ಲೈಂಗಿಕ ದೌರ್ಜನ್ಯ: ಹೊಸ ಸಮಿತಿ ರಚನೆಗೆ ಸೂಚನೆ


Team Udayavani, Mar 21, 2017, 12:28 PM IST

vs-ugrappa.jpg

ಬೆಂಗಳೂರು: ನಗರದ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಚಿಸಲಾಗಿದ್ದ ಆಂತರಿಕ ದೂರು ಸಮಿತಿ ವರದಿ ತಿರಸ್ಕರಿಸಿರುವ ಮಹಿಳಾ ದೌರ್ಜನ್ಯ ತಡೆ ಸಮಿತಿ, ಹೊಸ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದೆ.

ಸೋಮವಾರ ಕಾಲೇ ಜಿಗೆ ಭೇಟಿ ನೀಡಿದ್ದ ಮಹಿಳಾ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ಮತ್ತು ಪದಾಧಿಕಾರಿಗಳು, ಆಂತರಿಕ ವರದಿ ಸಮಿತಿಯಲ್ಲಿ ಕಾಲೇಜಿಗೆ ಹೊರತಾದ ಸಿಬ್ಬಂದಿಯೂ ಇರಬೇಕಿತ್ತು. ಆದರೆ ಕಾಲೇಜಿನ ಸಿಬ್ಬಂದಿಯೇ ಸಮಿತಿಯಲ್ಲಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ತಯಾರಿಸಿದ್ದಾರೆ. ಈ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಕೂಡಲೇ ಹೊಸ ಸಮಿತಿ ರಚಿಸಿ, ಪಾರದರ್ಶಕವಾದ ವರದಿ ನೀಡುವಂತೆ ಸೂಚಿಸಿದರು.

ಈ ವೇಳೆ ಮಹಿಳಾ ದೌರ್ಜನ್ಯ ಸಮಿತಿ ಅಧ್ಯಕ್ಷರಿಗೆ ಮಾಹಿತಿ ನೀಡಿದ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಅಜಯ್‌ ನಾಗಭೂಷಣ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು. ಸಮಿತಿ ಪದಾಧಿಕಾರಿಗಳಾದ ಮೋಟಮ್ಮ, ಪ್ರಫುಲ್ಲಾ ಮಜುಂದಾರ್‌, ಡಾ. ವಸುಂಧರಾ ಭೂಪತಿ, ಶರಣಪ್ಪ ಮಟ್ಟೂರು, ಲೀಲಾ ಸಂಪಿಗೆ, ಚಂದ್ರಮೌಳಿ, ರೇಣುಕಾ, ಕೆ.ಎಸ್‌. ವಿಮಲಾ  ಉಪಸ್ಥಿತರಿದ್ದರು.

ಘಟನೆ ಹಿನ್ನೆಲೆ: ಮಹಾರಾಣಿ ಕಾಲೇಜಿನಲ್ಲಿ ಕೆಲ ತಿಂಗಳ ಹಿಂದೆ ನಡೆದ ನುಡಿಹಬ್ಬದ ವೇಳೆ ಕನ್ನಡದ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂಬ ಆರೋಪಕ ಕೇಳಿಬಂದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಹಿಳಾ ದೌರ್ಜನ್ಯ ತಡೆ ಸಮಿತಿ, ಆಂತರಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಮತ್ತು ಪ್ರಾಂಶುಪಾಲರಿಗೆ ಸೂಚಿಸಿತ್ತು.

ಮಹಾರಾಣಿ ಕಾಲೇಜಿನಲ್ಲಿ ರಾತ್ರಿವೇಳೆ ಸೈಕೊ ಉಪಟಳ 
ಬೆಂಗಳೂರು: ಕ
ಳೆದ ಏಳು ತಿಂಗಳ ಹಿಂದೆ ಮಹಾರಾಣಿ ಮಹಿಳಾ ಕಾಲೇಜು ಹಾಸ್ಟೆಲ್‌ನ ಟೆರೇಸ್‌ ಮೇಲೆ ಹುಡುಗಿಯರ ಒಳ ಉಡುಪು ಧರಿಸಿ ಓಡಾಡಿ ಆತಂಕ ಸೃಷ್ಟಿಸಿದ್ದ ಸೈಕೋ ಮತ್ತೆ ಪ್ರತ್ಯಕ್ಷವಾಗಿದ್ದಾನೆ. 

ಯುವತಿಯರ ಒಳ ಉಡುಪು ಧರಿಸಿ ಓಡಾಡುವ ವಿಕೃತ ಸೈಕೋನ ವಿಡಿಯೋ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಕಷ್ಟು ವೈರಲ್‌ ಆಗಿದೆ. ಏಕಾಏಕಿ ಹಾಸ್ಟೆಲ್‌ ಟೆರೇಸ್‌ ಏರುವ ಸೈಕೋನನ್ನು ಹಿಡಿಯಲು ಅಲ್ಲಿನ ಸಿಬ್ಬಂದಿಯೊಬ್ಬರು ಕೋಲು ಹಿಡಿದುಕೊಂಡು ಓಡಾಡಿಸಿಕೊಂಡು ಬಂದಿದ್ದಾರೆ. ಅವರ ಕೈಗೆ ಸಿಗದೆ ಚಂಗನೇ ಹಾರುವ ಸೈಕೋ, ಕಿಟಕಿ ಛಾವಣಿಯ ಮೂಲಕ ಇಳಿದು ಪರಾರಿಯಾಗಿದ್ದಾನೆ.

ಒಮ್ಮೆ ಹಾಸ್ಟೆಲ್‌ಗೆ ಭೇಟಿ ನೀಡಿದ ನಂತರ ಪುನ; ಮೂರ್ನಾಲ್ಕು ತಿಂಗಳುಗಳ ಕಾಲ ಅತ್ತ ಕಡೆ ಸುಳಿಯುವುದಿಲ್ಲ. ರಾತ್ರಿ 12ರಿಂದ 2ಗಂಟೆ ವೇಳೆಯಲ್ಲಿ ನಿಧಾನಕ್ಕೆ ಟೆರೇಸ್‌ ಹತ್ತುವ ಈತ, ಹುಡುಗಿಯರ ಒಳ ಉಡುಪುಗಳನ್ನು ಧರಿಸಿ ವಿಕೃತ ಆನಂದ ಅನುಭವಿಸಿ ಓಡಾಡುತ್ತಾನೆ. ಪುನ: ಹೊರಟು ಹೋಗುತ್ತಾನೆ.

ಮತ್ತೂಂದೆಡೆ ಕಳೆದ ಸೆಪ್ಟೆಂಬರ್‌ 19ರಂದು ಸೈಕೋವಿನ ಬಗ್ಗೆ ಕಾಲೇಜು ಆಡಳಿತ ಮಂಡಳಿ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದ್ದರೂ, ಇದುವರೆಗೂ ಆತನ ಬಂಧನವಾಗಿಲ್ಲ. ಕಳೆದ ವರ್ಷ ದಾಖಲಾದ ದೂರಿನ ಅನ್ವಯ ಆರೋಪಿ ಬಂಧನಕ್ಕೆ ಹಲವು ಬಾರಿ ಕಾರ್ಯಾಚರಣೆ ರೂಪಿಸಲಾಗಿತ್ತು. ಆದರೆ ಅವನ ಸುಳಿವು  ಪತ್ತೆಯಾಗಿಲ್ಲ. ಇತ್ತೀಚೆಗೆ ಮತ್ತೆ ಕಾಣಿಸಿಕೊಂಡಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.