ಶಾಲಾ ಪಠ್ಯದಲ್ಲಿ ‘ಮಣ್ಣಿನ ಸಂರಕ್ಷಣೆ’ಯ ಕುರಿತ ಪಾಠ ಸೇರ್ಪಡೆ : ಬಿ.ಸಿ. ನಾಗೇಶ್


Team Udayavani, Jun 19, 2022, 5:33 PM IST

ಶಾಲಾ ಪಠ್ಯದಲ್ಲಿ ‘ಮಣ್ಣಿನ ಸಂರಕ್ಷಣೆ’ಯ ಕುರಿತ ಪಾಠ ಸೇರ್ಪಡೆ: ಬಿ.ಸಿ. ನಾಗೇಶ್

ಬೆಂಗಳೂರು:  ಭೂಮಿ ಮೇಲಿನ ಜೀವ ಸಂಕುಲದ ಉಳಿವಿಗೆ ಅತ್ಯಗತ್ಯವಾಗಿರುವ ಮಣ್ಣು ಹಾಗೂ ‘ಮಣ್ಣಿನ ಸಂರಕ್ಷಣೆ’ಯ ಮಹತ್ವದ ಕುರಿತು ಶಾಲಾ ಪಠ್ಯದಲ್ಲಿ ಮುಂಬರುವ ವರ್ಷಗಳಲ್ಲಿ ಪಾಠವನ್ನು ಸೇರ್ಪಡೆ ಮಾಡಲು ಪ್ರಯತ್ನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.

ಈಶ ಫೌಂಡೇಶನ್‌ವತಿಯಿಂದ ಭಾನುವಾರ (ಜೂನ್.19) ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಮಣ್ಣು ಉಳಿಸಿ’ಕಾರ್ಯಕ್ರಮದಲ್ಲಿ ಸಚಿವ ನಾಗೇಶ್ ಅವರು ಮಾತನಾಡಿದರು.

‘ಅತಿಯಾದ ಕೀಟನಾಶಕ, ರಾಸಯನಿಕಗಳ ಬಳಕೆಯಿಂದ ದಿನದಿಂದ ದಿನಕ್ಕೆ ಮಣ್ಣು ಹಾಳಾಗುತ್ತಿದೆ. ಹೀಗಾಗಿ, ಜೀವ ಸಂಕುಲದ ಉಳಿವಿಗೆ ಮಣ್ಣಿನ ಅಗತ್ಯತೆ ಕುರಿತು ದೇಶ-ವಿದೇಶಗಳಲ್ಲಿ ಜಾಗೃತಿ ಮೂಡಿಸುವ ಮಹತ್ವದ ಕಾರ್ಯವನ್ನು ಈಶ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್ ಅವರು ಮಾಡುತ್ತಿದ್ದಾರೆ. ಇದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ. ಮರೆತಿರುವ ಜವಾಬ್ದಾರಿಯನ್ನು ಇಡೀ ಜಗತ್ತಿಗೆ ಜ್ಞಾಪಿಸುವ ಪ್ರಯತ್ನವನ್ನು ಸದ್ಗುರು ಅವರು ಮಾಡುತ್ತಿದ್ದಾರೆ. ನೆಲ, ಜಲ ಸಂರಕ್ಷಣೆಯ ಭಾಗವಾಗಿ ಮಣ್ಣಿನ ಸಂರಕ್ಷಣೆಯು ಪ್ರತಿಯೊಬ್ಬರು ಜವಾಬ್ದಾರಿಯಾಗಿದೆ’ ಎಂದು ಸಚಿವರು ನುಡಿದರು.

ಇದನ್ನೂ ಓದಿ : ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲು

‘ಇತರ ಎಲ್ಲ ದೇಶಗಳಿಗಿಂತ ನಮ್ಮ ಭಾರತ ವಿಭಿನ್ನ ಮತ್ತು ವಿಶೇಷವಾದ ರಾಷ್ಟ್ರವಾಗಿದೆ. ಪಂಚಭೂತಗಳು ದೇವರು ಎಂದು ನಂಬಿರುವ ದೇಶ ನಮ್ಮದು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೂಡ ಮಣ್ಣಿನ ಫಲವತ್ತತೆ ಉಳಿಸಿಕೊಳ್ಳುವುದು ಹಾಗೂ ಸಾವಯವ ಕೃಷಿಗೆ ಉತ್ತೇಜನ ನೀಡುತ್ತಿದೆ’ ಎಂದು ಸಚಿವ ನಾಗೇಶ್ ಹೇಳಿದರು.

‘ನೆಲ, ಜಲ, ಪರಿಸರ ಸಂರಕ್ಷಣೆ, ಮಣ್ಣಿನ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನಗಳು ಆಗಬೇಕೆಂದು ಸದ್ಗುರು ಅಭಿಪ್ರಾಯಪಟ್ಟಿದ್ದರು. ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಮಣ್ಣಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ. ಮುಂಬರುವ ವರ್ಷಗಳಲ್ಲಿ ಪಠ್ಯ ಪುಸ್ತಕದಲ್ಲಿ ಮಣ್ಣಿನ ಸಂರಕ್ಷಣೆ ಕುರಿತು ಪಾಠವನ್ನು ಸೇರಿಸುವ ಪ್ರಯತ್ನ ಮಾಡಲಾಗುವುದು’ ಎಂದು ಸಚಿವ ನಾಗೇಶ್ ನುಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.