![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 20, 2019, 1:31 PM IST
ಬೆಂಗಳೂರು: ಮಧ್ಯಂತರ ಚುನಾವಣೆ ಶೀಘ್ರದಲ್ಲಿ ಬರುವುದು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅನರ್ಹ ಶಾಸಕ ಎಸ್ ಟಿ ಸೋಮಶೇಖರ್ ಸಿದ್ದರಾಮಯ್ಯ ಏನೂ ಚುನಾವಣಾ ಆಯೋಗದ ಏಜೆಂಟಾ ಎಂದು ಹರಿಹಾಯ್ದಿದ್ದಾರೆ.
ದೇವೇಗೌಡರು ಮತ್ತು ಸಿದ್ದರಾಮಯ್ಯ ಏನೇ ಹೇಳಿದರೂ ಅಧಿಕೃತವಾಗಿ ಚುನಾವಣೆ ಬಗ್ಗೆ ಮಾಹಿತಿ ನೀಡುವುದು ಚುನಾವಣಾ ಆಯೋಗ. ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾಂಗ್ರೆಸ್ ನವರಿಗೆ ಇದೀಗ ಮಾಡಲು ಕೆಲಸವಿಲ್ಲ. ಆದುದರಿಂದ ಬೆಳಗ್ಗೆ ಎದ್ದ ಕೂಡಲೇ ನಮ್ಮ ಬಗ್ಗೆ ಆಲೋಚನೆ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ದಿನೇಶ್ ಗುಂಡೂರಾವ್ ಅನರ್ಹ ಶಾಸಕರು ಹುಲಿಗಳಂತೆ ಇದ್ದವರು ಈಗ ಭಿಕ್ಷೆ ಬೇಡುತ್ತಿದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಭಿಕ್ಷೆ ಬೇಡುತ್ತಿರುವುದು ನಿಜ. ಕ್ಷೇತ್ರದ ಅಭಿವೃದ್ಧಿಗಾಗಿ ಮಾತ್ರ ನಾವು ಭಿಕ್ಷೆ ಕೇಳುತ್ತಿದ್ದೇವೆ. ಹುಲಿ ಎಲ್ಲಿದ್ದರೂ ಹುಲಿಯೇ, ಅದು ಬದಲಾಗುವುದಿಲ್ಲಾ ಎಂದು ವಾಗ್ದಾಳಿ ನಡೆಸಿದರು.
ಯೋಗೀಶ್ವರ್ ಅವರಿಗೂ ನಮಗೂ ಸಂಬಂಧ ಇಲ್ಲ. ಅಶ್ವತ್ಥನಾರಾಯಣ ಅವರ ಜೊತೆ ಮಾತುಕತೆಯೂ ನಡೆದಿಲ್ಲ. ನಮ್ಮ ಪ್ರಕರಣ ಸದ್ಯದಲ್ಲೇ ವಿಚಾರಣೆಗೆ ಬರುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.