ರಸ್ತೆಗಳ ಚಿತ್ರಣವೇ ಬದಲಾಗುತ್ತೆ!


Team Udayavani, Nov 3, 2017, 12:47 PM IST

bamngalore-highway.jpg

ಬೆಂಗಳೂರು: ಮುಂದಿನ ಮೂರ್‍ನಾಲ್ಕು ತಿಂಗಳಲ್ಲಿ ನಗರದ ರಸ್ತೆಗಳ ಸಂಪೂರ್ಣ ಚಿತ್ರಣವೇ ಬದಲಾಗಲಿದ್ದು, ಈಗ ದೂರುತ್ತಿರುವವರೇ ಇನ್ನು ಕೆಲವೇ ದಿನಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಿದ್ದಾರೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ನವೆಂಬರ್‌ 6ರ ಹೊತ್ತಿಗೆ ನಗರದ ರಸ್ತೆಗಳು ಗುಂಡಿಮುಕ್ತ ಆಗಲಿವೆ. ಅಷ್ಟೇ ಅಲ್ಲ, 100 ಕಿ.ಮೀ. ವೈಟ್‌ಟಾಪಿಂಗ್‌ ರಸ್ತೆ ಆಗಲಿದೆ. 1,400 ಕಿ.ಮೀ. ರಸ್ತೆಗಳು ಹೊಸದಾಗಿ ನಿರ್ಮಾಣ ಆಗಲಿವೆ. 20 ಕಿ.ಮೀ. ಟೆಂಡರ್‌ ಶ್ಯೂರ್‌ ರಸ್ತೆಗಳು ಸೇರ್ಪಡೆಗೊಳ್ಳಲಿವೆ. ಒಟ್ಟಾರೆ ಮುಂದಿನ ಮೂರ್‍ನಾಲ್ಕು ತಿಂಗಳಲ್ಲಿ ನಗರದ ರಸ್ತೆಗಳ ಸ್ವರೂಪ ಬದಲಾಗಲಿದೆ ಎಂದು ಹೇಳಿದರು. 

ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ನಗರದ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 

ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ 1,400 ಕಿ.ಮೀ ಉದ್ದದ ರಸ್ತೆ ಪೈಕಿ ಈಗಾಗಲೇ 500 ಕಿ.ಮೀ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಡಿಸೆಂಬರ್‌ ಒಳಗೆ ಪೂರ್ಣಗೊಳ್ಳಲಿದೆ. ಭವಿಷ್ಯದಲ್ಲಿ ಈ ರಸ್ತೆಗಳು ಹಂತ-ಹಂತವಾಗಿ ವೈಟ್‌ಟಾಪಿಂಗ್‌ಗೆ ಪರಿವರ್ತನೆಗೊಳ್ಳಲಿವೆ. ಈಗಾಗಲೇ ಕೈಗೆತ್ತಿಕೊಂಡ 100 ಕಿ.ಮೀ. ವೈಟ್‌ಟಾಪಿಂಗ್‌ ರಸ್ತೆ ಮಾರ್ಚ್‌-ಏಪ್ರಿಲ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. 

ತುರ್ತು ಸ್ವಾಧೀನ: ಸಿಗ್ನಲ್‌ ಫ್ರೀ ಕಾರಿಡಾರ್‌ ನಿರ್ಮಾಣಕ್ಕೆ ಭೂಸ್ವಾಧೀನ ತೊಡಕಾಗಿದ್ದು, ಸಮಸ್ಯೆ ಇರುವ ಕಡೆಗೆ “ತುರ್ತು ಭೂಸ್ವಾಧೀನ’ ಅಡಿ ಭೂಮಿಯನ್ನು ವಶಪಡಿಸಿಕೊಂಡು ಕಾಮಗಾರಿ ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲಾಗುವುದು. ಹೋಪ್‌ ಫಾರಂನಲ್ಲಿ 1,825 ಚದರ ಮೀ. ಸ್ವಾಧೀನಕ್ಕೆ ಈ ನಿಯಮ ಅನ್ವಯಿಸಲಾಗುತ್ತಿದೆ. ಇನ್ನು ಎಚ್‌ಎಎಲ್‌ಗೆ ಸೇರಿದ ಭೂಮಿ ಸ್ವಾಧೀನಕ್ಕೆ ಅನುಮತಿ ದೊರಕಿದ್ದು, ಇದಕ್ಕೆ ಪರ್ಯಾಯವಾಗಿ ಅದೇ ಮಾರ್ಗದಲ್ಲಿ 58 ಕೋಟಿ ರೂ. ಮೊತ್ತದಲ್ಲಿ 910 ಚದರ ಮೀಟರ್‌ ವಿಂಡ್‌ ಟನಲ್‌ ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹೈಡೆನ್ಸಿಟಿ ಕಾರಿಡಾರ್‌: ಅಲ್ಲದೆ, ಹಳೇ ಮದ್ರಾಸ್‌ ರಸ್ತೆ, ಹಳೆಯ ವಿಮಾನ ನಿಲ್ದಾಣ ರಸ್ತೆ ಹಾಗೂ ಬಳ್ಳಾರಿ ರಸ್ತೆಯಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಇರುವ ಹಿನ್ನೆಲೆಯಲ್ಲಿ “ಹೈಡೆನ್ಸಿಟಿ ಕಾರಿಡಾರ್‌’ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ಬಸ್‌ ಬೇ, ಫ‌ುಟ್‌ಪಾತ್‌, ಬೀದಿ ದೀಪ ಮತ್ತಿತರ ಸೌಕರ್ಯಗಳು ಇರಲಿವೆ ಎಂದು ಹೇಳಿದರು. 

