
ಹೆರಿಗೆ ಆಸ್ಪತ್ರೆಗಳ ವ್ಯವಸ್ಥೆ ಪರಿಶೀಲನೆ
Team Udayavani, Jun 10, 2017, 12:40 PM IST

ಬೆಂಗಳೂರು: ಮೇಯರ್ ಜಿ.ಪದ್ಮಾವತಿ ಅವರು ಶುಕ್ರವಾರ ನಗರದ ವಿವಿಧ ಭಾಗಗಳಲ್ಲಿರುವ ಬಿಬಿಎಂಪಿ ಹೆರಿಗೆ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಗರ್ಭಿಣಿಯರಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.
ರಾಜಾಜಿನಗರದಲ್ಲಿರುವ ಪಾಲಿಕೆಯ ಹೆರಿಗೆ ಆಸ್ಪತ್ರೆಯಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ಪರಿಶೀಲನೆ ನಡೆಸಿದ ಮೇಯರ್, ಈ ಕುರಿತು ಮಾಹಿತಿ ಪಡೆದರು. ಇದರೊಂದಿಗೆ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ವೈದ್ಯರಿಗೆ ಸೂಚಿಸಿದರು.
ಮೊದಲಿಗೆ ಡಾ.ನಾಗರಾಜ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಗರ್ಭಿಣಿಯರಿಗೆ ಒದಗಿಸಲಾಗುತ್ತಿರುವ “ತಾಯಿ ಮಡಿಲು ಕಿಟ್’ ಯೋಜನೆ ಬಗ್ಗೆ ವಿವರ ಪಡೆದರು. ಅಪರೇಷನ್ ಥಿಯೇಟರ್ನ ವ್ಯವಸ್ಥೆ ಪರಿಶೀಲಿಸಿದರು. ಸೌಲಭ್ಯಗಳು ಬೇಕಿದ್ದಲ್ಲಿ ಮೇಯರ್ ನಿಧಿಯಿಂದ ಹಣ ನೀಡುವುದಾಗಿ ಭರವಸೆ ನೀಡಿದರು. ಆಸ್ಪತ್ರೆಯ ಆವರಣದಲ್ಲಿ ಓವರ್ ಹೆಡ್ ಟ್ಯಾಂಕನ್ನೂ ತಮ್ಮ ಅನುದಾನದಿಂದ ಕಟ್ಟಿಸಿಕೊಡುವುದಾಗಿ ತಿಳಿಸಿದರು.
ನಂತರ ಮಾಗಡಿ ರಸ್ತೆಯ ಹೆರಿಗೆ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಕಂಡ ಅವರು ಕೂಡಲೇ ಅವುಗಳನ್ನು ಸರಿಪಡಿಸುವಂತೆ ಸೂಚಿಸಿದರು. ಮುಂದಿನ ಭೇಟಿ ವೇಳೆಗೆ ಆಸ್ಪತ್ರೆಯಲ್ಲಿರುವ ಎಲ್ಲ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಎರಡೂ ಆಸ್ಪತ್ರೆಗಳಿಗೆ ಭೇಟಿ ನೀಡಿದ ವೇಳೆ ಆಸ್ಪತ್ರೆಯ ವೈದ್ಯರು, ನರ್ಸ್ಗಳು ಹಾಗೂ ಇತರೆ ಸಿಬ್ಬಂದಿಗಳ ಹಾಜರಾತಿ ಪುಸ್ತಕಗಳನ್ನು ಪರಿಶೀಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಾಲಿಕೆ ಹೆರಿಗೆ ಆಸ್ಪತ್ರೆಗಳಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಬಡ ರೋಗಿಗಳಿಗೆ ಯಾವುದೇ ಅನಾನುಕೂಲವಾಗದಂತೆ ನಿಗಾವಹಿಸಬೇಕು ಎಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು. ಅಲ್ಲಿಂದ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿದ ಅವರು ಮಾರುಕಟ್ಟೆಯ ಮೇಲ್ಛಾವಣಿಯಲ್ಲಿ ಸೋರುತ್ತಿರುವುದು ಕಂಡು ಕೂಡಲೇ ಅದನ್ನು ಬದಲಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.