ಮೃತನ ಪರಿಹಾರದ ಹಣಕ್ಕೆ ಹಗ್ಗಜಗ್ಗಾಟ


Team Udayavani, Sep 20, 2017, 11:43 AM IST

bbmp-check.jpg

ಬೆಂಗಳೂರು: ಈಚೆಗೆ ಕಾರಿನ ಮೇಲೆ ಮರಬಿದ್ದು ಮೃತಪಟ್ಟ ಜಗದೀಶ್‌ ಅವರ ಕುಟುಂಬಕ್ಕೆ ಬಿಬಿಎಂಪಿ ನೀಡಿದ್ದ ಪರಿಹಾರ ಮೊತ್ತದ ಹಂಚಿಕೆ ವಿಚಾರದಲ್ಲಿ ಜಗದೀಶ್‌ ಪತ್ನಿ ಹಾಗೂ ಪೋಷಕರ ನಡುವೆ ತಿಕ್ಕಾಟ ಶುರುವಾಗಿದೆ. 

ಕಳೆದ ಸೆ. 8ರಂದು ಸಂಜೆ ನಗರದಲ್ಲಿ ಸುರಿದ ಗಾಳಿಸಹಿತ ಭಾರಿ ಮಳೆಗೆ ಕಾರಿನ ಮೇಲೆ ಮರಬಿದ್ದು ಜಗದೀಶ್‌ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತ ಪಟ್ಟಿದ್ದರು. ಆಗ ಬಿಬಿಎಂಪಿಯು ಮೃತ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಹಾಗೂ ಉದ್ಯೋಗ ನೀಡುವ ಭರವಸೆ ನೀಡಿತ್ತು. ಬಳಿಕ ಸೆ. 11ರಂದು ಮೇಯರ್‌ ಜಿ. ಪದ್ಮಾವತಿ, ಜಗದೀಶ್‌ ಪತ್ನಿ ರೂಪಾಗೆ ಐದು ಲಕ್ಷ  ರೂಪಾಯಿ ಪರಿಹಾರದ ಚೆಕ್‌ ವಿತರಿಸಿದ್ದರು. 

ನಂತರದಲ್ಲಿ ರೂಪಾ ಹಾಗೂ ಜಗದೀಶ್‌ ಫೋಷಕರ ನಡುವೆ ಪರಿಹಾರದ ಮೊತ್ತಕ್ಕಾಗಿ ಪರಸ್ಪರ ತಿಕ್ಕಾಟ ಶುರುವಾಗಿದೆ. ಈ ಮಧ್ಯೆ ಮೇಯರ್‌ ಅವರನ್ನು ಭೇಟಿ ಮಾಡಿದ ಜಗದೀಶ್‌ ತಂದೆ-ತಾಯಿ, “ಇರುವ ಒಬ್ಬ ಮಗ ಜಗದೀಶ್‌ ಮೃತಪಟ್ಟಿದ್ದಾನೆ. ನಮ್ಮನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಹಾಗಾಗಿ,ಪರಿಹಾರದ ಮೊತ್ತದಲ್ಲಿ ತಮಗೂ ಪಾಲು ನೀಡಬೇಕು’ ಎಂದು ಮನವಿ ಮಾಡಿದರು. 

ಈ ಹಿನ್ನೆಲೆಯಲ್ಲಿ ಮೇಯರ್‌ ಹಾಗೂ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌, ಜಗದೀಶ್‌ ತಂದೆ-ತಾಯಿಯ ಜವಾಬ್ದಾರಿ ವಹಿಸಿಕೊಳ್ಳಬೇಕು. ಹಾಗೂ ಪರಿಹಾರದ ಮೊತ್ತದಲ್ಲಿ ಪೋಷಕರಿಗೂ ಸ್ವಲ್ಪ ಹಣ ನೀಡುವಂತೆ ರೂಪಾಗೆ ತಿಳಿಸಿದರು. ಆದರೆ, ಇದಕ್ಕೆ ಒಪ್ಪದ ರೂಪಾ, ತಮಗೂ ಮಕ್ಕಳು ಇರುವುದರಿಂದ ಅವರನ್ನು ಸಾಕುವ ಹೊಣೆ ಇದೆ. ಹಾಗಾಗಿ, ಸಂಪೂರ್ಣ ಪರಿಹಾರ ಮೊತ್ತವನ್ನು ತನಗೇ ನೀಡಬೇಕು ಎಂದು ಮನವಿ ಮಾಡಿದರು. 

