Road mishap: ಬಿಎಸ್ಎಫ್ ಯೋಧ ಸೇರಿ ಇಬ್ಬರ ಮರಣ
Team Udayavani, Oct 30, 2023, 3:38 PM IST
ಬೆಂಗಳೂರು: ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಎಸ್ಎಫ್ ಯೋಧ ಸೇರಿ ಇಬ್ಬರು ಮೃತಪಟ್ಟು, ಒಬ್ಬ ಗಾಯಗೊಂಡಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಬಳ್ಳಾರಿ ರಸ್ತೆಯ ಬಿಎಸ್ಎಫ್ ಗೇಟ್-2ರ ಮುಂಭಾಗ ನಡೆದಿದೆ.
ತಮಿಳು ನಾಡು ಮೂಲದ ಬಿಎಸ್ಎಫ್ ಯೋಧ ಸುಧಾಕರ್(41) ಹಾಗೂ ಕೋಲಾರ ಮೂಲದ ಯುಟ್ಯೂಬರ್ ಗಿರೀಶ್ (ಗಣಿ) (32) ಮೃತರು. ಘಟನೆಯಲ್ಲಿ ಮುರಳಿ ಎಂಬಾತ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಯುಟ್ಯೂಬರ್ ಗಿರೀಶ್ ಮತ್ತು ಆತನ ಸ್ನೇಹಿತ ಮುರುಳಿ ರಾಯಲ್ ಎನ್ ಫೀಲ್ಡ್ ಬುಲೆಟ್ನಲ್ಲಿ ಬಳ್ಳಾರಿ ರಸ್ತೆಯಲ್ಲಿ ಬಾಗಲೂರು ಕ್ರಾಸ್ ಕಡೆಯಿಂದ ನಗರದ ಕಡೆಗೆ ಬರುತ್ತಿದ್ದರು. ಇದೇ ಸಮಯಕ್ಕೆ ಬಿಎಸ್ಎಫ್ ಯೋಧ ಸುಧಾಕರ್ ಗೇಟ್-2ರ ಮೂಲಕ ಸರ್ವಿಸ್ ರಸ್ತೆಗೆ ಬಂದು ಬಾಗಲೂರು ಕಡೆಗೆ ತೆರಳಲು ದ್ವಿಚಕ್ರ ವಾಹನವನ್ನು ಮುಖ್ಯರಸ್ತೆ ಕಡೆಗೆ ತಿರುಗಿಸಿದ್ದಾರೆ. ಈ ವೇಳೆ ಎರಡೂ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖೀ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಎರಡು ವಾಹನಗಳ ಸವಾರರು ರಸ್ತೆಗೆ ಬಿದ್ದಿದ್ದಾರೆ. ಬಳಿಕ ಸ್ಥಳೀಯರು ಗಾಯಗೊಂಡಿದ್ದ ಸವಾರರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸುಧಾಕರ್ ಅವರನ್ನು ಪರೀಕ್ಷಿಸಿದ ವೈದ್ಯರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಇನ್ನು ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದ ಗಿರೀಶ್ ಚಿಕಿತ್ಸೆ ಫಲಿಸದೆ ಭಾನುವಾರ ಮುಂಜಾನೆ 2 ಗಂಟೆಗೆ ಮೃತಪಟ್ಟಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.