300 ಅಲ್ಲ,700 ಕೋಟಿ ರೂ.ಗಳ ವಂಚನೆ


Team Udayavani, Mar 13, 2018, 6:00 AM IST

rupees-2000–8885.jpg

ಬೆಂಗಳೂರು: ಹಣ ದ್ವಿಗುಣಗೊಳಿಸುವ ವಿಮೆಗಳು, ಷೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಹೆಸರಿನಲ್ಲಿ ನೂರಾರು ಕೋಟಿ ರೂ. ವಂಚಿಸಿದ ವಿಕ್ರಂ ಇನ್‌ವೆಸ್ಟ್‌ಮೆಂಟ್‌ ಕಂಪೆನಿ ವಿರುದ್ಧ ದೂರುಗಳ ಮಹಾಪೂರವೇ ಹರಿದು ಬರುತ್ತಿದೆ. ಈಗಾಗಲೇ ಪೊಲೀಸರ ವಶದಲ್ಲಿರುವ ಆರೋಪಿಗಳಾದ ಶ್ರೀನಾಥ್‌ ಮತ್ತು ಸೂತ್ರಂ ಸುರೇಶ್‌ ಸೇರಿ ಐವರು ಆರೋಪಿಗಳು ವಂಚನೆ ಬಗ್ಗೆ ಇನ್ನಷ್ಟು ಮಾಹಿತಿ ಬಾಯಿಬಿಟ್ಟಿದ್ದು, ಇದು 700 ಕೋಟಿಗೂ ಮೀರಿದ ವಂಚನೆ ಎಂಬುದು ಗೊತ್ತಾಗಿದೆ. ಹೀಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈಗಾಗಲೇ ಕ್ರಿಕೆಟಿಗರು, ಕ್ರೀಡಾಪಟುಗಳು ಹಾಗೂ ಗಣ್ಯ ವ್ಯಕ್ತಿಗಳನ್ನು ಟಾರ್ಗೆಟ್‌ ಮಾಡಿಕೊಂಡು ವಂಚಿಸಿರುವ ಆರೋಪಿಗಳು ಸರ್ಕಾರಿ ವೈದ್ಯರು, ಎಂಜಿನಿಯರ್‌ಗಳು, ನೌಕರರು ಸೇರಿ ಸಾಮಾನ್ಯ ವ್ಯಕ್ತಿಗಳಿಗೆ ಲಕ್ಷಾಂತರ ರೂ. ವಂಚಿಸಿದ್ದಾರೆ. ಈ ಸಂಬಂಧ ಸೋಮವಾರ ಸುಮಾರು 70ಕ್ಕೂ ಅಧಿಕ ಮಂದಿ ವಂಚನೆಗೊಳಗಾದ ಜನರು ಬಸವನಗುಡಿ ಠಾಣೆಗೆ ದೂರು ನೀಡಿದ್ದಾರೆ. ಈ ಪಟ್ಟಿಯಲ್ಲಿ 2 ಲಕ್ಷದಿಂದ 2 ಕೋಟಿ ವರೆಗೆ ವಂಚನೆಗೊಳಗಾದವರು ಇದ್ದಾರೆ.

ಮೂಲಗಳ ಪ್ರಕಾರ ಕ್ರೀಡಾಪಟುಗಳು, ಗಣ್ಯರೇ ಹೆಚ್ಚಿನ ಸಂಖ್ಯೆಯಲ್ಲಿ ವಂಚನೆಗೊಳಗಾಗಿದ್ದಾರೆ. ಆದರೆ, ಇದುವರೆಗೂ ಅಂತಹ ವ್ಯಕ್ತಿಗಳು ಯಾರೂ ದೂರು ನೀಡಿಲ್ಲ. ಒಂದು ವೇಳೆ ಪ್ರಕರಣ ದಾಖಲಿಸಿದರೆ ತನಿಖೆಗೆ ಅನುಕೂಲವಾಗುತ್ತದೆ ಎಂದು ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದರು.

ಎಲ್‌ಐಸಿ ಏಜೆಂಟ್‌ಗಳ ಮೂಲಕವೇ ವಂಚನೆ
ಶ್ರೀನಾಥ್‌ ಮತ್ತು ಸೂತ್ರಂ ಸುರೇಶ್‌ ಹೊರತು ಪಡಿಸಿದರೆ ಇನ್ನುಳಿದಂತೆ 40ಕ್ಕೂ ಅಧಿಕ ಮಂದಿ ಎಲ್‌ಐಸಿ ಏಜೆಂಟ್‌ಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿಯಿದೆ. ಈ ಸಂಬಂಧ ಅಂತಹ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು. ಸಾಮಾನ್ಯವಾಗಿ ಎಲ್‌ಐಸಿ ಏಜೆಂಟ್‌ಗಳಿಗೆ ಎರಡೆರಡು ಕಂಪನಿಯ ವಿಮಾ ಪಾಲಿಸಿ ಮಾಡಿಸಲು ಅವಕಾಶವಿಲ್ಲ. ಆದರೆ, ಎಲ್‌ಐಸಿ ಏಜೆನ್ಸಿ ಜತೆಗೆ ಬೇರೆ ವ್ಯವಹಾರದಲ್ಲಿ ತೊಡಗುವ ಅವಕಾಶವಿರುತ್ತದೆ. ಇದನ್ನೆ ದುರುಪಯೋಗ ಪಡಿಸಿಕೊಂಡ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ವರ್ಷದಿಂದ ಹಣ ನೀಡಿಲ್ಲ
ಆರೇಳು ವರ್ಷಗಳಿಂದ ಕಂಪೆನಿ ನಡೆಸುತ್ತಿರುವ ಆರೋಪಿಗಳು ಆರಂಭದಲ್ಲಿ ನ್ಯಾಯಯುತವಾಗಿ ಪ್ರತಿ ತಿಂಗಳು ಹಣ ಹಿಂದಿರುಗಿಸುತ್ತಿದ್ದರು. ಆದರೆ, ಕಳೆದ ಒಂದು ವರ್ಷದಿಂದ ಹಣ ಹಿಂದಿರುಗಿಸದೆ ಆಗಾಗ ನೀಡುತ್ತಿದ್ದರು. ಕಳೆದ 8 ತಿಂಗಳಿಂದ ಯಾವುದೇ ಹಣ ನೀಡದೆ ವಂಚಿಸಿದ್ದಾರೆ ಎಂದು ಕೆಲವರು ದೂರಿನಲ್ಲಿ ಆರೋಪಿಸಿದ್ದಾರೆ.

ಪತ್ನಿಗಾಗಿ ಹುಡುಕಾಟ
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಶ್ರೀನಾಥ್‌ ಪತ್ನಿ ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ.
ಇದರೊಂದಿಗೆ ಶ್ರೀನಾಥ್‌ಗೆ ಸೇರಿದ 12 ಬ್ಯಾಂಕ್‌ ಖಾತೆಗಳು, ಎರಡು ಕಾರು ಹಾಗೂ ಇತರೆ ಮೌಲ್ಯಯುತ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.