ಕೆಲಸ ಕೊಡಿಸುವ ನೆಪದಲ್ಲಿ 10 ಲಕ್ಷ ರೂ. ವಂಚನೆ


Team Udayavani, Dec 26, 2017, 1:33 PM IST

arrest2.jpg

ಬೆಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ತಮಿಳುನಾಡು ಮೂಲದ ವ್ಯಕ್ತಿಯನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಸುರೇಂದ್ರ ರಾಜ್‌ (29) ಬಂಧಿತ. ಆರೋಪಿಯು ನಗರದ ವೆಂಕಟ್‌ಪ್ರಸಾದ್‌, ಕಿರಣ್‌, ಮಹೇಶ್‌ ಹಾಗೂ ಪ್ರಶಾಂತ್‌ ಎಂಬುವರಿಗೆ 10 ಲಕ್ಷ ರೂ. ವಂಚಿಸಿದ್ದಾನೆ.

ನಾಲ್ವರು ಡಿಪ್ಲೋಮಾ ವ್ಯಾಸಂಗ ಮುಕ್ತಾಯಗೊಳಿಸಿದ್ದು, ಕೋರಮಂಗಲದ ಇಮಿಗ್ರೇಷನ್‌ ಕೋಚಿಂಗ್‌ ಸೆಂಟರ್‌ನಲ್ಲಿ ತರಬೇತಿ ಪಡೆದುಕೊಂಡಿದ್ದರು. ಆದರೆ, ಇತ್ತೀಚೆಗೆ ನಡೆದ ಪರೀಕ್ಷೆಯೊಂದರಲ್ಲಿ 10 ಅಂಕಗಳ ಅಂತರದಿಂದ ಅನುತ್ತೀರ್ಣಗೊಂಡಿದ್ದರು. ಈ ವೇಳೆ ಆರೋಪಿಯ ಪರಿಚಯವಾಗಿದೆ.

ಆಗ ಆರೋಪಿ ಸುರೇಂದ್ರ ರಾಜ್‌, ನಾಲ್ವರು ಯುವಕರಿಗೆ ಬ್ರಿಟನ್‌ ದೇಶದ ಆಯಿಲ್‌ ಕಂಪೆನಿಯೊಂದರಲ್ಲಿ ಕೆಲಸ ಕೊಡಿಸುತ್ತೇನೆ ಎಂದು ಆಸೆ ಹುಟ್ಟಿಸಿದ್ದ. ಈತನ ಸೂಚನೆಯಂತೆ ಮುಂಬೈಗೆ ಹೋದ ನಾಲ್ವರು ಯುವಕರು, ಆರೋಪಿ ಸ್ನೇಹಿತರಾದ ಸಿಂಗ್‌ ಮತ್ತು ಸಂತೋಷ್‌ ಎಂಬವರಿಗೆ ತಲಾ 2.5ಲಕ್ಷ ಎಂಬಂತೆ 10 ಲಕ್ಷ ಕೊಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿ ನಾಲ್ವರಿಗೂ ನಕಲಿ ವೀಸಾ ಕೊಡಿಸಿ ವಿದೇಶ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಹೇಳಿದ್ದ. ಈತನ ಮಾತು ನಂಬಿ ಬೆಂಗಳೂರಿನಿಂದ ಚೆನ್ನೈಗೆ ಹೋದ ನಾಲ್ವರಿಗೆ ತಾವು ವಂಚನೆಗೊಳ್ಳಗಾಗಿರುವುದು ಗೊತ್ತಾಗಿದೆ. ಕೂಡಲೇ ಚೆನ್ನೈ ಪೊಲೀಸರಿಗೆ ದೂರು ನೀಡಿದ್ದರು. ಅನಂತರ ಬೆಂಗಳೂರಿಗೆ ಬಂದು ಶ್ರೀರಾಮಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ನಗರದಲ್ಲಿ ಸಿಕ್ಕಿಬಿದ್ದ ಆರೋಪಿ: ವಂಚನೆಗೊಳ್ಳಗಾದ ಯುವಕರಿಗೆ ನಾಲ್ಕೈದು ತಿಂಗಳ ಬಳಿಕ ಕರೆ ಮಾಡಿದ ಸುರೇಂದ್ರ ರಾಜ್‌, ತಾಂತ್ರಿಕವಾಗಿ ತಪ್ಪಾದ್ದರಿಂದ ವಿದೇಶದಲ್ಲಿ ಕೆಲಸ ಕೊಡಿಸಲು ಸಾಧ್ಯವಾಗಲಿಲ್ಲ. ಇದೀಗ ಮತ್ತೂಂದು ಹೊಸ ವ್ಯವಹಾರ ಆರಂಭಿಸಿದ್ದೇನೆ.

ತಲಾ 20 ಸಾವಿರ ರೂ. ಹೂಡಿಕೆ ಮಾಡಿದರೆ ಲಾಭ ಬರುತ್ತದೆ ಎಂದು ನಂಬಿಸಿ, ನಗರಕ್ಕೆ ಬರುವುದಾಗಿ ತಿಳಿಸಿದ್ದ. ಈ ಮಾಹಿತಿಯನ್ನು ನಾಲ್ವರು ಯುವಕರು ಶ್ರೀರಾಮಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಸುರೇಂದ್ರ ರಾಜ್‌ ಡಿ.20ರಂದು ರಾಜಾಜಿನಗರಕ್ಕೆ ಬಂದಾಗ ಪೊಲೀಸರು ಬಂಧಿಸಿದ್ದಾರೆ.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.