ಡೆಂಘೀ ಭಯ ಓಡಿಸಲು ಸಂಶೋಧನೆ


Team Udayavani, Apr 11, 2018, 12:14 PM IST

dengue.jpg

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಜನರನ್ನು ವ್ಯಾಪಕವಾಗಿ ಕಾಡುತ್ತಿರುವ ಡೆಂಘೀ ಜ್ವರದ ಕುರಿತು ಜಾಗೃತಿ ಮೂಡಿಸುವ ಸಂಬಂಧ ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳು ಒಟ್ಟಾಗಿ ವಿಶೇಷ ಸಂಶೋಧನೆ ನಡೆಸುತ್ತಿರುವುದಾಗಿ ಆರೋಗ್ಯ ವಿವಿ ಪ್ರಭಾರ ಕುಲಪತಿ ಡಾ.ಎಂ.ಕೆ.ರಮೇಶ್‌ ಹೇಳಿದ್ದಾರೆ.

ಆರೋಗ್ಯ ವಿವಿ ಸಿಂಡಿಕೇಟ್‌ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಐಎಸ್‌ಸಿ ಮತ್ತು ವಿವಿ ಅಧೀನದ ನಾಲ್ಕು ಕಾಲೇಜುಗಳ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಸಂಶೋಧನೆಗೆ 3 ಕೋಟಿ ರೂ. ಮೀಸಲಿಡಲಾಗಿದೆ.

ಡೆಂಘೀ ಜ್ವರದ ಬಾರದಂತೆ ಎಚ್ಚರಿಕೆ ವಹಿಸುವುದು, ರೋಗದ ಲಕ್ಷಣಗಳ ಬಗ್ಗೆ ತಿಳಿವಳಿಕೆ, ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳುವ ವಿಧಾನದ ಬಗ್ಗೆ ಜೈವಿಕ ವಿಜ್ಞಾನಿಗಳು ಉನ್ನತ ಮಟ್ಟದ ಅಧ್ಯಯನ ನಡೆಸಲಿದ್ದಾರೆ. ಇದರಿಂದ ಡೆಂಘೀ ಜ್ವರದ ಬಗ್ಗೆ ಇರುವ ಭಯವನ್ನು ದೂರವಾಗಿಸಲು ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.

ಸ್ಮಾರ್ಟ್‌ ಗ್ರಾಮ: ಆರೋಗ್ಯ ವಿವಿಯಿಂದ ಒಂದು ಹಳ್ಳಿಯನ್ನು ದತ್ತು ತೆಗದುಕೊಳ್ಳಲಿದ್ದೇವೆ. ಯಾವ ಹಳ್ಳಿ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಬೆಂಗಳೂರು ಸುತ್ತುಮುತ್ತಲಿನ ಪ್ರದೇಶದ ಒಂದು ಹಳ್ಳಿಯನ್ನೇ ಆಯ್ಕೆ ಮಾಡಿಕೊಳ್ಳುವ ಆಲೋಚನೆಯಿದೆ. ಆ ಹಳ್ಳಿಯನ್ನು “ಸ್ಮಾರ್ಟ್‌ ಗ್ರಾಮ’ವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕಾರ್ಯ ಮಾಡಲಿದ್ದೇವೆ.

ಚಿಕ್ಕಬಳ್ಳಾಪುರದಲ್ಲಿ ಮಗು ಮತ್ತು ತಾಯಿಯ ಆರೈಕೆಗಾಗಿ ವಿಶೇಷ ಯೋಜನೆ ಹಮ್ಮಿಕೊಂಡಿದ್ದೇವೆ ಎಂದರು. ಪ್ರಸಕ್ತ ಸಾಲಿನಲ್ಲಿ ಪಿಎಚ್‌.ಡಿ ಪದವಿಗೆ 294 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 169 ಮಂದಿ ಆಯ್ಕೆಯಾಗಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಇದ್ದ ಆಡ್‌ಬ್ಯಾಚ್‌ ವ್ಯವಸ್ಥೆ ತೆಗೆದುಹಾಕಿದ್ದೇವೆ. ಫ‌ಲಿತಾಂಶ ಬಂದ ಎರಡೇ ತಿಂಗಳಲ್ಲಿ ಪೂರಕ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದೇವೆ.