ಈ ಬಗ್ಗೆ  ಪ್ರತಿಕ್ರಿಯಿಸಿದ ಮೇಯರ್‌ ಜಿ. ಪದ್ಮಾವತಿ, ಮೃತ ಜಗದೀಶ್‌ಗೆ ವೃದ್ಧ ತಂದೆ-ತಾಯಿಗಳಿದ್ದಾರೆ. ಅವರಿಗೆ ಬೇರೆ ಯಾರೂ ಇಲ್ಲ. ಹಾಗಾಗಿ, ಅವರಿಗೂ ನೆರವು ನೀಡುವ ಉದ್ದೇಶದಿಂದ ಪರಿಹಾರದ ಮೊತ್ತ ಡ್ರಾ ಮಾಡಿಕೊಳ್ಳದಂತೆ ತಡೆಹಿಡಿಯಲಾಗಿದೆ. ಉಳಿದಂತೆ ಅಂದಿನ ಘಟನೆಯಲ್ಲಿ ಮೃತಪಟ್ಟ ಅರುಣ್‌, ಭಾರತಿ, ರಮೇಶ್‌ ಅವರಿಗೆ ನೀಡಿದ್ದ ಪರಿಹಾರದ ಮೊತ್ತ ಬಿಡುಗಡೆ ಮಾಡಲಾಗಿದೆ. ಜಗದೀಶ್‌ ತಂದೆ ಮತ್ತು ತಾಯಿಗೆ ತಲಾ 50 ಸಾವಿರ ರೂಪಾಯಿ ಹಾಗೂ ಜಗದೀಶ್‌ ಪತ್ನಿಗೆ 4 ಲಕ್ಷ ರೂಪಾಯಿ, ರೂಪಾಗೆ ಉದ್ಯೋಗದ ಭರವಸೆ ನೀಡಲಾಗಿದೆ ಎಂದರು. 

ಮೃತ ಜಗದೀಶ್‌ ತಂದೆ ತಾಯಿ ಪರಿಹಾರ ವಿಚಾರದಲ್ಲಿ ತಕರಾರು ಅರ್ಜಿ ಸಲ್ಲಿಸಿದ ಹಿನ್ನೆಯಲ್ಲಿ ಪರಿಹಾರವನ್ನು ತಡೆಹಿಡಿಯಲಾಗಿದೆ. ಪಾಲಿಕೆಯಲ್ಲಿ ಹಣದ ಲಭ್ಯತೆಯಿದ್ದು. ಯಾವುದೇ ಚೆಕ್‌ಗಳು ಬೌನ್ಸ್‌ ಆಗಿಲ್ಲ. 
-ಮಹದೇವ್‌ ಮುಖ್ಯ ಲೆಕ್ಕಾಧಿಕಾರಿ ಬಿಬಿಎಂಪಿ

ನನಗೆ ಇಬ್ಬರೂ ಮಕ್ಕಳಿದ್ದಾರೆ ಅವರ ಭವಿಷ್ಯ ನೋಡಬೇಕಾಗಿದೆ. ಬೇರೆ ಯಾವುದೇ ಆದಾಯವಿಲ್ಲ. ಜಗದೀಶ್‌ ಬದುಕಿದ್ದ ಸಂದರ್ಭದಲ್ಲಿ ಯಾರೂ ನಮ್ಮನ್ನು  ನೀಡಿಲ್ಲ. ಈಗ ಪರಿಹಾರಕ್ಕಾಗಿ ಬಂದಿದ್ದಾರೆ. 
-ರೂಪಾ (ಮೃತ ಜಗದೀಶ್‌ ಪತ್ನಿ)

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.