ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ಗೆ 50 ಕೋಟಿ ರೂ. ಅನುದಾನ


Team Udayavani, Aug 22, 2018, 12:24 PM IST

anmbedkat.jpg

ಬೆಂಗಳೂರು: ಅಂತಾರಾಷ್ಟ್ರೀಯ ದರ್ಜೆಯ ಡಾ.ಬಿ.ಆರ್‌.ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಸಂಸ್ಥೆ ನಿರ್ಮಾಣಕ್ಕೆ ಪೂರಕ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಅನುದಾನ ಕೋರಿ ಸಲ್ಲಿಸಿದ ಪ್ರಸ್ತಾವಕ್ಕೆ ಸ್ಪಂದಿಸಿರುವ ಸಮಾಜ ಕಲ್ಯಾಣ ಇಲಾಖೆ ಅಗತ್ಯ ಅನುದಾನ ನೀಡಲು ಒಪ್ಪಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ನ ಆರನೇ ಆಡಳಿತ ಮಂಡಳಿ ಸಭೆಯಲ್ಲಿ ಮಂಗಳವಾರ ಪಾಲ್ಗೊಂಡ ಬಳಿಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ಆಡಳಿತ ಮಂಡಳಿ ಅಧ್ಯಕ್ಷ ಮಾಂಟೆಕ್‌ ಸಿಂಗ್‌ ಅಹ್ಲುವಾಲಿಯಾ ಸೇರಿದಂತೆ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ಮಾಜಿ ಕುಲಪತಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು ಎಂದು ಹೇಳಿದರು.

ಮುಖ್ಯವಾಗಿ ಲಂಡನ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಮಾದರಿ, ಅಲ್ಲಿನ ಕಲಿಕಾ ವ್ಯವಸ್ಥೆ, ಕಾರ್ಯ ನಿರ್ವಹಣೆ ಇತರೆ ಅಂಶಗಳನ್ನು ಚರ್ಚಿಸಿ ಅದೇ ಮಾದರಿಯಲ್ಲಿ ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಸಂಸ್ಥೆಯನ್ನು ಹೇಗೆ ರೂಪಿಸಬಹುದು ಎಂಬ ಬಗ್ಗೆ ಮಾತುಕತೆ ನಡೆಯಿತು. ಉಪನ್ಯಾಸಕರ ನೇಮಕ, ಸ್ವಾಯತ್ತ ಅಧಿಕಾರ ವ್ಯವಸ್ಥೆ, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮಾಹಿತಿ ನೀಡಿದರು.

50 ಕೋಟಿ ರೂ. ನೀಡಲು ಒಪ್ಪಿಗೆ: ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಸಂಸ್ಥೆಗೆ ಪೂರಕವಾಗಿ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಅನುದಾನ ಕೋರಿ ಸಮಾಜ ಕಲ್ಯಾಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ಸಚಿವರು ಒಪ್ಪಿದ್ದು, ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸದ್ಯ ಹಂಗಾಮಿ ನಿರ್ದೇಶಕರಿದ್ದು, ಶೀಘ್ರವೇ ಕಾಯಂ ನಿರ್ದೇಶಕರನ್ನು ನೇಮಿಸಲಾಗುವುದು ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಡಾ.ಎನ್‌.ಮಂಜುಳಾ, ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಸಂಸ್ಥೆಯಲ್ಲಿ ನಾಲ್ಕು ಮಂದಿ “ಅಡ್‌ಹಾಕ್‌’ ಉಪನ್ಯಾಸಕರು ಹಾಗೂ 13 ಮಂದಿ ಅತಿಥಿ ಉಪನ್ಯಾಸಕರಿದ್ದಾರೆ. 50 ವಿದ್ಯಾರ್ಥಿಗಳಿದ್ದು, ಇದರಲ್ಲಿ 30 ಮಂದಿ ರಾಜ್ಯದವರಾಗಿದ್ದರೆ, 20 ಮಂದಿ ಅನ್ಯರಾಜ್ಯದವರಾಗಿದ್ದಾರೆ. ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಈ ಹಿಂದೆ ಆರಂಭಿಸಿದ್ದ ಯಾವ ಯೋಜನೆ, ಕಾಮಗಾರಿಯನ್ನು ಸ್ಥಗಿತಗೊಳಿಸದೆ ಮುಂದುವರಿಸಲಾಗಿದೆ ಎಂದು ತಿಳಿಸಿದರು.

ನಿರ್ದೇಶಕರಿಗೆ ತರಾಟೆ: ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸೀಟು ಭರ್ತಿ ವಿವರ ತಮ್ಮ ಬಳಿಯಿಲ್ಲ, ವೆಬ್‌ಸೈಟ್‌ ನೋಡಿಕೊಳ್ಳಿ ಎಂದ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್‌.ಯು.ತಳವಾರ ಅವರನ್ನು ಪತ್ರಿಕಾಗೋಷ್ಠಿಯಲ್ಲೇ ಸಚಿವ ಜಿ.ಟಿ.ದೇವೇಗೌಡ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಂಗಳವಾರ ನಡೆಯಿತು.

33 ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಒಂದು ಸೀಟು ಭರ್ತಿಯಾಗದಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ತಳವಾರ ಅವರು ನೀಡಿದ ಪ್ರತಿಕ್ರಿಯೆಗೆ ಬೇಸರಗೊಂಡ ಸಚಿವ ಜಿ.ಟಿ.ದೇವೇಗೌಡ, ಆ ರೀತಿಯ ಹಾರಿಕೆ ಉತ್ತರ ನೀಡುವುದು ಸರಿಯಲ್ಲ. ಮಾಹಿತಿ ಸಂಗ್ರಹಿಸಿ ಸಮಗ್ರ ವಿವರ ನೀಡಬೇಕು ಎಂದು ತಾಕೀತು ಮಾಡಿದರು.

ಇದಕ್ಕೂ ಮೊದಲು ಮಾತನಾಡಿದ ತಳವಾರ, ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಬೇಡಿಕೆ ಕಡಿಮೆಯಾಗಿದೆ. ಅನ್ಯ ರಾಜ್ಯಗಳಲ್ಲಿ ಶೇ.30ರಷ್ಟು ಸೀಟು ಭರ್ತಿಯಾಗಿದ್ದರೆ ಕರ್ನಾಟಕದಲ್ಲಿ ಶೇ.60- ಶೇ.70ರಷ್ಟು ಸೀಟು ಭರ್ತಿಯಾಗಿದ್ದು, ಪರಿಸ್ಥಿತಿ ಉತ್ತಮವಾಗಿದೆ.

ಬೇಡಿಕೆಯಿಲ್ಲದ ಕೋರ್ಸ್‌ಗಳಿಗೆ ಸೇರಲು ವಿದ್ಯಾರ್ಥಿಗಳು ಇಚ್ಛಿಸುವುದಿಲ್ಲ. ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಸೀಟು ಭರ್ತಿ ವಿವರವನ್ನು ಎಐಸಿಟಿಇ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದ್ದು, ಅಲ್ಲಿಯೇ ನೋಡಿಕೊಳ್ಳಿ ಎಂದು ಪತ್ರಕರ್ತರಿಗೆ ಹೇಳುವ ಮೂಲಕ ಸಚಿವರ ಕೆಂಗಣ್ಣಿಗೆ ಗುರಿಯಾದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.