Bengaluru: ಕ್ಯಾಂಟರ್‌ ಹರಿದು ಇಬ್ಬರು ಸೋದರರ ದೇಹ ಛಿದ್ರ!


Team Udayavani, Aug 18, 2024, 11:46 AM IST

Bengaluru: ಕ್ಯಾಂಟರ್‌ ಹರಿದು ಇಬ್ಬರು ಸೋದರರ ದೇಹ ಛಿದ್ರ!

ಬೆಂಗಳೂರು: ಕ್ಯಾಂಟರ್‌ ಚಾಲಕನ ನಿರ್ಲಕ್ಷ್ಯದಿಂದ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಬ್ಯಾಟರಾಯನಪುರದ ಹೊಸಗುಡ್ಡದಹಳ್ಳಿ ನಿವಾಸಿ ಗಳಾದ ಶಾಹಿಬ್‌ ರಝಾ (21) ಮತ್ತು ರೆಹಾನ್‌ ರಝಾ (14) ಮೃತ ಸಹೋದರರು. ಕೃತ್ಯಕ್ಕೆ ಕಾರಣವಾದ ಕ್ಯಾಂಟರ್‌ ಚಾಲಕ ಸುರೇಶ್‌ ಎಂಬಾತನನ್ನು ಸಂಚಾರ ಪೊಲೀಸರು ಬಂಧಿಸಿದ್ದಾರೆ. ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಹೊಸಗುಡ್ಡದಹಳ್ಳಿಯಲ್ಲಿ ದುರ್ಘ‌ಟನೆ ನಡೆದಿದೆ.

ಉತ್ತರ ಪ್ರದೇಶದ ವಾರಾಣಸಿಯ ಬನಾರಸ್‌ ಮೂಲದ ಸಹೋದರರು ಪೋಷಕರೊಂದಿಗೆ ಹೊಸಗುಡ್ಡದಹಳ್ಳಿಯಲ್ಲಿ ವಾಸವಾಗಿದ್ದಾರೆ. ಶಾಬಿಬ್‌ ರಿಝಾ ಸೀರೆ ನೇಯುವ ಕೆಲಸ ಮಾಡುತ್ತಿದ್ದರೆ, ರೆಹಾನ್‌ ರಝಾ ಸಮೀಪದ ಶಾಲೆಯಲ್ಲಿ 9 ತರಗತಿ ವ್ಯಾಸಂಗ ಮಾಡುತ್ತಿದ್ದ.  ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಕ್ಯಾಂಟರ್‌ ಚಾಲಕ ಸುರೇಶ್‌, ನಿರ್ಮಾಣ ಹಂತದ ಕಟ್ಟಡಕ್ಕೆ ಬೇಕಾದ ಹಾಲೋಬ್ರಿಕ್ಸ್‌ ತುಂಬಿಕೊಂಡು ಹೊಸಗುಡ್ಡದಹಳ್ಳಿಗೆ ಬಂದಿದ್ದು, ಇಳಿಜಾರು ಪ್ರದೇಶದ ರಸ್ತೆ ಬದಿ ವಾಹನ ನಿಲುಗಡೆ ಮಾಡಿದ್ದಾನೆ. ಆದರೆ, ಹ್ಯಾಂಡ್‌ ಬ್ರೇಕ್‌ ಹಾಕಿರಲಿಲ್ಲ. ಅದೇ ವೇಳೆ ಮುಂಭಾಗದಿಂದ ಸಹೋದರರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಕ್ಯಾಂಟರ್‌ ವಾಹನದಲ್ಲಿ ಹಾಲೋಬ್ರಿಕ್ಸ್‌ ತುಂಬಿದ್ದರಿಂದ ಏಕಾಏಕಿ ವಾಹನ ಮುಂದೆ ಸಾಗಿದೆ. ಆಗ ಚಾಲಕ ಸುರೇಶ್‌  ಓಡಿ ಹೋಗಿ ಕ್ಯಾಂಟರ್‌ ಮೇಲೆ ಹತ್ತಿ, ಬ್ರೇಕ್‌ ಹಾಕಲು ಯತ್ನಿಸಿದ್ದಾನೆ. ಆದರೆ, ಇಳಿಜಾರು ಪ್ರದೇಶವಾದರಿಂದ ಕ್ಯಾಂಟರ್‌ ವೇಗವಾಗಿ ಚಲಿಸಿದೆ. ಅದೇ ವೇಳೆ ಎದುರು ಬರುತ್ತಿದ್ದ ಸಹೋದರರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಕೆಳಗೆ ಬಿದ್ದಿದ್ದು, ಅವರ ಮೇಲೆಯೇ ಕ್ಯಾಂಟರ್‌ನ ಚಕ್ರಗಳು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದು, 2 ದೇಹಗಳು ಛಿದ್ರವಾಗಿವೆ. ಇಡೀ ರಸ್ತೆ ರಕ್ತಮಯವಾಗಿತ್ತು.

