![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 13, 2019, 3:05 AM IST
ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ನಡೆ ತೋರಿ ಪೊಲೀಸರಿಗೆ ಸಿಕ್ಕಿಬಿದ್ದ ರಾಜಸ್ಥಾನದ ಝುನ್ಜುನು ಜಿಲ್ಲೆಯ ಸಾಜಿದ್ ಖಾನ್, “ಕೂಲಿ ಕಾರ್ಮಿಕ’ ಎಂಬುದು ಪೊಲೀಸರ ತನಿಖೆ ವೇಳೆ ಪತ್ತೆಯಾಗಿದೆ.
ಆರ್.ಟಿ.ನಗರದ ಮಸೀದಿ ಬಳಿ ಶುಕ್ರವಾರ ತಡರಾತ್ರಿ ಸಾಜಿದ್ಖಾನ್ನನ್ನು ವಶಕ್ಕೆ ಪಡೆದ ಉಪ್ಪಾರಪೇಟೆ ಪೊಲೀಸರು, ಕೂಡಲೇ ಕಾಟನ್ಪೇಟೆಯ ಲಾಡ್ಜ್ನಲ್ಲಿದ್ದ ಆತನ ಪತ್ನಿ ಮತ್ತು ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದರು.
ನಂತರ ಆತನ ಸ್ವಂತ ಊರಾದ ಝುನ್ಜುನು ಜಿಲ್ಲೆಯದ ಜಿರಾದಿನ್ ಗ್ರಾಮಕ್ಕೆ ಸಬ್ಇಸ್ಪೆಕ್ಟರ್ ನೇತೃತ್ವದ ತಂಡ ತೆರೆಳಿ ಆತನ ಪೂರ್ವಾಪರ ಪರಿಶೀಲನೆ ನಡೆಸಿದೆ. ಈ ವೇಳೆ ಸಾಜಿದ್ ಖಾನ್, ಒಬ್ಬ ಮಧ್ಯಮ ವರ್ಗದ ವ್ಯಕ್ತಿಯಾಗಿದ್ದು, ಕೂಲಿ ಕಾರ್ಮಿಕನಾಗಿದ್ದಾನೆ.
ಆತನ ಪತ್ನಿ ಕೂಡ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ಬಂದಿದ್ದ ಸಾಜಿದ್ ಖಾನ್ ಮತ್ತು ಕುಟುಂಬ ನಗರದ ವಿವಿಧ ಮಸೀದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರು ಕೊಡುವ ದಾನ ಪಡೆಯಲು ಬಂದಿದ್ದರು ಎಂದು ಪೊಲೀಸರು ಹೇಳಿದರು.
ಮೇ 6ರಂದು ವಿವಿಧ ಮಸೀದಿಗಳ ಬಳಿ ದಾನವಾಗಿ ಪಡೆದಿದ್ದ ನಾಣ್ಯಗಳು ಹಾಗೂ ಸೊಂಟದಲ್ಲಿದ್ದ ತಾಯತಗಳಿಂದ ಲೋಹಶೋಧಕ ಯಂತ್ರದಲ್ಲಿ ಕೆಂಪು ದೀಪ ಹೊತ್ತಿಕೊಂಡು ಬೀಪ್ ಸದ್ದು ಜೋರಾಗಿ ಕೇಳಿ ಬಂದಿತ್ತು.
ಈ ದೃಶ್ಯಾವಳಿಗಳನ್ನಾಧರಿಸಿ ಕೆಲ ಮಾಧ್ಯಮಗಳು ಅನುಮಾನಸ್ಪದ ವ್ಯಕ್ತಿ ಎಂದು ಊಹಾಪೋಹ ಸುದ್ದಿ ಹಬ್ಬಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಶುಕ್ರವಾರ ರಾತ್ರಿ ಆರ್.ಟಿ.ನಗರದ ಮಸೀದಿ ಬಳಿ ಸಾಜಿದ್ಖಾನ್ ಪತ್ತೆಯಾಗಿದ್ದ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.