![1-lo](https://www.udayavani.com/wp-content/uploads/2024/07/1-lo-415x228.jpg)
ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಉಪಕರಣ ಖರೀದಿಗೆ 5 ಲಕ್ಷ ರೂಗಳ ಸಹಾಯಧನ
Team Udayavani, Jun 18, 2022, 3:56 PM IST
![ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಉಪಕರಣ ಖರೀದಿಗೆ 5 ಲಕ್ಷ ರೂಗಳ ಸಹಾಯಧನ](https://www.udayavani.com/wp-content/uploads/2022/06/jolle-620x342.jpg)
ಬೆಂಗಳೂರು: ಅಲ್ಪಸಂಖ್ಯಾತ ಮಹಿಳೆಯರು ಹಾಗೂ ಬಡರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ರಿಜಿಡ್ ನೆಪ್ರೋಸ್ಕೋಪ್ ಖರೀದಿಸಲು ಕರ್ನಾಟಕ ಸ್ಟೇಟ್ ವಕ್ಫ್ ಫೌಂಡೇಷನ್ ಫಾರ್ ವುಮೆನ್ ಡೆವಲಪ್ಮೆಂಟ್ ವತಿಯಿಂದ 5 ಲಕ್ಷ ರೂಪಾಯಿಗಳ ಸಹಾಯಧನದ ಚೆಕ್ ನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹಸ್ತಾಂತರಿಸಿದರು.
ಇಂದು ವಿಕಾಸಸೌಧದಲ್ಲಿ ಚೆಕ್ ಅನ್ನು ಹಸ್ತಾಂತರಿಸಿ ಮಾತನಾಡಿದ ಸಚಿವರು, ಕರ್ನಾಟಕ ಸ್ಟೇಟ್ ವಕ್ಫ್ ಫೌಂಡೇಷನ್ ಫಾರ್ ವುಮೆನ್ ಡೆವಲಪ್ಮೆಂಟ್ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರ ಚಿಕಿತ್ಸೆಗಾಗುವ ಖರ್ಚನ್ನು ಭರಿಸಲಾಗುತ್ತಿದೆ. ಶಿವಾಜಿನಗರದಲ್ಲಿರುವ ಸರ್ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಇನ್ಸಿಟ್ಯೂಟ್ ಸಂಸ್ಥೆಯ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಮತ್ತು ಬಡರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಈ ಸಂಸ್ಥೆಯ ಮನವಿಯಂತೆ ರಿಜಿಡ್ ನೆಪ್ರೋಸ್ಕೋಪ್ ಉಪಕರಣ ಖರೀದಿಸಲು 5 ಲಕ್ಷ ರೂಪಾಯಿಗಳ ಸಹಾಯಧನವನ್ನು ನೀಡಲಾಗಿದೆ. ಎಲ್ಲರಿಗೂ ಉತ್ತಮ ಚಿಕಿತ್ಸೆ ದೊರೆಯಲಿ ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.
ಬೌರಿಂಗ್ ಆಸ್ಪತ್ರೆಯ ವೈದ್ಯರಾದ ಡಾ. ಶ್ರೀಕಾಂತ್, ಡಾ. ಅಭಿಜಿತ್, ಡಾ. ಜಹೀರ್ ಮತ್ತು ಆಹಾರ ತಜ್ಞರಾದ ಮೇಘಾ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
![1-lo](https://www.udayavani.com/wp-content/uploads/2024/07/1-lo-415x228.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
![Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!](https://www.udayavani.com/wp-content/uploads/2024/07/5-1-150x90.jpg)
Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!
MUST WATCH
ಹೊಸ ಸೇರ್ಪಡೆ
![1-lo](https://www.udayavani.com/wp-content/uploads/2024/07/1-lo-150x82.jpg)
Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-qe](https://www.udayavani.com/wp-content/uploads/2024/07/1-qe-150x87.jpg)
Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.