ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್‌ ಬೆಂಬಲಿಸಿ


Team Udayavani, Oct 27, 2020, 11:52 AM IST

bng-tdy-2

ಕೆಂಗೇರಿ: ರಾಜರಾಜೇಶ್ವರಿನಗರ ವಿಧಾನಸಭಾ  ಕ್ಷೇತ್ರವನ್ನು ಕಳಂಕರಹಿತ, ಭ್ರಷ್ಟಾಚಾರರಹಿತ, ಪ್ರಗತಿಯತ್ತ ಕೊಂಡೊಯ್ಯಲು ನಿಮ್ಮ ಸೇವಕಿ, ಮನೆ ಮಗಳು, ವಿದ್ಯಾವಂತ ಹೆಣ್ಣು ಮಗಳಿಗೆ ಒಮ್ಮೆ ಅವಕಾಶ ಮಾಡಿಕೊಡಿ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ. ಎಚ್‌ ಮತದಾರರಲ್ಲಿ ಮನವಿ ಮಾಡಿದರು.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚನ್ನಸಂದ್ರ, ಬೆಮಲ್‌ ಬಡಾವಣೆ, ಹಲಗೇವಡೇರಹಳ್ಳಿಯಲ್ಲಿ ಸೋಮವಾರ ಮತಯಾಚನೆ ಮಾಡಿದ ಅವರು, ನಿಮ್ಮ ಮಗಳಿಗೆ ಅವಕಾಶ ಸಿಕ್ಕಿದೆ ಎಂದು ಭಾವಿಸಿ ಕಾಂಗ್ರೆಸ್‌ಗೆ ಮತ ನೀಡಿದರೆ ದಿನದ 24 ಗಂಟೆ ನಿರಂತರ ನಿಮ್ಮ ಸೇವೆ ಮಾಡುತ್ತೇನೆ ಎಂದು ಹೇಳಿದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾಅಮರನಾಥ್‌ ಮಾತನಾಡಿ,ಕ್ಷೇತ್ರದಲ್ಲಿ ಮಹಿಳಾ ಕಾರ್ಪೊರೇಟರ್‌ಗಳಿಗೆ ಅಭಿವೃದ್ಧಿ ಮಾಡಲು ಬಿಡದೆ ಅವರ ಹಿಂಬಾಲಕರ ಮೂಲಕ ಹಲವಾರು ಕೇಸ್‌ಗಳನ್ನು ಮುನಿರತ್ನ ದಾಖಲು ಮಾಡಿದ್ದಾರೆ. ಬಿಬಿಎಂಪಿ ಹೊರಗೆ- ಒಳಗೆ ಹೋರಾಟ ಮಾಡಿದ ಬಿಜೆಪಿಯ ಮಮತಾ ವಾಸುದೇವ್‌, ಕಾಂಗ್ರೆಸ್‌ನಲ್ಲಿದ್ದ ಆಶಾ ಸುರೇಶ್‌, ಜೆಡಿಎಸ್‌ನಲ್ಲಿದ್ದ ಮಂಜುಳಾ ನಾರಾಯಣಸ್ವಾಮಿ ಬಿಜೆಪಿ ನಾಯಕರಿಗೆ ಹೆದರಿಕೊಂಡು ಮುನಿರತ್ನ ಅವರ ಜತೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.ನೋವನ್ನು ಮರೆಯಲಾಗದೆ, ಒಳಗಡೆ ವಿಷವಿಟ್ಟುಕೊಂಡು ದುಗುಡ, ದುಮ್ಮಾನದಲ್ಲಿ ಬಿಜೆಪಿ ಪರವಾಗಿ ನಿಂತಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ರಾಜ್‌ಕುಮಾರ್‌ ಮಾತನಾಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೂರಾರು ಕೋಟಿ ರೂ. ಅನುದಾನ ನೀಡಿದ್ದರಿಂದ ರಾಜರಾಜೇಶ್ವರಿನಗರ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು. ಹೀಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ. ಎಚ್‌ ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು. ರಾಜರಾಜೇಶ್ವರಿನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಸಂದ್ರ, ಬೆಮಲ್‌ ಬಡಾವಣೆ, ಹಲಗೇವಡೇರಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಎಚ್‌, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ರಾಜ್‌ಕುಮಾರ್‌ ಮತಯಾಚನೆ ಮಾಡಿದರು.

ಜನರ ಪ್ರೀತಿ ವಿಶ್ವಾಸ ಹಣಕ್ಕೆ ಮಾರಿಕೊಳ್ಳುವುದಿಲ್ಲ: ಕುಸುಮಾ :

ಬೆಂಗಳೂರು: ನಾನು ಜನರ ಸೇವೆ ಮಾಡಲು ಬಯಸಿದ್ದು, ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದಿಗೂ ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ತಿಳಿಸಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರ ಜತೆ ಪ್ರಚಾರ ನಡೆಸಿದ ಕುಸುಮಾ ಕ್ಷೇತ್ರದ

ಜನರಿಗೆ ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಹಾಗೂ ರಾಜರಾಜೇಶ್ವರಿ ತಾಯಿ ಆಶೀರ್ವದಿಸಿ ಆಯುಷ್‌ ಆರೋಗ್ಯ, ಐಶ್ವರ್ಯ ಕರುಣಿಸಲಿ ಎಂದರು. ನಾನು ಯಾವುದೇ ದುರಾಲೋಚನೆ ಇಟ್ಟುಕೊಂಡು ಈ ಚುನಾವಣೆಗೆ ಬಂದಿಲ್ಲ. ನಿಮ್ಮ ಸೇವೆಗೆ ನಾನು ಬಂದಿದ್ದೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ನನ್ನ ಕೈಲಾದ ಪ್ರಯತ್ನ ಪಡುತ್ತೇನೆ. ನೀವು ಕೊಡುವ ಮತವನ್ನು ಮಾರಿಕೊಳ್ಳುವುದಿಲ್ಲ. ನಿಮ್ಮ ನೋವು, ದುಃಖದಲ್ಲಿ ನಿಮ್ಮ ಮನೆ ಮಗಳಂತೆ ಜೊತೆಗಿರುತ್ತೇನೆ. ನಿಮ್ಮ ಮಗಳಿಗೆ ನೀಡುವ ಪ್ರೋತ್ಸಾಹವನ್ನೇ ನನಗೂ ನೀಡಿ, ನವೆಂಬರ್‌ 3 ರಂದು ನಡೆವ ಮತದಾನದಲ್ಲಿ ಹಸ್ತದ ಗುರುತಿಗೆ ಮತ ಹಾಕಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.