5 ಲಕ್ಷ ರೂ. ಡ್ರಾ ಮಾಡಿಕೊಳ್ಳಲು ಅವಕಾಶ ನೀಡಿ
Team Udayavani, Oct 10, 2017, 11:21 AM IST
ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ವಾಣಿಜ್ಯ ಸಹಕಾರ ಸಂಘದ ಠೇವಣಿದಾರರು ಗರಿಷ್ಠ 5 ಲಕ್ಷ ರೂ.ವರೆಗೆ ಹಣ ಬಿಡಿಸಿಕೊಳ್ಳಲು ಅವಕಾಶ ನೀಡುವಂತೆ ಸಂಘದ ಆಡಳಿತಾಧಿಕಾರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ತಮ್ಮ ಖಾತೆಯಲ್ಲಿರುವ ಹಣ ಹಿಂಪಡೆದುಕೊಳ್ಳಲು ಅವಕಾಶ ಕಲ್ಪಿಸದ ಸಂಘದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಕೆಲ ಠೇವಣಿದಾರರ ಅರ್ಜಿಗಳನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರಿದ್ದ ಏಕಸದಸ್ಯಪೀಠ, ಈ ನಿರ್ದೇಶನ ನೀಡಿತು.
ಸಾಕಷ್ಟು ಮಂದಿ ಠೇವಣಿದಾರರು ತಮ್ಮ ದುಡಿಮೆಯ ಹಣವನ್ನು ಖಾತೆಯಲ್ಲಿ ಠೇವಣಿ ಇರಿಸಿರುತ್ತಾರೆ. ತಾಂತ್ರಿಕ ಕಾರಣಗಳಿಂದ ಅವರಿಗೆ ಹಣ ವಿತ್ಡ್ರಾ ಮಾಡಿಕೊಳ್ಳಲು ಅವಕಾಶ ಕಲ್ಪಿಸದಿರುವುದು ಸರಿಯಲ್ಲ. ಹೀಗಾಗಿ ಸದ್ಯಕ್ಕೆ ಠೇವಣಿದಾರರು ಇಟ್ಟಿರುವ ಮೊತ್ತದಲ್ಲಿ ಗರಿಷ್ಠ 5 ಲಕ್ಷ ರೂ. ಹಿಂಪಡೆದುಕೊಳ್ಳಲು ಅವಕಾಶ ನೀಡಬೇಕು.
5 ಲಕ್ಷ ರೂ.ಗಳಿಗಿಂತ ಕಡಿಮೆ ಮೊತ್ತ ಇರಿಸಿರುವ ಠೇವಣಿದಾರರು ತಮ್ಮ ಹಣವನ್ನು ವಾಪಾಸ್ ಪಡೆದುಕೊಳ್ಳಲಿ. ಈ ಬಗ್ಗೆ ಎಲ್ಲ ಠೇವಣಿದಾರರಿಗೂ ಮಾಹಿತಿ ತಿಳಿಯುವವಂತೆ ಪ್ರಕಟಣೆ ಹೊರಡಿಸಿ ವರದಿ ನೀಡಿ ಎಂದು ಸಂಘದ ಆಡಳಿತಾಧಿಕಾರಿಗೆ ನಿರ್ದೇಶಿಸಿದ ನ್ಯಾಯಪೀಠ, ಅಕ್ಟೋಬರ್ 30ಕ್ಕೆ ವಿಚಾರಣೆ ಮುಂದೂಡಿತು.
ಏನಿದು ವಿವಾದ?: ಬಸವನಗುಡಿಯಲ್ಲಿರುವ ಕರ್ನಾಟಕ ರಾಜ್ಯ ಕೈಗಾರಿಕಾ ವಾಣಿಜ್ಯ ಸಹಕಾರ ಸಂಘ ನಿಯಮಿತದಲ್ಲಿ ಸುಮಾರು 71 ಸಾವಿರಕ್ಕೂ ಅಧಿಕ ಗ್ರಾಹಕರು ಖಾತೆ ತೆರೆದು ಹಣ ಠೇವಣಿ ಇರಿಸಿದ್ದಾರೆ. ಆದರೆ, ಸಂಘಕ್ಕೆ ಬ್ಯಾಂಕ್ ಮಾನ್ಯತೆ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ ನಿರಾಕರಿಸಿದೆ.
ಹೀಗಾಗಿ ತಮ್ಮ ಹಣವನ್ನು ವಾಪಾಸ್ ನೀಡುವಂತೆ ಗ್ರಾಹಕರು ಸಂಘದ ಆಡಳಿತಾಧಿಕಾರಿಯನ್ನು ಕೋರಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ತಮ್ಮ ಹಣ ವಾಪಾಸ್ ಪಡೆದುಕೊಳ್ಳಲು ಆಡಳಿತಾಧಿಕಾರಿಗೆ ನಿರ್ದೇಶನ ನೀಡುವಂತೆ ಕೋರಿ ಹಲವು ಗ್ರಾಹಕರು ಹೈಕೋರ್ಟ್ ಮೊರೆಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.