![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 25, 2018, 11:10 AM IST
ಬೆಂಗಳೂರು: ನಟ ದುನಿಯಾ ವಿಜಯ್ ಮತ್ತು ಅವರ ಎರಡನೇ ಪತ್ನಿ ಕೀರ್ತಿ ಗೌಡ ಮತ್ತಿತರರು ತನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ದುನಿಯಾ ವಿಜಯ್ ಪುತ್ರಿ ಮೋನಿಕಾ, ಬುಧವಾರ ಮಧ್ಯಾಹ್ನ ಆಸ್ಪತ್ರೆಯಿಂದ ಡಿಸಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಮೋನಿಕಾ, “ನಾನು ಸುಳ್ಳು ದೂರು ನೀಡಿಲ್ಲ. ನನ್ನ ಮೇಲೆ ಹಲ್ಲೆ ಆಗಿರುವ ಕಾರಣ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೇನೆ. ನಾಲ್ಕು ಜನ ಸೇರಿ ನನ್ನನ್ನು ಹೊಡೆದರು. ಕೀರ್ತಿ ವಿಚಾರವಾಗಿಯೇ ಗಲಾಟೆ ನಡೆದಿರುವುದು’ ಎಂದಿರುವ ಮೋನಿಕಾ, “ನನಗೆ ಮೊದಲಿನಿಂದಲೂ ಕೀರ್ತಿ ಪರ ಮಾತನಾಡು, ನಿಮ್ಮ ಅಮ್ಮನ ವಿರುದ್ಧ ಕಂಪ್ಲೇಂಟ್ ಕೊಡು ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದರು. ನಾನು ಅದಕ್ಕೆ ಒಪ್ಪದಿದ್ದಾಗ ಎಲ್ಲರೂ ಸೇರಿ ನನ್ನ ಮೇಲೆ ಹಲ್ಲೆ ಮಾಡಿದರು,’ ಎಂದರು.
“ಆಮೇಲೆ ನನನ್ನು ಮನೆಯಿಂದ ಹೊರಗೆ ಹಾಕಿ ಬಾಗಿಲು ಹಾಕಿದ್ರು. ಆಗ ನನ್ನ ಕೋಪವನ್ನು ಬಾಗಿಲ ಮೇಲೆ ತೋರಿಸಿದೆ. ಅವರು ಬೈದ ಮಾತನ್ನೆ ತಿರುಗಿಸಿ ಅವರಿಗೆ ಬೈದಿದ್ದೇನೆ. ಅದನ್ನು ಹೊರತುಪಡಿಸಿದರೆ, ನಾನು ಯಾರ ಮೇಲೂ ಹಲ್ಲೆ ಮಾಡಿಲ್ಲ. ನನ್ನನ್ನು ಮನೆಯಿಂದ ಆಚೆ ಹಾಕಲು ಎಲ್ಲರೂ ಸೇರಿ ಈ ರೀತಿ ಪ್ಲಾನ್ ಮಾಡಿದ್ದಾರೆ’ ಎಂದು ಮೋನಿಕಾ ತನ್ನ ತಂದೆ ದುನಿಯಾ ವಿಜಯ್ ಮತ್ತು ಕೀರ್ತಿ ಗೌಡ ವಿರುದ್ಧ ಹೇಳಿಕೆ ನೀಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.