ಬದಲಿ ನಿವೇಶನ ಹಂಚಿ 600 ಕೋಟಿ ಅವ್ಯವಹಾರ


Team Udayavani, Mar 20, 2019, 6:35 AM IST

badali-nicv.jpg

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ರಾಜಕೀಯ ಪಕ್ಷವೊಂದರ ಮುಖಂಡರಿಗೆ 245 ಬದಲಿ ನಿವೇಶನ ಹಂಚಿಕೆ ಮಾಡಿ 600 ಕೋಟಿ ರೂ.ಗಳ ಅವ್ಯವಹಾರ ನಡೆಸಿದೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಗರಣ ಕುರಿತು 688 ಪುಟಗಳ ದಾಖಲೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಮಾಜಿ ಸದಸ್ಯ ಹನುಮಂತೇಗೌಡ ಹಾಗೂ ಅವರ ಸಂಬಂಧಿಕರಿಗೆ ಬಿಡಿಎ ಆಯುಕ್ತರಾಗಿದ್ದ ಶ್ಯಾಂಭಟ್‌ ಅವರು 600 ಕೋಟಿ ರೂ. ಮೌಲ್ಯದ 245 ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ದೂರಿದರು.

ಬಿಡಿಎ ವತಿಯಿಂದ ಎಚ್‌ಎಸ್‌ಆರ್‌ ಬಡಾವಣೆ, ಜ್ಞಾನಭಾರತಿ ಬಡಾವಣೆ, ಬನಶಂಕರಿ 6ನೇ ಹಂತದ ಬಡಾವಣೆ, ವಿಶ್ವೇಶ್ವರಯ್ಯ ಬಡಾವಣೆಗಳಲ್ಲಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ, ಈ ಬದಲಿ ನಿವೇಶನ ಹಂಚಿಕೆ ಮಾಡುವಾಗ ನಿಯಮ ಪಾಲಲಿಸಿಲ್ಲ. ಬಿಡಿಎ ಎಲ್ಲೆಲ್ಲಿ ಭೂ ಸ್ವಾಧೀನ ಮಾಡಿಕೊಳ್ಳುತ್ತದೆ ಎಂಬ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದ ಹನುಮಂತೇಗೌಡ,

ಭೂ ಮಾಲೀಕರ ದಿಕ್ಕು ತಪ್ಪಿಸಿ ಜಿಪಿಎ ಮೂಲಕ ಸ್ವತ್ತುಗಳನ್ನು ಪಡೆದುಕೊಂಡು ಅದನ್ನು ತನ್ನ ಸಂಬಂಧಿಕರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡು ನಂತರ ಆ ಸ್ವತ್ತುಗಳನ್ನು ಬಿಡಿಎಗೆ ನೀಡಿ ಅದರ ಬದಲು ಈಗಾಗಲೇ ಬಿಡಿಎ ಅಭಿವೃದ್ಧಿಪಡಿಸಿದ್ದ ನಿವೇಶನಗಳನ್ನು ಪರಿಹಾರದ ರೂಪದಲ್ಲಿ ಪಡೆದುಕೊಂಡು ಸರ್ಕಾರಕ್ಕೇ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಎಚ್‌. ಶಶಿಧರ್‌ ವರದಿಯಲ್ಲಿರುವಂತೆ ಬಿಡಿಎಯಿಂದ ಬದಲಿ ನಿವೇಶನ ಪಡೆದುಕೊಳ್ಳಬೇಕಾದಲ್ಲಿ 12 ಅಂಶಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ. ಅದರಲ್ಲಿ 12 ವರ್ಷಗಳ ಆರ್‌ಟಿಸಿ ಮತ್ತು ಪಹಣಿ, 14 ವರ್ಷಗಳ ಋಣಭಾರ ರಾಹಿತ್ಯ ಪತ್ರ, 12 ವರ್ಷಗಳ ಸಾಗುವಳಿ ಚೀಟಿ, ಆ ಭೂಮಿಗೆ ಸಂಬಂಧಿಸಿದ ಐಎಲ್‌ ಮತ್ತು ಆರ್‌ಆರ್‌ ದಾಖಲೆಗಳು, ದೃಢೀಕೃತ ಮ್ಯುಟೇಷನ್‌ ದಾಖಲೆಗಳು, ಜಮೀನಿನ ಹಿಸ್ಸಾ ನಕ್ಷೆ ಒದಗಿಸುವುದು ಅಗತ್ಯವಾಗಿರುತ್ತದೆ. ಆದರೆ, ಈ ಯಾವುದೇ ನಿಯಮಾವಳಿಯನ್ನು ಪಾಲನೆ ಮಾಡಿಲ್ಲ ಎಂದರು.

ಬಿಡಿಎ 1984ರ 11/ ಎ ಅನುಗುಣವಾಗಿ ಯಾವುದೇ ಬದಲಿ ನಿವೇಶನ ನೀಡಬೇಕಾದರೆ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸಂಬಂಧಿಸಿದಂತೆ ರಚನೆಯಾಗುವ ಬಡಾವಣೆಯಲ್ಲಿ ಅಥವಾ ಆ ನಂತರ ರಚನೆಯಾಗುವ ಬಡಾವಣೆಗಳಲ್ಲಿ ಮಾತ್ರವೇ ನೀಡಬೇಕು. ಅದಕ್ಕೂ ಹಿಂದೆ ರಚನೆಯಾಗಿರುವ ಬಡಾವಣೆಗಳಲ್ಲಿ ಯಾವುದೇ ಕಾರಣಕ್ಕೂ ಬದಲೀ ನಿವೇಶನ ಹಂಚಿಕೆ ಮಾಡುವಂತಿಲ್ಲ.

ಇನ್ನು ಪ್ರಾಧಿಕಾರವು ಒಂದು ಬಡಾವಣೆಯ ರಚನೆಯ ಬಗ್ಗೆ ಅಧಿಸೂಚನೆ ಹೊರಡಿಸಿದ ನಂತರ ನಿಜವಾದ ಫಲಾನುಭವಿಗಳಿಂದ ಯಾವುದೇ ಪರವ್ಯಕ್ತಿ ಆ ಜಮೀನನ್ನು ಕ್ರಯಕ್ಕೆ ಪಡೆಯುವಂತಿಲ್ಲ ಎಂಬ ನಿಯಮವಿದೆ. ಆದರೆ, ಹನುಮಂತೇಗೌಡ ಎಲ್ಲಾ ನಿಯಮ, ಭೂ ಸ್ವಾಧೀನ ಕಾಯ್ದೆಯ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಈ ಸಂಬಂಧ ಎಸಿಬಿ, ಬಿಎಂಟಿಎಫ್, ಲೋಕಾಯುಕ್ತದಲ್ಲಿ ದೂರು ದಾಖಲೆ ಮಾಡಲಾಗಿದ್ದು, ಹಗರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.