![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 31, 2020, 10:48 AM IST
ಕಮಲ್ ಪಂತ್
ಬೆಂಗಳೂರು: ರೂಪಾಂತರಿತ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೊಸ ಆದೇಶ ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಈ ಹಿಂದೆ ಇಂದು ಸಂಜೆ 6ರಿಂದ ಜ.1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಆದರೆ ಇದೀಗ ಈ ಆದೇಶವನ್ನು ಬದಲಾಯಿಸಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದಲೇ ಸೆ.144 ಜಾರಿಯಲ್ಲಿರಲಿದೆ ಎಂದು ಆದೇಶಿಸಿದ್ದಾರೆ.
ಬೆಂಗಳೂರಿನ 15 ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ರಾತ್ರಿ ಹತ್ತು ಗಂಟೆಯ ನಂತರ ನಗರದ ಮೇಲ್ಸೇತುವೆಗಳು ಬಂದ್ ಆಗಿರಲಿದೆ. ಪ್ರಮುಖ ರಸ್ತೆಗಳು ಬಂದ್ ಮಾಡಲಾಗಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಮಾರ್ಗೋಸ್ ರೋಡ್, ರೆಸಿಡೆನ್ಸಿ ರೋಡ್, ಇಂದಿರಾ ನಗರ ರೋಡ್, ಕಬ್ಬನ್ ಪಾರ್ಕ್ ರೋಡ್ ಸೇರಿ 15 ಕಡೆ ನಿರ್ಬಂಧ ಹೇರಲಾಗಿದೆ.
ಇದನ್ನೂ ಓದಿ:ಹೊಸ ವರ್ಷಾಚರಣೆಗೆ ನಿರ್ಬಂಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.144 ನಿಷೇಧಾಜ್ಞೆ ಜಾರಿ
ನಗರದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಇರಲಿದ್ದು, ಪೊಲೀಸ್ ಬಂದೋಬಸ್ತ್ ಕೂಡಾ ಹೆಚ್ಚಾಗಿರಲಿದೆ.
ಮಂಗಳೂರಿನಲ್ಲೂ ಇಂದು ಸಂಜೆ ಆರರಿಂದ ನಾಳೆ ಬೆಳಗ್ಗೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.