ಇನ್ಮುಂದೆ ಓದುಗರ ಮನೆ ಬಾಗಿಲಿಗೇ ಪುಸ್ತಕ ಮಳಿಗೆ


Team Udayavani, Feb 16, 2018, 12:51 PM IST

inmunde-books.jpg

ಬೆಂಗಳೂರು: ಕನ್ನಡ‌ ಪುಸ್ತಕ ಪ್ರಿಯರಿಗೆ ಇಲ್ಲಿದೆ ಸಿಹಿ ಸುದ್ದಿ. ನಿಮ್ಮ ನೆಚ್ಚಿನ ಪುಸ್ತಕಗಳನ್ನು ಕೊಳ್ಳಲು ಎಲ್ಲೋ ಇರುವ ಪುಸ್ತಕ ಮಳಿಗೆಗಳನ್ನು ಅಥವಾ ದೂರದೂರುಗಳಲ್ಲಿರುವ ಅಂಗಡಿಗಳಿಗೆ ಹುಡುಕಿಕೊಂಡು ಹೋಗಬೇಕಿಲ್ಲ. ಇನ್ನು ಮುಂದೆ ನೀವಿರುವ ಜಾಗಕ್ಕೇ ಪುಸ್ತಕಗಳು ಬರಲಿವೆ! 

ನಾಡಿನ ಪುಸ್ತಕ ಪ್ರಿಯರ ಮನದಿಂಗಿತವನ್ನು ಅರಿತಿರುವ ಕನ್ನಡ ಪುಸ್ತಕ ಪ್ರಾಧಿಕಾರ ಈ ಕಾರಣಕ್ಕಾಗಿಯೇ ಹೊಸ ಯೋಜನೆ ರೂಪಿಸುತ್ತಿದೆ. ಕನ್ನಡ ಪುಸ್ತಕಗಳನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು ಎಂಬ ಸದುದ್ದೇಶದಿಂದ ಇಂಥದ್ದೊಂದು ಪ್ರಯತ್ನಕ್ಕೆ ಮುಂದಾಗಿದೆ.

ಪುಸ್ತಕ ಕೊಳ್ಳಲೆಂದು ನೂರಾರು ಕಿಲೋಮೀಟರ್‌ ದೂರದಿಂದ ಹಣ ಮತ್ತು ಸಮಯ ಖರ್ಚು ಮಾಡಿ ನಗರಕ್ಕೆ ಬರುವುದನ್ನು ಅಥವಾ ಎಲ್ಲೋ ಇರುವ ಮಳಿಗೆಗಳನ್ನು ಹುಡುಕುವ ತಾಪತ್ರಯವನ್ನು ಮನಗಂಡಿರುವ ಪಾಧಿಕಾರ, ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ.  

ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕೆಎಸ್‌ಆರ್‌ಟಿಸಿ ಜಂಟಿಯಾಗಿ “ಸಂಚಾರಿ ವಾಹನ ‘ಯೋಜನೆ ಸಿದ್ಧಗೊಳಿಸಿದೆ. ಇದರಲ್ಲಿ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸುವ ಎಲ್ಲಾ ಪುಸ್ತಕಗಳು ದೊರೆಯಲಿವೆ. ವಾಹನವು ಜನರು ಇರುವ ಕಡೆಗಳಲ್ಲಿ ನಿತ್ಯ ಸಂಚರಿಸಲಿವೆ. ಸಂತೆ ನಡೆಯುವ ಸ್ಥಳ, ಶಾಲಾ ಕಾಲೇಜು ಸೇರಿದಂತೆ ಜನದಟ್ಟಣೆ ಇರುವ ಕಡೆಗಳಿಗೆ ತೆರಳಿ ಗ್ರಾಹಕ ಬಯಸಿದ ಪುಸ್ತಕವನ್ನು ನೀಡಲಾಗುತ್ತದೆ.

ಪುಸ್ತಕ ಪ್ರಿಯರು ತಮಗೆ ಇಷ್ಟವಾದ ಪುಸ್ತಕಗಳನ್ನು ಕೊಳ್ಳಬಹುದು. ಮೊದಲ ಹಂತದಲ್ಲಿ ಸಂಚಾರಿ ವಾಹನಗಳು ಬೆಂಗಳೂರು, ಬೆಳಗಾವಿ, ಮಂಗಳೂರು, ಕಲಬುರಗಿಯಲ್ಲಿ ಸಂಚರಿಸಲಿವೆ. ಇದಾದ ಬಳಿಕ ಜಿಲ್ಲಾ/ ತಾಲೂಕು ಮಟ್ಟದವರೆಗೂ ವಿಸ್ತರಿಸುವ ಕುರಿತಂತೆ ಸಮಾಲೋಚನೆ ನಡೆದಿದೆ. ಆಯಾ ವಲಯದ ಜಿಲ್ಲಾ/ತಾಲೂಕು ಮಟ್ಟದಲ್ಲಿ ಒಂದೊಂದು ವಾರ ಸಂಚರಿಸುವ ಉದ್ದೇಶ ಹೊಂದಲಾಗಿದೆ. 