ಅಲ್ಲದೆ, ಎರಡು ಮೃತದೇಹಗಳನ್ನು ಕ್ಯಾಂಟರ್‌ 150ರಿಂದ 200 ಮೀಟರ್‌ ದೂರಕ್ಕೆ ಎಳೆದೊಯ್ದಿದ್ದೆ. ಜತೆಗೆ ರಸ್ತೆ ಬದಿ ನಿಲುಗಡೆ ಮಾಡಿದ್ದ 7 ಬೈಕ್‌ಗಳು ಹಾಗೂ ಎರಡು ಕಾರುಗಳು ಸಂಪೂರ್ಣ ಜಖಂ ಗೊಂಡಿವೆ. ಒಂದು ವೇಳೆ ಕ್ಯಾಂಟರ್‌ ಮುಂಭಾಗದ ಚಕ್ರಕ್ಕೆ ದ್ವಿಚಕ್ರ ವಾಹನ ಸಿಲುಕದಿದ್ದರೆ, ಇನ್ನಷ್ಟು ಅನಾಹುತ ಸಂಭವಿಸುತ್ತಿತ್ತು. ಘಟನೆ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಿದ್ದೇನು?:

  • ಹಾಲೋಬ್ರಿಕ್ಸ್‌ ತುಂಬುಕೊಂಡು ಬಂದಿದ್ದ ಕ್ಯಾಂಟರ್‌ ಚಾಲಕ
  • ಬ್ಯಾಟರಾಯನಪುರದ ಹೊಸಗುಡ್ಡದಹಳ್ಳಿಗೆ ಬಂದ ಕ್ಯಾಂಟರ್‌
  • ಹ್ಯಾಂಡ್‌ ಬ್ರೇಕ್‌ ಹಾಕದೆ ರಸ್ತೆ ಬದಿಯಲ್ಲಿ ವಾಹನ ನಿಲುಗಡೆ
  • ಇದೇ ವೇಳೆ ಮುಂಭಾಗದಿಂದ ಬೈಕ್‌ನಲ್ಲಿ ಬರುತ್ತಿದ್ದ ಸೋದರರು
  • ಕ್ಯಾಂಟರ್‌ ಲೋಡ್‌ ಆಗಿದ್ದರಿಂದ ಏಕಾಏಕಿ ವೇಗವಾಗಿ ಚಾಲನೆ
  • ಇದೇ ವೇಳೆ ಬೈಕ್‌ಗೆ ಡಿಕ್ಕಿ: ಇಬ್ಬರು ಸಹೋದರರು ಸ್ಥಳದಲ್ಲೇ ಸಾವು
  • 200 ಮೀಟರ್‌ ದೂರಕ್ಕೆ ಮೃತದೇಹಗಳನ್ನು ಎಳೆದೊಯ್ದ ವಾಹನ
  • ಘಟನೆಯಲ್ಲಿ 7 ದ್ವಿಚಕ್ರವಾಹನ, 2 ಕಾರುಗಳು ಸಂಪೂರ್ಣ ಜಖಂ

 

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.