ಅಂತರ್ಜಾತಿ ವಿವಾಹಿತರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ: ಡಾ. ಸಿದ್ದ
Team Udayavani, Mar 1, 2017, 12:30 PM IST
ಬೆಂಗಳೂರು: ಅಂತರ್ಜಾತಿ ವಿವಾಹವಾದ ವರಿಗೆ ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಿದರೆ ಜಾತೀಯತೆ ಹೋಗಲಾಡಿಸಲು ಪ್ರಯತವಾಗಲಿದೆ ಎಂದು ದಲಿತ ಕವಿ ಡಾ.ಸಿದ್ದಲಿಂಗಯ್ಯ ಅಭಿಪ್ರಾಯ ಪಟ್ಟರು. ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಡಾ.ಎಚ್.ಚಂದ್ರಶೇಖರ ಅವರು ಬರೆದ “ವಚನ ತವನಿಧಿ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.
ವಚನಕಾರರರು ಜಾತಿರಹಿತ ಹಾಗೂ ವರ್ಗರಹಿತ ಸಮಾಜದ ಕನಸನ್ನು ಕಂಡಿದ್ದರು. ಆದರೆ ದುರಾದೃಷ್ಟ ವಶಾತ್ ಇಂದಿಗೂ ಜಾತೀಯತೆ ಉಳಿದು ಕೊಂಡಿದೆ. ಹೀಗಾಗಿ ಅಂತರ್ಜಾತಿ ವಿವಾಹ ವಾದವರಿಗೆ ಉದ್ಯೋಗದಲ್ಲಿ ಶೇ.5 ಮೀಸ ಲಾತಿ ಹಾಗೂ ಅವರ ಮಕ್ಕಳಿಗೆ ಶಿಕ್ಷಣದಲ್ಲಿ ಶೇ.5 ಮೀಸಲಾತಿ ನೀಡಿದರೆ, ಜಾತಿ ರಹಿತ ಮೀಸಲಾತಿ ಹೆಚ್ಚಾಗಲಿದ್ದು, ಜಾತೀಯ ತೆಯೂ ಕೊನೆಗಾಣಿಸಲು ಪ್ರಯತ್ನವಾಗಲಿದೆ ಎಂದರು.
ಅಲ್ಲದೆ ದೇಶದಲ್ಲಿ ನಿಜವಾದ ಜಾತ್ಯಾ ತೀತ ಮನೋಭಾವ ಹೆಚ್ಚಾಗಬೇಕಾ ದರೆ ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಅಂತರ್ ಜಾತಿ ವಿವಾಹವಾದವರಿಗೆ ಸರ್ಕಾರ ಆರ್ಥಿಕ, ಸಾಮಾಜಿಕ ಭದ್ರತೆ ಕಲ್ಪಿಸಬೇಕು. ಅದಲ್ಲದೆ ಸಮಸಮಾಜದ ಸುಧಾರಣೆಗೆ ವಚನಗಳ ಮೂಲಕ ಅಪಾರ ಕೊಡುಗೆ ನಿಡಿದ ವಚನಕಾರರನ್ನು ಗೌರವಿಸಬೇಕಾದಲ್ಲಿ ಸರ್ಕಾರ ಶೀಘ್ರವೇ ಮೌಡ್ಯ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಕನ್ನಡದಲ್ಲೂ ವಚನದ ಮೂಲಕವೂ ದೇವರನ್ನು ಮಾತನಾಡಿಸಬಹುದು ಎಂದು ಕಲಿಸಿಕೊಟ್ಟವರು ವಚನಕಾರರು. ಆದರೆ ನಿರೀಕ್ಷಿತ ಮಟ್ಟದಲ್ಲಿ ಇಂದು ವಚನ ಸಾಹಿತ್ಯದ ಅಧ್ಯಯನ ನಡೆಯುತ್ತಿಲ್ಲ. ಇತ್ತೀಚೆಗೆ ಕಪ್ಪತ್ತಗುಡ್ಡ ಹೋರಾಟ ಮುಂದುವರಿದಾಗ ವಚನದ ಮೂಲಕವೇ ಸರ್ಕಾರವನ್ನು ಎಚ್ಚರಿಸಿದ್ದೆ. ಯಾವುದೇ ವಿಚಾರ ಬರಲಿ ಅದಕ್ಕೊಂದು ಸಂಬಂಧ ಕಲ್ಪಿಸುವ ವಚನವಿದೆ. ಇದು ವಚನಕಾರರ ಚಿಂತನೆಗೆ ಸಾಕ್ಷಿ.
-ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿ, ಯಡೆಯೂರು-ಡಂಬಳ ಗದಗ ಸಂಸ್ಥಾನ ಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.