ಕೆಎಸ್‌ಆರ್‌ಟಿಸಿ ಸಾಥ್‌:  ಸಂಚಾರಿ ಪುಸ್ತಕ ವಾಹನ ಯೋಜನೆ ಕಾರ್ಯಗತಗೊಳಿಸಲು ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಗಳ ಜತೆ, ಕನ್ನಡ ಪುಸ್ತಕ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸಿ ಯೋಜನೆಯ ರೂಪುರೇಷೆ ಬಗ್ಗೆ ನಿರ್ಧರಿಸಿದ್ದಾರೆ. ಅದರ ಫ‌ಲವಾಗಿ ಇದೀಗ ಪ್ರಾಧಿಕಾರಕ್ಕೆ ಸಂಚಾರಿ ವಾಹನಗಳನ್ನು ನೀಡಲು ಕೆಎಸ್‌ಆರ್‌ಟಿಸಿ ಕೂಡ ಒಪ್ಪಿಕೊಂಡಿದೆ. ಆರಂಭದಲ್ಲಿ ಐದು ಬಸ್‌ಗಳನ್ನು ನೀಡುವಂತೆ ಸಾರಿಗೆ ಇಲಾಖೆಗೆ ಪ್ರಾಧಿಕಾರ ಮನವಿ ಮಾಡಿದೆ. 

ಆರ್ಥಿಕ ಸಹಾಯ ನಿರೀಕ್ಷೆ: ಯೋಜನೆಯಲ್ಲಿರುವಂತೆ ಒಟ್ಟು 4 ವಲಯಗಳಲ್ಲಿ ಈ ಬಸ್‌ ಸಂಚರಿಸಲಿವೆ. ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಒಂದು ಸಂಚಾರಿ ವಾಹನ ವಾರ್ಡ್‌ ಮಟ್ಟದಲ್ಲಿ ತೆರಳಲಿದೆ. ಜಿಲ್ಲಾವಾರು ಯಶಸ್ಸಿನ ನಂತರ ತಾಲೂಕು ಮಟ್ಟದಲ್ಲಿ ವಿಸ್ತರಿಸುವ ಆಲೋಚನೆ ಪ್ರಾಧಿಕಾರದ್ದು. ಸಾಕಷ್ಟು ಹಣದ ಅಗತ್ಯವಿರುವ ಹಿನ್ನೆಲೆಯಲ್ಲಿ ಸರ್ಕಾರ ಬಜೆಟ್‌ನಲ್ಲಿ ನೀಡುವ ಆರ್ಥಿಕ ಸಹಾಯವನ್ನು ನೋಡಿ ಮುಂದಿನ ಹಂತಗಳಲ್ಲಿ ಯೋಜನೆ ವಿಸ್ತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.   

ಸಾರಿಗೆ ಸಚಿವರಿಂದ ಗ್ರೀನ್‌ಸಿಗ್ನಲ್‌: ಪುಸ್ತಕಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನೇ ಸಂಚಾರಿ ವಾಹನಗಳನ್ನಾಗಿ ಬಳಕೆ ಮಾಡಿಕೊಳ್ಳಲು ಬಸ್‌ಗಳ ನಿರ್ವಹಣೆ ಮತ್ತು ವೆಚ್ಚದ ಕುರಿತು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಅವರ ಜತೆ ಮಾತುಕತೆ ನಡೆದಿದೆ. ಇದಕ್ಕೆ ಸಚಿವರು ಕೂಡ ಸಮ್ಮತಿಸಿದ್ದಾರೆ. ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಜತೆಗೂ ಸಮಾಲೋಚನೆ ನಡೆದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಹಳ್ಳಿ ಹಳ್ಳಿಗೂ ಕನ್ನಡದ ಪುಸ್ತಕಗಳನ್ನು ಜನತೆಗೆ ತಲುಪಿಸಬೇಕು ಎಂಬ ಉದ್ದೇಶ ಪ್ರಾಧಿಕಾರದ್ದಾಗಿದೆ. ಬೆಳ್ಳಿಹಬ್ಬದ ಹಿನ್ನೆಲೆಯಲ್ಲಿ ಹಲವು ಯೋಜನೆಗಳನ್ನು ಪ್ರಾಧಿಕಾರ ರೂಪಿಸುತ್ತಿದೆ. ಇದರಲ್ಲಿ ಸಂಚಾರಿ ವಾಹನ ಯೋಜನೆ ಕೂಡ ಒಂದು.  
-ವಸುಂಧರಾ ಭೂಪತಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ

* ದೇವೇಶ ಸೂರಗುಪ್ಪ 

ಟಾಪ್ ನ್ಯೂಸ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

7

‘The Indian House’ Movie: ರಾಮ್‌ಚರಣ್‌ ನಿರ್ಮಾಣದಲ್ಲಿ ʼದಿ ಇಂಡಿಯನ್‌ ಹೌಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.