ಸಿದ್ಧಗಂಗಾ ಶ್ರೀಗಳಿಗೆ ಹೊಸ ಸ್ಟೆಂಟ್ ಅಳವಡಿಕೆ
Team Udayavani, May 13, 2017, 12:08 AM IST
ಬೆಂಗಳೂರು: ತೀವ್ರ ಜ್ವರ ಹಾಗೂ ಯಕೃತ್ತಿನ ಸೋಂಕಿನಿಂದ ಬಳಲುತ್ತಿರುವ ತುಮಕೂರಿನ ಸಿದ್ಧಗಂಗಾ ಮಠಾಧೀಶರಾದ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಶುಕ್ರವಾರ ದಾಖಲಿಸಲಾಗಿದ್ದು, ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸ್ವಾಮೀಜಿ ಅವರಿಗೆ ಬುಧವಾರ ರಾತ್ರಿ ಜ್ವರ ಹಾಗೂ ನಿಶ್ಶಕ್ತಿ ಕಾಣಿಸಿಕೊಂಡಿದ್ದರಿಂದ ವೈದ್ಯರ ತಂಡ ಚಿಕಿತ್ಸೆ ಆರಂಭಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬೆಳಗ್ಗೆ 10 ಗಂಟೆ ವೇಳೆಗೆ ಸ್ವಾಮೀಜಿ ಅವರನ್ನು ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅದರಂತೆ ಆಸ್ಪತ್ರೆಯ ತಜ್ಞರ ತಂಡ ಚಿಕಿತ್ಸೆ ಆರಂಭಿಸಿದೆ.
ಸ್ವಾಮೀಜಿ ಅವರು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಕೃತ್ತಿನ ಸೋಂಕು ಹಾಗೂ ಕೆಲ ಅಡಚಣೆ ಉಂಟಾಗಿದ್ದರಿಂದ ಸ್ವಾಮೀಜಿಯವರಿಗೆ ಜ್ವರ ಕಾಣಿಸಿಕೊಂಡಿತ್ತು. ಜತೆಗೆ ವಯೋಸಹಜ ಸಮಸ್ಯೆಗಳಿಂದಲೂ ಬಳಲುತ್ತಿರುವ ಸ್ವಾಮೀಜಿ ಅವರಿಗೆ ಮೂತ್ರನಾಳದ ಸೋಂಕು ಕೂಡ ಬಾಧಿಸುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ ಎಂದು ರವೀಂದ್ರನಾಥ್ ತಿಳಿಸಿದರು. ಸ್ವಾಮೀಜಿ ಅವರಿಗೆ ಈ ಹಿಂದೆ ಪಿತ್ತನಾಳದಲ್ಲಿ ಅಳವಡಿಸಲಾಗಿದ್ದ ಸ್ಟೆಂಟ್ನಿಂದಾಗಿ ತುಸು ಅಡಚಣೆ ಉಂಟಾಗಿತ್ತು. ಅದನ್ನು ಸರಿಪಡಿಸಲಾಗಿದ್ದು, ಮತ್ತೂಂದು ಲೋಹದ ಸ್ಟೆಂಟ್ ಅಳವಡಿಸಲಾಗಿದೆ. ಸ್ವಾಮೀಜಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.
ಸ್ವಾಮೀಜಿಗಳು ಆಸ್ಪತ್ರೆಗಳಿಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಟ ಗಣೇಶ್, ಪತ್ನಿ ಶಿಲ್ಪಾ ಗಣೇಶ್ ಸೇರಿದಂತೆ ಇತರರೂ ಯೋಗಕ್ಷೇಮ ವಿಚಾರಿಸಿದರು. ಶ್ರೀಗಳ ಆರೋಗ್ಯ ವಿಚಾರಿಸಿದ ಎಚ್.ಡಿ. ದೇವೇಗೌಡರು, ಸ್ವಾಮೀಜಿ ಅನಾರೋಗ್ಯದ ವಿಚಾರ ತಿಳಿದು ತುಸು ಗಾಬರಿಯಾಗಿತ್ತು. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದೆ. ಅವರಲ್ಲಿ ಇನ್ನೂ ಶಕ್ತಿ, ಚೈತನ್ಯವಿದೆ. ಭಗವಂತ ಅವರಿಗೆ ಹೆಚ್ಚು ಕಾಲ ಬಾಳುವ ಶಕ್ತಿ ನೀಡಲಿ. ಮುಂದಿನ ದಿನಗಳಲ್ಲಿ ನಮಗೆಲ್ಲಾ ಒಳ್ಳೆಯ ದಾರಿಯಲ್ಲಿ ನಡೆಯಲು ಆಶೀರ್ವದಿಸಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.