ಜತೆಗೆ ಜನವರಿ ವೇಳೆಗೆ ನಗರದ ಶೇ.80ರಷ್ಟು ಕೊಳಚೆ ನೀರು ಸಂಸ್ಕರಣೆ ಆಗಲಿದೆ. ಇದರಿಂದ ಕೆರೆಗಳಿಗೆ ಕೊಳಚೆನೀರು ಸೇರ್ಪಡೆ ಬಹುತೇಕ ಕಡಿಮೆ ಆಗಲಿದೆ. ಪ್ರಸ್ತುತ ನಿತ್ಯ ಹೊರಬರುವ 1,800 ಎಂಎಲ್‌ಡಿ ಪೈಕಿ 400 ಎಂಎಲ್‌ಡಿ ನೀರು ಮಾತ್ರ ಸಂಸ್ಕರಣೆ ಆಗುತ್ತಿದೆ ಎಂದರು. 

ಐಟಿ ಕಂಪೆನಿಗಳ ಮನವಿ ಮೇರೆಗೆ ಸರ್ಜಾಪುರದ ಹೊರವರ್ತುಲ ರಸ್ತೆಯನ್ನು ಕೂಡುವ 14 ರಸ್ತೆಗಳ ಅಭಿವೃದ್ಧಿಗೆ ಮುಂದಾಗಿದ್ದು, ಆ ಮಾರ್ಗದ ಸುಮಾರು 80 ಕಿ.ಮೀ. ರಸ್ತೆಯನ್ನು ಒಟ್ಟಾರೆ 500 ಕೋಟಿ ರೂ.ಗಳಲ್ಲಿ ವೈಟ್‌ಟಾಪಿಂಗ್‌ ಮಾಡಲಾಗುವುದು. ಇದಕ್ಕಾಗಿ ತಕ್ಷಣದಲ್ಲೇ 150 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದು, ಉಳಿದ ಹಣವನ್ನು ಮುಂದಿನ ಬಜೆಟ್‌ನಲ್ಲಿ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಆಯುಕ್ತ ಡಾ.ಎನ್‌. ಮಂಜುನಾಥ ಪ್ರಸಾದ್‌ ಇದ್ದರು. 

ನಿತ್ಯ 1.60 ಲಕ್ಷ ಜನ ಊಟ: ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ನಿತ್ಯ ಸರಾಸರಿ 1.62 ಲಕ್ಷ ಜನ ತಿಂಡಿ-ಊಟ ಸೇವಿಸುತ್ತಿದ್ದಾರೆ ಎಂದು ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಇದುವರೆಗೆ 93,12,700 ಜನ ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ-ಊಟ ಸೇವಿಸಿದ್ದಾರೆ. ಪ್ರತಿದಿನ ಸರಾಸರಿ 1.62 ಲಕ್ಷ ಮಂದಿ ಇದರ ಲಾಭ ಪಡೆದಿದ್ದಾರೆ ಎಂದರು. ಇನ್ನು ಜಾಗದ ಅಲಭ್ಯತೆ ಇರುವುದರಿಂದ ನಗರದ 14 ಕಡೆಗಳಲ್ಲಿ ತಾತ್ಕಾಲಿಕವಾಗಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗುವುದು. ಈಗಾಗಲೇ 141 ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. 16 ಉದ್ಘಾಟನೆಗೆ ಸಿದ್ಧಗೊಂಡಿದ್ದು, 5 ನಿರ್ಮಾಣ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು. 

ಕೆರೆಗಳಿಗೆ ಗೇಟು ನಿರ್ಮಾಣ: ಬೆಳ್ಳಂದೂರು ಮತ್ತು ವರ್ತೂರು ಕೆರೆಗಳು ಭರ್ತಿಯಾದಾಗ, ನೀರು ಹೊರ ಹಾಕಲು ಗೇಟುಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಕೆರೆಗಳು ತುಂಬಿದ ನಂತರ ನೀರು ಕೋಡಿಗೆ ಹರಿದುಹೋಗುತ್ತದೆ. ಇದು ನೆರೆಗೆ ಕಾರಣವಾಗುತ್ತದೆ. ಆದ್ದರಿಂದ ಎರಡೂ ಕೆರೆಗಳಿಗೆ ಪ್ರತ್ಯೇಕವಾಗಿ ತೂಬುಗಳ ಮಾದರಿಯಲ್ಲಿ ನಾಲ್ಕು ಗೇಟುಗಳನ್ನು ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಕೆರೆ ಭರ್ತಿಯಾಗುವ ಲಕ್ಷಣ ಕಂಡುಬರುತ್ತಿದ್ದಂತೆ ಈ ಗೇಟುಗಳನ್ನು ತೆರೆದು, ನೀರು ಹರಿಸಲಾಗುವುದು ಎಂದು ಸಚಿವರು ವಿವರಿಸಿದರು.

ಟಾಪ್ ನ್ಯೂಸ್

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.