ಗಣ್ಯರ ದೋಸೆ ರುಚಿ ಮೆಲುಕು


Team Udayavani, Oct 27, 2018, 11:15 AM IST

ganyara.jpg

ಬೆಂಗಳೂರು: ನಗರದ ಗಾಂಧಿಬಜಾರ್‌ನಲ್ಲಿರುವ ವಿದ್ಯಾರ್ಥಿ ಭವನದ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅಮೃತ ಮಹೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. 

ಹೋಟೆಲ್‌ನಲ್ಲಿ ನಿರಂತರವಾಗಿ ದೋಸೆ ಸವಿದ ಗ್ರಾಹಕರು ಸಂಭ್ರಮಾಚರಣೆಯಲ್ಲಿ ಭಾಗವಹಿಸುವ ಮೂಲಕ ರುಚಿಯ ಅನುಭವವನ್ನು ಮೆಲುಕು ಹಾಕಲು ಅವಕಾಶ ನೀಡಲಾಗಿತ್ತು. ಕಾರ್ಯಕ್ರಮದಲ್ಲಿ ಆಗಮಿಸಿದ್ದ ನೂರಾರು ಗ್ರಾಹಕರು ಹೋಟೆಲ್‌ ಬಗೆಗಿನ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಜತೆಗೆ ನಿರಂತರವಾಗಿ ಒಂದೇ ರುಚಿ ಕಾಪಾಡಿಕೊಂಡು ಬರುತ್ತಿರುವ ಹೋಟೆಲ್‌ ಮಾಲೀಕ ರಾಮಕೃಷ್ಣ ಅಡಿಗರಿಗೆ ಕೃತಜ್ಞತೆ ಸಲ್ಲಿಸಿದರು.

ಹೋಟೆಲ್‌ ಮಾಲೀಕರು ಬಹಳಷ್ಟು ವರ್ಷಗಳಿಂದ ತಮ್ಮ ಜತೆ ಕೆಲಸ ಮಾಡುತ್ತಿರುವ ಸಹಾಯಕ ಸಿಬ್ಬಂದಿ ಮತ್ತು ಬಾಣಸಿಗರನ್ನು ಮಾಲೀಕರು ಅಭಿನಂದಿಸಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಸಹ ಹೋಟೆಲ್‌ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. 

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಂ.ಎನ್‌.ವೆಂಕಟಾಚಲಯ್ಯ ಅವರು, ಮತದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿರುವ ಈ ಕಾಲದಲ್ಲಿ ಒಂದು ದೋಸೆಯ ರುಚಿ ಇಷ್ಟು ಜನರನ್ನು ಒಂದುಗೂಡಿಸಿರುವುದು ಮಹತ್ವದ ವಿಷಯವಾಗಿದ್ದು, ಅದನ್ನು ಹಾಗೆ ಮುಂದುವರಿಸಿಕೊಂಡು ಹೋಗುವಂತೆ ತಿಳಿಸಿದರು. 

ಭಾರತ ರತ್ನ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರು, “1951ರಲ್ಲಿ ಬಿಎಸ್‌ಸಿ ಪಾಸ್‌ ಮಾಡಿದಾಗ ಅಪ್ಪನ ಜತೆಗೆ ಹಾಗೂ ನಂತರದಲ್ಲಿ ಮದುವೆ ಹಿಂದಿನ ದಿನ ಭಾವಿ ಪತ್ನಿಯೊಂದಿಗೆ ವಿದ್ಯಾರ್ಥಿ ಭವನದಲ್ಲಿ ನಾನು ದೋಸೆ ತಿಂದಿದ್ದೇನೆ’ ಎಂದು ಸ್ಮರಿಸಿದರು. 

ಇನ್ಫೋಸೀಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲವೂ ಬದಲಾಗುತ್ತಿದೆ. ಆದರೆ, ಇಲ್ಲಿನ ದೋಸೆಯ ರುಚಿ ಮತ್ತು ಗುಣಮಟ್ಟ ಮಾತ್ರ ಬದಲಾಗಿಲ್ಲ. ಹೋಟೆಲ್‌ನಲ್ಲಿ ಸಾಹಿತಿಗಳ ಜತೆಗೆ ಸಾಧಕಿಯರ ಭಾವಚಿತ್ರಗಳಿರುವುದು ಸಂತಸದ ವಿಚಾರ ಎಂದು ಅಭಿನಂದಿಸಿದರು. 

ಸಾಹಿತಿ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌, ಮಯ್ನಾಸ್‌ ಸಮೂಹ ಸಂಸ್ಥೆ ಸಂಸ್ಥಾಪಕ ಡಾ.ಪಿ.ಸದಾನಂದ ಮಯ್ಯ, ಕರ್ನಾಟಕ ವೃತ್ತದ ಅಂಚೆ ಮಹಾಪ್ರಬಂಧಕ ಡಾ.ಚಾರ್ಲ್ಸ್‌ ಲೋಬೊ ಸೇರಿದಂತೆ ಪ್ರಮುಖರು ಹಾಜರಿದ್ದರು. ಇದೇ ವೇಳೆ ಅಂಚೆ ಇಲಾಖೆ ರೂಪಿಸಿರುವ ದೋಸೆಯ “ವಿಶೇಷ ಅಂಚೆ ಲಕೋಟೆ’, “ನೆನಪಿನಂಗಳ’ ಎಂಬ ಕಾಫಿ ಟೇಬಲ್‌ ಪುಸ್ತಕ ಬಿಡುಗಡೆಗೊಳಿಸಲಾಯಿತು. 

ಮೊದಲು ನಾವೆಲ್ಲ ವಿದ್ಯಾರ್ಥಿ ಭವನದ ದೋಸೆ ಹೆಸರಿನಲ್ಲೇ ಬಾಜಿ ಕಟ್ಟುತ್ತಿದ್ದೆವು. ಏಕೆಂದರೆ ದೋಸೆ ಸವಿಯುವುದೇ ಒಂದು ಖುಷಿಯ ವಿಚಾರ. ವಿದ್ಯಾರ್ಥಿ ಭವನದ ದೋಸೆಗೆ ಭಾರಿ ಪರಂಪರೆಯಿದೆ.
-ಪ್ರೊ.ಕೆ.ಎಸ್‌.ಆರ್‌.ನಿಸಾರ್‌ ಅಹಮದ್‌, ಹಿರಿಯ ಕವಿ

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.