ಇದರಿಂದಾಗಿ 52 ವೈದ್ಯಕೀಯ ಕಾಲೇಜುಗಳ 2603 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 1455 ವಿದ್ಯಾರ್ಥಿಗಳು ಉತ್ತೀರ್ಣರಾಗಿ ತಮ್ಮ ಬ್ಯಾಚ್‌ನವರ ಜತೆಯೇ ಶಿಕ್ಷಣ ಮುಂದುವರಿಸಿದ್ದಾರೆ ಎಂದು ಡಾ.ರಮೇಶ್‌ ಹೇಳಿದರು. ವಿವಿ ಕುಲಸಚಿವ ಡಾ.ಸಿ.ಎಂ.ನೂರ್‌ ಮನ್ಸೂರ್‌, ವಿವಿ ಅನ್ವಯಿಕ ಅಧ್ಯಯನ ಕೇಂದ್ರ ನಿರ್ದೇಶಕ ಡಾ.ಜಿ.ಎಸ್‌.ವೆಂಕಟೇಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಸಹಯೋಗ ಸಂಶೋಧನೆ: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಸಂಶೋಧನೆಗೆ ವಿಶೇಷ ಆದ್ಯತೆ ನೀಡಿದ್ದು, ಸಂಯೋಜಿತ ಕಾಲೇಜುಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಸಂಶೋಧನೆ ನಡೆಸಲು 2018-19ನೇ ಸಾಲಿನಲ್ಲಿ 20 ಕೋಟಿ ರೂ. ಮೀಸಲಿರಿಸಿದೆ.

ಐಐಎಸ್‌ಸಿ, ರಾಷ್ಟ್ರೀಯ ಜೈವಿಕ ಅಧ್ಯಯನ ಕೇಂದ್ರ, ಜವಹರ ಲಾಲ್‌ ನೆಹರು ಅನ್ವಯಿಕ ವಿಜ್ಞಾನ ಸಂಶೋಧನಾ ಕೇಂದ್ರ, ಮನವ ತಳಿ ಶಾಸ್ತ್ರದ ಅಧ್ಯಯನ ಕೇಂದ್ರದ ವಿಜ್ಞಾನಿಗಳ ಮತ್ತು ವೈದ್ಯರ ಸಹಯೋಗದಲ್ಲಿ ಸಂಶೋಧನೆ ಕೈಗೊಳ್ಳಲಾಗುತ್ತದೆ. ಈಗಾಗಲೇ 31 ವಿಧದ ಸಂಶೋಧನಾ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಡಾ.ರಮೇಶ್‌ ಹೇಳಿದರು.

ನನ್ನ ದೇಶಕ್ಕಾಗಿ ನನ್ನ ಮರ: ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಕುರಿತು ಅರಿವು ಮೂಡಿಸಲು “ನನ್ನ ದೇಶಕ್ಕಾಗಿ ನನ್ನ ಮರ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ಸಾಲಿನಿಂದ ವಿವಿಯ ಅಧೀನ ಕಾಲೇಜುಗಳಿಗೆ ಸೇರುವ ಪ್ರತಿಯೊಬ್ಬ ವಿದ್ಯಾರ್ಥಿ,

ತನ್ನ ಕಾಲೇಜು ಕ್ಯಾಂಪಸ್‌ ವ್ಯಾಪ್ತಿಯಲ್ಲಿ ಅಥವಾ ಹೊರಗೆ ಕನಿಷ್ಠ ಒಂದು ಸಸಿ ನಡೆಬೇಕು. ಜತೆಗೆ ಅದನ್ನು ಪೋಷಿಸಿ, ಬೆಳೆಸಬೇಕು. ಪದವಿ ಮುಗಿದ ನಂತರ ಅದರ ಫೋಟೋ ತೆಗೆದು ವಿವಿಗೆ ಕಳುಹಿಸಬೇಕು. ಹೀಗೆ ಗಿಡ ಬೆಳೆಸುವ ವಿದ್ಯಾರ್ಥಿಗಳಿಗೆ ವಿವಿಯಿಂದ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಡಾ. ರಮೇಶ್‌ ತಿಳಿಸಿದರು.

ಟಾಪ್ ನ್ಯೂಸ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಶಿಸಿ ಹೋಗಿದ್ದ ಅಲಸಂದೆ ತಳಿಗೆ ಮರುಜೀವ! ಯಾವ ಜಿಲ್ಲೆಗೆ ಈ ತಳಿ ಸೂಕ್ತ?

ನಶಿಸಿ ಹೋಗಿದ್ದ ಅಲಸಂದೆ ತಳಿಗೆ ಮರುಜೀವ! ಯಾವ ಜಿಲ್ಲೆಗೆ ಈ ತಳಿ ಸೂಕ್ತ?

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

fraudd

Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ

1

Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.