಯಾಗಿದೆ. ನಗರದ ಹಲಸೂರು ಠಾಣೆಯಲ್ಲಿ ಸಂತ್ರಸ್ತೆ ನೀಡಿರುವ ದೂರಿನ ಆಧಾರದಲ್ಲಿ ಈ ಘಟನೆ ನವಂಬರ್ 07ರಂದು ನಡೆದಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಹಲಸೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡಸಂಹಿತೆಯ 363, 347, 376, 394, 506 ಸೆಕ್ಷನ್ ಗಳಡಿಯಲ್ಲಿ ದೂರು ದಾಖಲಾಗಿದೆ.
ನಗರದ ಪ್ರತಿಷ್ಠಿತ ಎಂ.ಜಿ.ರಸ್ತೆಯಲ್ಲಿ ಯುವತಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸ್ಕೋಡಾ ಕಾರಿನಲ್ಲಿ ಬಂದ ಯುವಕ ತನ್ನನ್ನು ಹೊಟೇಲ್ ಉದ್ಯಮಿ ಎಂದು ಪರಿಚಯಿಸಿಕೊಂಡು ಯುವತಿಯನ್ನು ಕಾರಿಗೆ ಹತ್ತಿಸಿಕೊಂಡಿದ್ದಾನೆ.
ಬಳಿಕ ತನ್ನ ತಂದೆ ಶಾಸಕರಾಗಿದ್ದಾರೆ ಮತ್ತು ತಾಯಿ ವೈದ್ಯೆಯಾಗಿದ್ದು ತನ್ನನ್ನು ಕಾರ್ತಿಕ್ ರೆಡ್ಡಿ ಎಂದು ಪರಿಚಯಿಸಿಕೊಂಡು ತಾನೊಬ್ಬ ಹೊಟೇಲ್ ಉದ್ಯಮಿ ಎಂದು ಪರಿಚಯಿಸಿಕೊಂಡು ಯುವತಿಗೆ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ ಕರೆದೊಯ್ದಿದ್ದು ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ಯುವತಿಯನ್ನು ತನ್ನ ಕಾರಿನಲ್ಲಿ ಸುತ್ತಿಸಿದ ಯುವಕ ನೇರವಾಗಿ ಆಕೆಯನ್ನು ಮಾರತ್ ಹಳ್ಳಿ ವೃತ್ತದ ಬಳಿ ಇರುವ ಮುನಿರೆಡ್ಡಿ ಪಾಳ್ಯ ಲೇ ಔಟ್ ನಲ್ಲಿರುವ ಅಪಾರ್ಟ್ ಮೆಂಟ್ ಒಂದಕ್ಕೆ ಕರೆದೊಯ್ದಿದ್ದಾನೆ. ಈ ಸಂದರ್ಭದಲ್ಲಿ ಭಯಗೊಂಡ ಯುವತಿ ಪ್ರತಿಭಟಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ತನ್ನಲ್ಲಿ ಗನ್ ಇದೆ ಎಂದು ಆಕೆಯನ್ನು ಬೆದರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಯುವತಿಯ ಪರ್ಸ್ ಮತ್ತು ಮೊಬೈಲ್ ಕಿತ್ತುಕೊಂಡು ಕೋಣೆಯಲ್ಲಿ ಕೂಡಿಹಾಕಿ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.