![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 9, 2022, 9:32 AM IST
ಬೆಂಗಳೂರು: ಸೀರೆ ಮಾರಾಟಗಾರರ ಸೋಗಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ದಂಧೆಕೋರರು ಸೇರಿ ಐವರು ಯಶವಂತಪುರ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಆಂಧ್ರಪ್ರದೇಶದ ತಿರುಪತಿ ಮೂಲದ ಕಾಳ ಪಾಲಿ ನಾಗೇಂದ್ರ (32), ವಿಶಾಖಪಟ್ಟಣಂನ ಜಮೀಲ್ ಅಲಿಯಾಸ್ ಶಿವ (29), ರಾಮಣ್ಣ (32), ಸ್ಥಳೀಯ ನಿವಾಸಿಗಳಾದ ಕಿರಣ್ (28), ಮಣಿಕಂಠ (31) ಬಂಧಿತರು.
ಆರೋಪಿಗಳಿಂದ 53.05 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಯಶವಂತಪುರ ಠಾಣೆ ವ್ಯಾಪ್ತಿಯ ಜಯರಾಮ್ ಕಾಲೋನಿ, ಕೆನರಾ ಯೂನಿಯಲ್ ರಸ್ತೆ ಹಾಗೂ ಇತರೆಡೆ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ಕುರಾನ್ ಗೆ ಅಗೌರವ: ಅಫ್ಘಾನ್ ಫ್ಯಾಷನ್ ಮಾಡೆಲ್ ಬಂಧಿಸಿದ ತಾಲಿಬಾನ್
ಆಂಧ್ರಪ್ರದೇಶ ಮೂಲದ ಆರೋಪಿಗಳು ಕಾಕಿನಾಡ ಮೂಲದ ವ್ಯಕ್ತಿಯಿಂದ ಕಡಿಮೆ ಮೊತ್ತಕ್ಕೆ ಗಾಂಜಾ ಖರೀದಿಸಿ, ಅವುಗಳನ್ನು ಚಿಕ್ಕ ಪ್ಯಾಕ್ಗಳನ್ನಾಗಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಆಂಧ್ರಪ್ರದೇಶದಿಂದ ಗಾಂಜಾ ತರುವಾಗ ದೊಡ್ಡ ಬ್ಯಾಗ್ಗಳ ಕೆಳಭಾಗದಲ್ಲಿ ಗಾಂಜಾ ಪ್ಯಾಕೆಟ್ಗಳನ್ನು ಇಟ್ಟು, ಮೇಲ್ಭಾಗದಲ್ಲಿ ಸೀರೆಗಳನ್ನು ತುಂಬಿ, ಖಾಸಗಿ ಬಸ್ನಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಸೀರೆಮಾರಾಟಗಾರರ ಸೋಗಿನಲ್ಲಿ ಬಂದು ಕಿರಣ್ ಮತ್ತು ಮಣಿಕಂಠನಿಗೆ ಕೊಟ್ಟು ಹೋಗುತ್ತಿ ದ್ದರು. ಇತ್ತೀಚೆಗೆ ಠಾಣೆ ವ್ಯಾಪ್ತಿಯ ಜಯರಾಮ ಕಾಲೋನಿಯಲ್ಲಿ ಗಾಂಜಾ ಮಾರಾಟ ಮಾಡುವಾಗ ಸಿಕ್ಕಿ ಬಿದ್ದಿದ್ದಾರೆ ಎಂದು ಪೊಲೀಸರು ಹೇಳಿದರು. ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.