Bengaluru: ರಾತ್ರಿ 2ರವರೆಗೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಓಪನ್ಗೆ ಮನವಿ
Team Udayavani, Jul 15, 2024, 12:01 PM IST
ಬೆಂಗಳೂರು: ರಾಜಧಾನಿ ವ್ಯಾಪ್ತಿಯಲ್ಲಿ ತಡರಾತ್ರಿ 2 ಗಂಟೆವರೆಗೂ ಬಾರ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್ ಮತ್ತು ಪಬ್ಗಳನ್ನು ತೆರೆಯಲು ಅವಕಾಶ ಒದಗಿಸುವಂತೆ ಬೃಹತ್ ಬೆಂಗಳೂರು ಹೋಟೆಲುಗಳ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಬಗ್ಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಹೊಳ್ಳ, ಬಾಡಿಗೆ, ಗ್ಯಾಸ್, ಸಿಬ್ಬಂದಿ ನಿರ್ವಹಣೆಗೆ ಹೆಚ್ಚು ವೆಚ್ಚ ಭರಿಸುತ್ತಿದ್ದೇವೆ. ಶೇ.18 ಜಿಎಸ್ಟಿ ಪಾವತಿ ಮಾಡುತ್ತಿದ್ದೇವೆ. ಹೋಟೆಲ್ ಉದ್ಯಮ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಣೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.
ಈಗಾಗಲೇ ಅಬಕಾರಿ ತೆರಿಗೆ ಮೂಲಕ ನೂರಾರು ಕೋಟಿ ರೂ. ಹೆಚ್ಚಿನ ತೆರಿಗೆ ಕಟ್ಟಲಾಗುತ್ತಿದೆ. ಪ್ರತಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರು ವಾರ್ಷಿಕವಾಗಿ 9 ರಿಂದ 10 ಲಕ್ಷ ರೂ. ಪರವಾನಗಿ ಶುಲ್ಕ ಪಾವತಿ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡ ಹೋಟೆಲ್, ಬಾರ್ ಮತ್ತು ಪಬ್ಗಳ ಅವಧಿಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಎಲ್ಲಾ ಹೋಟೆಲ್ಗಳ ಮುಚ್ಚುವ ಅವಧಿಯನ್ನು ಮಧ್ಯರಾತ್ರಿ 1 ಗಂಟೆಗೆ ಮಿತಿಗೊಳಿಸಲಾಗಿದೆ. 8 ರಿಂದ 10 ತಿಂಗಳ ಹಿಂದೆ ಎಲ್ಲಾ ಹೋಟೆಲ್ಗಳಿಗೆ, ವಿಶೇಷವಾಗಿ ಆಸ್ಪತ್ರೆಗಳು, ವಿಮಾನ ನಿಲ್ದಾಣಗಳ ಬಳಿ ಇರುವವರಿಗೆ 24/7 ಸಮಯ ತೆರೆದಿಡಲು ವಿನಂತಿ ಮಾಡಿಕೊಂಡಿದ್ದೆವು. ಸಾಮಾನ್ಯವಾಗಿ ತಡರಾತ್ರಿ ಯವರೆಗೆ ಪ್ರಯಾಣಿಸುವ ಗ್ರಾಹಕರಿಗೆ ಸೇವೆ ನೀಡಲು ಪ್ರಸ್ತುತ ಸಮಯವನ್ನು ರಾತ್ರಿ 2 ಗಂಟೆಗೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ ಎಂದು ಅಸೋಸಿಯೇಷನ್ನ ಗೌರವಾಧ್ಯಕ್ಷ ಅಧ್ಯಕ್ಷ ಪಿ.ಸಿ.ರಾವ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಂತ ಮೆಟ್ರೋ ಸಿಟಿಯಲ್ಲಿ ತಡರಾತ್ರಿ 2 ಗಂಟೆ ವರೆಗೆ ಪಬ್, ಬಾರ್ ಮತ್ತು ರೆಸ್ಟೋರೆಂಟ್ ತೆರೆದಿಡಲು ಅವಕಾಶ ನೀಡಬೇಕು ಎಂದು ಕೋರಿಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.